ಕಾಂಗ್ರೆಸ್‌ ರೈತ ವಿರೋಧಿ ಎನ್ನಲು ನೈತಿಕತೆ ಇದೆಯೇ?


Team Udayavani, Feb 12, 2018, 1:13 PM IST

ramreddy.jpg

ಬೆಂಗಳೂರು: “ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಧರಿಸಿಕೊಳ್ಳುವ ಹಸಿರು ಶಾಲಿನಲ್ಲಿ ಮೆತ್ತಿದ ರೈತರ ರಕ್ತದ ಕಲೆ ಇನ್ನೂ ಮಾಸಿಲ್ಲ. ಹೀಗಿರುವಾಗ, ಕಾಂಗ್ರೆಸ್‌ ರೈತ ವಿರೋಧಿ ಎನ್ನಲು ತಮಗೆ ನೈತಿಕತೆ ಇದೆಯೇ?’ ಗೃಹ ಸಚಿವ ರಾಮಲಿಂಗಾರೆಡ್ಡಿ  ಯಡಿಯೂರಪ್ಪನವರಿಗೆ ಪ್ರಶ್ನಿಸಿದ್ದಾರೆ.

ರೈತರ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ನೀವು (ಯಡಿಯೂರಪ್ಪ) ಮುಖ್ಯಮಂತ್ರಿಯಾದ ಮೂರೇ ದಿನಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ನಡೆಸಿ, ಇಬ್ಬರು ಅನ್ನದಾತರ ಸಾವಿಗೆ ಅಂದಿನ ನಿಮ್ಮ ಸರ್ಕಾರ ಕಾರಣವಾಯಿತು.

ನೀವು ಧರಿಸಿಕೊಳ್ಳುವ ಹಸಿರು ಶಾಲಿನಲ್ಲಿ ಮೆತ್ತಿರುವ ಹುತಾತ್ಮ ರೈತರಾದ ಹಾವೇರಿಯ ಸಿದ್ದಲಿಂಗಪ್ಪ ಚೂರಿ ಹಾಗೂ ಪುಟ್ಟಪ್ಪ ಹೇಮಪ್ಪ ಹೊನ್ನತ್ತಿಯ ರಕ್ತದ ಕಲೆ ಮಾಸಿದೆಯೇ ಎಂಬುದನ್ನು ವಿಮರ್ಶೆ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.  

“ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸಾರ್ವಜನಿಕ ವೇದಿಕೆಗಳಲ್ಲಿ ಆರೋಪಿಸುತ್ತಿರುವುದು ಹಾಗೂ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಸಿದ್ಧಪಡಿಸಿದ 2 ನಿಮಿಷದ ವೀಡಿಯೊ ತುಣಕುಗಳು  ವಾಟ್ಸ್‌ ಆ್ಯಪ್‌ ಗ್ರೂಪ್‌ಗ್ಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ರಾಮಲಿಂಗಾರೆಡ್ಡಿ, “ಹೀಗೆ ಆರೋಪ ಮಾಡುವ ನೈತಿಕತೆಯೂ ಬಿಜೆಪಿಗಿಲ್ಲ’ ಎಂದು ತಿಳಿಸಿದರು. 

“ನಮ್ಮ ಸರ್ಕಾರ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ ಸಾಲ ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ನಿಮ್ಮ ಕೇಂದ್ರ ಸರ್ಕಾರ ಹೇಳಿರುವುದನ್ನು ಕರ್ನಾಟಕದ ರೈತರು ಮರೆತಿಲ್ಲ’ ಎಂದು ಟೀಕಿಸಿದರು. 

“ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ 70 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದನ್ನು ನೀವು ಮರೆತಿದ್ದೀರಿ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ದೇಶದ ಕೆಲವು ಕೈಗಾರಿಕೋದ್ಯಮಿಗಳಿಗೆ 1.30 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಮೋದಿ, ರೈತರ ಸಾಲ ಯಾಕೆ ಮನ್ನಾ ಮಾಡಿಲ್ಲ ಎಂದು ನೀವೇ ಮೋದಿ ಅವರನ್ನು ಕೇಳಿ ರಾಜ್ಯದ ರೈತರಿಗೆ ಉತ್ತರಿಸಬೇಕು. 

ರೈತರ ಬಗ್ಗೆ, ರೈತರ ಸಮಸ್ಯೆ ಬಗ್ಗೆ ಚುನಾವಣಾ ಹೊಸ್ತಿಲಲ್ಲಿ ಮೊಸಳೆ ಕಣ್ಣೀರು ಸುರಿಸುವುದನ್ನು ಬಿಟ್ಟು, ಮಹದಾಯಿ ಹಾಗೂ ರೈತರ ಸಾಲ ಮನ್ನಾ ಮಾಡಲು ರಾಜ್ಯದ ಬಿಜೆಪಿ ನಾಯಕರು ಪ್ರಧಾನಿ ಮೋದಿ ಮನೆ ಎದುರು ಧರಣಿ ನಡೆಸಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ರೈತರ ಕುರಿತು ನಮ್ಮ ಸರ್ಕಾರಕ್ಕಿರುವ ಬದ§ತೆ ಪ್ರಶ್ನಿಸಲು ನಿಮಗೆ ಯಾವ ಅರ್ಹತೆಯೂ ಇಲ್ಲ ಎಂದು ದೂರಿದರು.

ಮಲತಾಯಿ ಧೋರಣೆ ಮರೆತಿಲ್ಲ: ಮಹಾರಾಷ್ಟ್ರದಲ್ಲಿ ಬರಗಾಲದ ಪರಿಹಾರ ನಿಧಿಗೆ ಮೋದಿ ಅವರು 8,500 ಕೋಟಿ ನೀಡಿದ್ದಾರೆ. ಕರ್ನಾಟಕದಲ್ಲಿ ಸತತ 4 ವರ್ಷಗಳಿಂದ ಭೀಕರ ಬರಗಾಲ ಇದ್ದರೂ ಮೋದಿ ಅವರು ಕೊಟ್ಟಿದ್ದು ಬರೀ 1,800 ಕೋಟಿ ರೂ. ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಮರೆತಿಲ್ಲ.

ಕಾವೇರಿ ಸಮಸ್ಯೆ ಬಂದಾಗ ಸರ್ವ ಪಕ್ಷ ಸಭೆ ಬಹಿಷ್ಕರಿಸಿ ಬಿಜೆಪಿ ರೈತರ ಸಮಸ್ಯೆ ಕುರಿತು ನಿರ್ಲಕ್ಷತನ ಮೆರೆದಿದ್ದನ್ನು ರೈತರು ಕಂಡಿದ್ದಾರೆ. ಮಹದಾಯಿ ಕುರಿತು ಗೋವಾ ಸಿಎಂ ಮನೋಹರ್‌ ಪರಿಕ್ಕರ್‌ ಬಳಿ ನಿಮ್ಮ ಹೆಸರಿಗೆ ಪತ್ರ ಬರೆಸಿ ನಾಟಕ ಮಾಡಿದ ನೀವು ಬಳಿಕ ಅದನ್ನು ಓದಲು ಹುಬ್ಬಳ್ಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥರನ್ನು ಕರೆಸಿ ಡೊಂಬರಾಟ ನಡೆಸಿದ್ದನ್ನೂ ಜನ ಮರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.