ಇಂದಿರಾ ಕ್ಯಾಂಟೀನ್ಗೆ ಬೀಗ
Team Udayavani, Jul 9, 2018, 12:12 PM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ನ ತ್ಯಾಜ್ಯ ನೀರನ್ನು ಚರಂಡಿ ಹರಿಸುತ್ತಿರುವುದನ್ನು ಖಂಡಿಸಿದ ಸ್ಥಳೀಯರು, ಕ್ಯಾಂಟೀನ್ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ಬಿಳೇಕಹಳ್ಳಿ ವಾರ್ಡ್ನಲ್ಲಿ ನಡೆದಿದೆ.
ಬೊಮ್ಮನಹಳ್ಳಿ ವಲಯದ ಬಿಳೇಕಹಳ್ಳಿಯ ಇಂದಿರಾ ಕ್ಯಾಂಟೀನ್ ಒಳಚರಂಡಿ ಹಾಗೂ ತ್ಯಾಜ್ಯ ನೀರಿನ ಪೈಪುಗಳನ್ನು ನೇರವಾಗಿ ಚರಂಡಿಗೆ ಸಂಪರ್ಕಿಸಲಾಗಿದೆ. ಇದರಿಂದಾಗಿ ಸುತ್ತಮುತ್ತ ದುರ್ವಾಸನೆ ಹರಡಿ ಸಾರ್ವಜನಿಕರು ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಾನುವಾರ ಕ್ಯಾಂಟೀನ್ಗೆ ಬೀಗ ಹಾಕಿ ಪ್ರತಿಭಟಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯರಾದ ಗೋಪಾಲ್, ಕ್ಯಾಂಟೀನ್ನ ತ್ಯಾಜ್ಯ ನೀರು ಹಾಗೂ ಒಳಚರಂಡಿ ನೀರನ್ನು ನೇರವಾಗಿ ಚರಂಡಿಗೆ ಹರಿಸುತ್ತಿದ್ದಾರೆ. ಇದರಿಂದ ದುರ್ವಾಸನೆ ಹರಡುತ್ತಿದೆ. ಈ ಕುರಿತು ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿದೆ ಎಂದರು.
ಬೆಳಗ್ಗೆಯಿಂದಲೇ ಕ್ಯಾಂಟೀನ್ಗೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಭಾನುವಾರ ಕ್ಯಾಂಟೀನ್ನಲ್ಲಿ ತಿಂಡಿ-ಊಟ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಆದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಸೋಮವಾರವೂ ಪ್ರತಿಭಟನೆ ಮುಂದುವರಿಸಲು ಸ್ಥಳೀಯರು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.