![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Apr 2, 2017, 11:46 AM IST
ಬೆಂಗಳೂರು: ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಕ್ಕೆ 1,235.52 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನಾದರೂ ರಾಜ್ಯ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಲು ಕ್ರಿಯಾಯೋಜನೆ ರೂಪಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಹಿಂದೆಂದೂ ಕಾಣದ ಬರ ಪರಿಸ್ಥಿತಿ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರದ ನೆರವು ಬಿಡುಗಡೆಯಾಗಿದ್ದು, ಸರ್ಕಾರ ಕ್ರಿಯಾಯೋಜನೆ ರೂಪಿಸುವಲ್ಲಿ ವಿಳಂಬ ಮಾಡಿದರೆ ಮತ್ತು ಪರಿಹಾರ ಕಾರ್ಯಗಳನ್ನು ಸಮ ರೋಪಾದಿಯಲ್ಲಿ ಕೈಗೊಳ್ಳದಿದ್ದರೆ ಅದು ನಿರ್ಲಕ್ಷ್ಯದ ಪರ ಮಾವಯಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡದೆ ಸರ್ಕಾರ ಚುರುಕಿನಿಂದ ಕೆಲಸ ನಿರ್ವಹಿಸಬೇಕೆಂದು ಆಗ್ರಹಿ ಸಿದ್ದಾರೆ.ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.