ಪತ್ರಕರ್ತ ರವಿ ಬೆಳಗೆರೆ ಅರ್ಜಿ ವಿಚಾರಣೆ ಮುಂದಕ್ಕೆ
Team Udayavani, Nov 28, 2017, 12:17 PM IST
ಬೆಂಗಳೂರು: ಶಾಸಕರ ಹಕ್ಕು ಚ್ಯುತಿ ಆರೋಪ ಸಂಬಂಧ ಒಂದು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿರುವ ವಿಧಾನಸಭೆಯ ಹಕ್ಕುಬಾಧ್ಯತಾ ಸಮಿತಿ ಆದೇಶವನ್ನು ರದ್ದುಪಡಿಸಲು ಕೋರಿ ಪತ್ರಕರ್ತರಾದ ರವಿಬೆಳೆಗೆರೆ ಹಾಗೂ ಅನಿಲ್ರಾಜ್ ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನ.30ಕ್ಕೆ ಮುಂದೂಡಿದೆ.
ಈ ಅರ್ಜಿಗಳು ಸೋಮವಾರ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಆದರೆ, ಅರ್ಜಿದಾರರ ಪರ ವಕೀಲ ಶಂಕರಪ್ಪ ಅವರು ವಿಚಾರಣೆ ಮುಂದೂಡುವಂತೆ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಯಿತು.
ಹಕ್ಕುಭಾದ್ಯತಾ ಸಮಿತಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಾದ ಮಂಡನೆಗೆ ಅವಕಾಶ ನೀಡದೇ ಏಕಪಕ್ಷೀಯವಾಗಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ದೂರುದಾರರೂ ಆಗಿರುವ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಸಮಿತಿ ಅಧ್ಯಕ್ಷರಾಗಿದ್ದು, ವಿಚಾರಣೆ ನಡೆಸಿರುವುದು ನಿಯಮಬಾಹಿರ.
ತಮ್ಮ ವಿರುದ್ಧದ ಆರೋಪಗಳು ಶಾಸಕರ ಹಕ್ಕು ಚ್ಯುತಿ ವ್ಯಾಪ್ತಿಗೆ ಒಳಪಡುವುದಿಲ್ಲ. ಹೈಕೋರ್ಟ್ ನಿರ್ದೇಶನದಂತೆ ಮತ್ತೂಮ್ಮೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರೂ ಸಮಿತಿ ವಾದ ಮಂಡನೆಗೆ ಅವಕಾಶ ನೀಡಿಲ್ಲ. ಇದೀಗ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಹೀಗಾಗಿ ಹಕ್ಕುಭಾದ್ಯತಾ ಸಮಿತಿಯ ಆದೇಶ ರದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!
Crime: ಹೆಂಡತಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ
Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಮುನಿರತ್ನ ವಿರುದ್ಧ ವೋಟರ್ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು
Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್ ವಿರುದ್ಧ ಎಫ್ಐಆರ್
MUST WATCH
ಹೊಸ ಸೇರ್ಪಡೆ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.