Bengalur Kambala ನೋಡಲು ಪ್ರವೇಶ ಶುಲ್ಕವಿದೆಯೇ? ಟಿಕೆಟ್ ಕಾಯ್ದಿರಿಸಬೇಕೆ? ಇಲ್ಲಿದೆ ಮಾಹಿತಿ
Team Udayavani, Nov 21, 2023, 11:38 AM IST
ಮಣಿಪಾಲ/ಬೆಂಗಳೂರು: ಇದೇ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವು ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿವೆ. ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ಸಾಂಸ್ಕೃತಿಕ ಸೊಗಡು ಅನಾವರಣವಾಗಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಐತಿಹಾಸಿಕ ಕಂಬಳ ಕೂಟಕ್ಕೆ ಬೆಂಗಳೂರು ಸಜ್ಜಾಗಿದೆ.
ನ.23ರಂದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು ರಾಜಧಾನಿಯೆಡೆಗೆ ಪ್ರಯಾಣ ಬೆಳೆಸಲಿದೆ. ಉಪ್ಪಿನಂಗಡಿಯಿಂದ ಹೊರಟು ಹಾಸನದಲ್ಲಿ ವಿರಾಮ ತೆಗೆದುಕೊಂಡು ಬಳಿಕ ನೆಲಮಂಗಲ ಮೂಲಕವಾಗಿ ಕೋಣಗಳು ಮತ್ತು ಯಜಮಾನ ಸೇರಿ ಪರಿಚಾರಕರು ಬೆಂಗಳೂರು ಪ್ರವೇಶಿಸಲಿದ್ದಾರೆ.
ಪ್ರವೇಶ ಶುಲ್ಕವಿದೆಯೇ?: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಕೂಟ ನಡೆಯುತ್ತಿದೆ. ರಾಜಧಾನಿ ಕಂಬಳ ವೀಕ್ಷಣೆಗೆ ಪ್ರೇಕ್ಷಕರಿಗೆ ಪ್ರವೇಶ ಶುಲ್ಕವಿದೆಯೇ ಎಂಬ ಪ್ರಶ್ನೆಗಳು ಹಲವರಿಗೆ ಕಾಡುತ್ತಿದೆ. ಇದಕ್ಕೀಗ ಬೆಂಗಳೂರು ಕಂಬಳ ಸಮಿತಿ ಕಾರ್ಯಾಧ್ಯಕ್ಷರು ಮುರಳೀಧರ ರೈ ಮಠಂತಬೆಟ್ಟು ಅವರು ಸ್ಪಷ್ಟನೆ ನೀಡಿದ್ದಾರೆ.
“ಬೆಂಗಳೂರು ಕಂಬಳ ವೀಕ್ಷಣೆಗೆ ಪ್ರವೇಶ ಶುಲ್ಕವಿದೆ, ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬೇಕು ಎಂಬ ಸುದ್ದಿಯನ್ನು ನಾವು ಗಮನಿಸಿದ್ದೇವೆ. ಆದರೆ ಇದು ಸತ್ಯಕ್ಕೆ ದೂರವಾದ ಸುದ್ದಿ. ಅಭಿಮಾನಿಗಳು ಇದನ್ನು ನಂಬಬಾರದು. ಬೆಂಗಳೂರು ಕಂಬಳಕ್ಕೆ ಯಾವುದೇ ಟಿಕೆಟ್ ಇರುವುದಿಲ್ಲ, ಪ್ರವೇಶ ಶುಲ್ಕ ಇರುವುದಿಲ್ಲ. ಎಲ್ಲಾ ಅಭಿಮಾನಿಗಳಿಗೆ, ಪ್ರೇಕ್ಷಕರಿಗೆ ಇದು ಸಂಪೂರ್ಣ ಮುಕ್ತವಾಗಿರುತ್ತದೆ” ಎಂದು ಮುರಳೀಧರ ರೈ ಮಠಂತಬೆಟ್ಟು ಉದಯವಾಣಿಗೆ ಹೇಳಿದ್ದಾರೆ.
ವಿಶಾಲವಾದ 70 ಎಕರೆ ಸ್ಥಳವಿರುವ ಅರಮನೆ ಮೈದಾನದ ಗೇಟ್ 5ರಲ್ಲಿ ಕಂಬಳ ಕ್ರೀಡಾಕೂಟ ನಡೆಯಲಿದೆ. ನ.25ರಂದು ಕಂಬಳಕ್ಕೆ ಚಾಲನೆ ಸಿಗಲಿದೆ. ಅಂದು ಬೆಳಗ್ಗೆ 10.30ರಿಂದ ನ.26ರ ಸಂಜೆವರೆಗೆ ನಿರಂತರವಾಗಿ ಕಂಬಳ ನಡೆಯಲಿದೆ.
ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ನಡೆಯುತ್ತಿರುವ ಹಿನ್ನೆಲೆಯಲ್ಲಿ 5 ರಿಂದ 8 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕರಾವಳಿಯಿಂದ ಉದ್ಯೋಗ ಅರಿಸಿಕೊಂಡ ಬಂದವರು ಹಾಗೂ ಕಂಬಳ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಬಂದವರಿಗೆ ಕಂಬಳ ವೀಕ್ಷಣೆಗೆ ಬೇಕಾದ ವಿವಿಐಪಿಗಳಿಗೆ 10,000 ಆಸನದ ವ್ಯವಸ್ಥೆಯನ್ನು ಸಹ ಕಲ್ಪಿಸಲಿದ್ದಾರೆ. ಜತೆಗೆ ಸಾರ್ವಜನಿಕರು ಕಂಬಳವನ್ನು ಕರಾವಳಿ ಗ್ರಾಮೀಣ ಭಾಗದಲ್ಲಿ ವೀಕ್ಷಿಸುವ ಶೈಲಿಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.