ಮೇಲ್ಮನೆಗಾಗಿ ಜೆಡಿಎಸ್ ಹೈಯತ್ನ
Team Udayavani, Mar 13, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಮೂರನೇ ಸ್ಥಾನಕ್ಕಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕಾಂಗ್ರೆಸ್ನಿಂದ ಈಗಾಗಲೇ ಮೂರನೇ ಅಭ್ಯರ್ಥಿಘೋಷಣೆ ಮಾಡಿ, ನಾಮ ಪತ್ರ ಸಲ್ಲಿಕೆ ಮಾಡಲಾಗಿದ್ದರೂ, ಜೆಡಿಎಸ್ ಕೂಡ ತಮ್ಮ ಅಭ್ಯರ್ಥಿ ಗೆಲುವಿಗಾಗಿ ತಂತ್ರಗಾರಿಕೆ ನಡೆಸುತ್ತಿದೆ.
ಹೀಗಾಗಿ ಹೈಕಮಾಂಡ್ ಮಟ್ಟದಲ್ಲಿ ಜೆಡಿಎಸ್ ಹೊಂದಾಣಿಕೆ ಮಾತುಕತೆ ಮುಂದುವರಿಸಿರುವುದರಿಂದ ನಾಮಪತ್ರ ವಾಪಸ್ ಪಡೆಯುವ ದಿನದವರೆಗೂ ಮೂರನೇ ಅಭ್ಯರ್ಥಿಯಾಗಿ ಯಾರು ರಾಜ್ಯಸಭೆಗೆ ಹೋಗುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಇದರ ನಡುವೆಯೇ ಒಂದು ವೇಳೆ ಕಾಂಗ್ರೆಸ್ ಜತೆಗೆ ಮಾತುಕತೆ ಯಶಸ್ವಿಯಾಗದಿದ್ದರೆ, ಕಾಂಗ್ರೆಸ್ನಲ್ಲಿನ ಅತೃಪ್ತ ಹಾಗೂ ಟಿಕೆಟ್ ಸಿಗದೇ ಇರುವ ಮುನ್ಸೂಚನೆ ಪಡೆದಿರುವ ಶಾಸಕರನ್ನು ಸಂಪರ್ಕಿಸುವ ಪ್ರಯತ್ನವನ್ನೂ ಜೆಡಿಎಸ್ ಮಾಡುತ್ತಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ನಿಂದ ಸೋಮವಾರ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹಾಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್ನಿಂದ ಬಿ.ಎಂ. ಫಾರೂಕ್ ಮತ್ತೂಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 15 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ.
ಯಾರು ಅಭ್ಯರ್ಥಿಗಳು ?
ಎಲ್. ಹನುಮಂತಯ್ಯ-ಕಾಂಗ್ರೆಸ್
ನಾಸೀರ್ ಹುಸೇನ್-ಕಾಂಗ್ರೆಸ್
ಜಿ.ಸಿ. ಚಂದ್ರಶೇಖರ್-ಕಾಂಗ್ರೆಸ್
ರಾಜೀವ್ ಚಂದ್ರಶೇಖರ್-ಬಿಜೆಪಿ
ಬಿ.ಎಂ.ಫಾರೂಕ್-ಜೆಡಿಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.