ಲೀಟರ್‌ ಹಾಲಿಗೆ 2 ರೂ. ಪ್ರೋತ್ಸಾಹ ಧನ ಹೆಚ್ಚಳ


Team Udayavani, Dec 31, 2019, 3:06 AM IST

litre-haal

ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಿಂದ ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ ಸಿಗುತ್ತಿದೆ. 2020ರ ಜನವರಿ 1ರಿಂದ ಪ್ರತಿ ಲೀಟರ್‌ ಹಾಲಿಗೆ 2ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುತ್ತಿರುವುದಾಗಿ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.

ಬೆಂಗಳೂರು ಡೈರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬಮೂಲ್‌ ಹಾಲು ಪೂರೈಕೆ ಮಾಡುತ್ತಿದ್ದು, ಉತ್ಪಾದಕರಿಗೆ ಕಳೆದ ಸೆಪ್ಟೆಂಬರ್‌ನಿಂದ ಪ್ರತಿ ಲೀಟರ್‌ಗೆ 26 ರೂ ನೀಡುತ್ತಾ ಬಂದಿದೆ. 2020ರ ಜ.1 ರಿಂದ ಪ್ರತಿ ಲೀಟರ್‌ ಹಾಲಿಗೆ (3.5 ಫ್ಯಾಟ್‌ ಮತ್ತು 8.5 ಎಸ್‌.ಎನ್‌.ಎಫ್‌) 2 ರೂ. ಹೆಚ್ಚಳ ಮಾಡಿ ಹಾಲಿ ನೀಡುತ್ತಿರುವ ದರ 26 ರೂ ರಿಂದ 28 ರೂಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಸುಗಳ ಆಹಾರದ ಬೇಡಿಕೆ ಹೆಚ್ಚಾಗುತ್ತಿದೆ. ಮಳೆೆಯ ಕೊರತೆಯಿಂದಾಗಿ ಒಣ ಮತ್ತು ಹಸಿರುವ ಮೇವು ಹಾಗೂ ನೀರಿನ ಕೊರತೆ ಹೆಚ್ಚಾಗಿದೆ. ಮುಂಬರುವ ಬೇಸಿಗೆಯಲ್ಲಿ ಹೈನುಗಾರಿಕಾ ಕೃಷಿಕರಿಗೆ ಹೆಚ್ಚಿನ ಸವಾಲು ಎದುರಾಗಲಿದ್ದು, ಹಸುಗಳ ನಿರ್ವಹಣೆ ದುಬಾರಿಯಾಗಲಿದೆ. ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ರೈತರ ಹಿತದೃಷ್ಟಿಯಿಂದ ಹಾಲು ಖರೀದಿ ದರವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಹಾಲಿನ ದರ ಏರಿಕೆಗೆ ಪ್ರಸ್ತಾವನೆ: ಸರ್ಕಾರ ಕಳೆದ ಮೂರು ವರ್ಷಗಳಿಂದ ಹಾಲಿನ ಬೆಲೆ ಏರಿಕೆ ಮಾಡಿಲ್ಲ. ಹೀಗಾಗಿ, ಪ್ರತಿ ಲೀಟರ್‌ ಮೇಲೆ ಕನಿಷ್ಟ ಮೂರು ರೂ. ಬೆಲೆ ಏರಿಕೆ ಮಾಡಲು ಹಾಲು ಉತ್ಪಾದಕರ ಒಕ್ಕೂಟಗಳು ಸರ್ಕಾರಕ್ಕೆ ಮನವಿ ಮಾಡಿವೆ. ಈ ಕುರಿತು ಪಶು ಸಂಗೋಪನೆ ಇಲಾಖೆ, ಸಹಕಾರ ಇಲಾಖೆ ಮತ್ತು ಕೆಎಂಎಫ್ ಸರ್ಕಾರದ ಜತೆ ಚರ್ಚೆ ನಡೆಸಿ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಒಕ್ಕೂಟಗಳು ಪತ್ರ ಬರೆದಿವೆ. ಇನ್ನೂ ಸರ್ಕಾರ ಏರಿಕೆ ಮಾಡುವ ದರದಲ್ಲಿ ಶೇ.75ರಷ್ಟು ರೈತರಿಗೆ ಮತ್ತು ಶೇ.25 ಒಕ್ಕೂಟದ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸುವುದಾಗಿ ಒಕ್ಕೂಟದ ಅಧ್ಯಕ್ಷರು ತಿಳಿಸಿದರು.

ನಕಲಿ ನಿಯಂತ್ರಣಕ್ಕೆ ಸಿಬ್ಬಂದಿ ಬೇಕು: ನಗರದಲ್ಲಿ ನಂದಿನಿ ಹೆಸರನ್ನು ಬಳಸಿ ನಕಲಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡಲಾಗುತ್ತಿದೆ. ಇದರಿಂದಾಗಿ ಕೆಎಂಎಫ್ ಉತ್ಪನ್ನಗಳ ಬ್ರಾಂಡ್‌ ಮೌಲ್ಯ ದುರ್ಬಳಕೆಯಾಗುತಿದ್ದು, ಕೆಎಂಎಫ್ ಉತ್ಪನ್ನಗಳ ಗ್ರಾಹಕರು ಮೋಸಕ್ಕೆ ಬಲಿಯಾಗುತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಹೆಚ್ಚಿನ ವಿಜಿಲೆಂನ್ಸ್‌ ತಂಡಗಳನ್ನು ನಿಯೋಜನೆ ಮಾಡಬೇಕು. ಸ್ಥಳೀಯ ಸಂಸ್ಥೆಗಳು, ಆಹಾರ ಇಲಾಖೆ ಮತ್ತು ಆರೋಗ್ಯ ಇಲಾಖೆ ನಕಲಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹೋಗಲಾಡಿಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.

ನಕಲಿ ತುಪ್ಪ ಮಾರಾಟ – ಎಫ್ಐಆರ್‌: ಇತ್ತೀಚೆಗೆ ಕೆಎಂಎಫ್ ವಿಜಿಲೆನ್ಸ್‌ ತಂಡದಿಂದ ನಗರದ ಹಲವು ಹಾಲು ಉತ್ಪನ್ನಗಳ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಎರಡು ಮಳಿಗೆಗಳಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು, ಈ ಮಳಿಗೆಯ ಮಾಲೀಕರ ವಿರುದ್ದ ಎಫ್ಐಆರ್‌ ದಾಖಲಿಸಲಾಗಿದೆ.

ಬೇರೆ ಉತ್ಪನ್ನ ಮಾರಿದರೆ ಪರವಾನಗಿ ರದ್ದು: ಕೆಎಂಎಫ್ನಿಂದ ಕೆಲ ಖಾಸಗಿ ಫ್ರಾಂಚೈಸಿಗಳಿಗೆ ನಂದಿನಿ ಉತ್ಪನ್ನಗಳನ್ನು ಮಾರಲು ಅನುಮತಿ ನೀಡಲಾಗಿದ್ದು, ಈ ಮಳಿಗೆಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ ಉತ್ಪನ್ನಗಳನ್ನು ಹೊರತುಪಡಿಸಿ ಬೇರೆ ಖಾಸಗಿ ಕಂಪನಿಗಳ ಉತ್ಪನ್ನ ಮಾರಾಟ ಮಾಡುವುದು ಕಂಡು ಬಂದರೆ ಮಾಲಿಕತ್ವ ಮತ್ತು ಪರವಾನಗಿ ರದ್ದು ಪಡಿಸುವು ದಾಗಿ ಬಮೂಲ್‌ ಅಧ್ಯಕ್ಷ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.