ಚರ್ಚ್ಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಒತ್ತಾಯ
Team Udayavani, Apr 24, 2019, 3:40 AM IST
ಬೆಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಉಗ್ರರ ದುಷ್ಕೃತ್ಯದಿಂದ ಮೃತಪಟ್ಟ ನಾಗರಿಕರಿಗೆ ಇಂಪ್ಯಾಕ್ಟ್ ಇಂಡಿಯಾ, ಭೀಮಾ ಫೆರ್ವಾಡ್-ಕೆ ಮತ್ತು ಕರ್ನಾಟಕ ಕ್ರೈಸ್ತ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳವಾರ ಪುರಭವನದ ಮುಂದೆ ಮೇಣದ ಬತ್ತಿಯನ್ನು ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
“ವಿಶ್ವದ ಯಾವುದೇ ಮೂಲೆಯಲ್ಲಿ ಇಂತಹ ಕೃತ್ಯಗಳು ನಡೆಯಬಾರದು ಮನುಷ್ಯರನ್ನು ಕೊಂದು ಸಾಧನೆ ಮಾಡಿರುವಂತೆ ಉಗ್ರಸಂಘಟನೆಗಳು ಬಿಂಬಿಸಿಕೊಳ್ಳುತ್ತಿವೆ. ಈ ಬೆಳವಣಿಗೆಯನ್ನು ಕ್ರೈಸ್ತ ಸಮುದಾಯ ಒಕ್ಕೊರಲಿನಿಂದ ಖಂಡಿಸುತ್ತದೆ. ಇದು ದುರಂತವಲ್ಲದೆ ಮತ್ತೇನು’ ಎಂದು ಕರ್ನಾಟಕ ಕ್ರೈಸ್ತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮರಿಸ್ವಾಮಿ ವಿಷಾದ ವ್ಯಕ್ತಪಡಿಸಿದರು.
ಕ್ರೈಸ್ತರು ಶಾಂತಿ ಪ್ರಿಯರು ಈಸ್ಟರ್ ದಿನಕೂಟದಲ್ಲಿ ದುರಂತ ಸಂಭವಿಸಿ, ನೂರಾರು ಜನ ಅಮಾಯಕರು ಮೃತಪಟ್ಟಿದ್ದಾರೆ. ಇದರಿಂದ ನಾವು ಎಚ್ಚೆತ್ತುಕೊಳ್ಳಬೇಕಿದೆ. ವಿಶ್ವದ ಯಾವುದೇ ಭಾಗದಲ್ಲಿ ಯಾವುದೇ ಧರ್ಮದ ಜನರ ಮೇಲೆ ಇಂತಹ ದಾಳಿಗಳು ನಡೆಯಬಾರದು ಎಂದು ಹೇಳಿದರು.
ಇಂಪ್ಯಾಕ್ಟ್ ಇಂಡಿಯಾದ ಸಂಸ್ಥಾಪಕ ಡಾ. ಸಂಪತ್, ಕರ್ನಾಟಕದಲ್ಲಿನ ಚರ್ಚ್ಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಧರ್ಮಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇಲ್ಲಿನ ರಾಜ್ಯದ ಪ್ರಮುಖ ಚರ್ಚ್ಗಳಲ್ಲಿ ವಾರಾಂತ್ಯದ ದಿನಗಳಲ್ಲಿ ಸಾವಿರಾರು ಜನ ಪ್ರಾರ್ಥನೆ ಮಾಡಲು ಸೇರುತ್ತಾರೆ.
ಪ್ರಾರ್ಥನೆ ಮಾಡುವ ನೆಪದಲ್ಲಿ ಯಾರಾದರೂ ಬಂದು ಬಾಂಬ್ ದಾಳಿ ನಡೆಸಿದರೆ ಗೊತ್ತಾಗುವುದಿಲ್ಲ ಎಂದರು. ಈ ದಾಳಿ ನಮಗೆ ಎಚ್ಚರಿಕೆಯ ಗಂಟೆಯಾಗಬೇಕು. ಇಲ್ಲಿನ ಚರ್ಚ್ಗಳಲ್ಲಿ ಮೆಟಲ್ ಡಿಟೆಕ್ಟರ್ ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.