Kadalekai Parishe: ರಂಗೇರಿದ ಬಸವನಗುಡಿ ಪರಿಷೆಗೆ ಬನ್ನಿ …


Team Udayavani, Dec 11, 2023, 10:51 AM IST

Kadalekai Parishe: ರಂಗೇರಿದ ಬಸವನಗುಡಿ ಪರಿಷೆಗೆ ಬನ್ನಿ …

ಹೊಲಗದ್ದೆಗಳಿಂದ ಕೂಡಿದ್ದ ಬಸವನಗುಡಿ ಹಿಂದೆ ಸುಂಕೇನಹಳ್ಳಿ ಆಗಿತ್ತು. ನಗರೀಕರಣದ ಹೊಡೆತಕ್ಕೆ ಸಿಲುಕಿ ರಾಜ್ಯ ರಾಜಧಾನಿಯ ಪ್ರತಿಷ್ಠಿತ ಪ್ರದೇಶವಾಗಿದೆ. ಫ‌ಲವತ್ತಾದ ಪ್ರದೇಶವಾಗಿದ್ದ ಇಲ್ಲಿ ರೈತರು ಚೀಲಗಟ್ಟಲೆ ಕಡಲೆಕಾಯಿ ಬೆಳೆದು ಮಾರಾಟ ಮಾಡಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಇಂತಹ ಐತಿಹಾಸಿಕ ಹಿನ್ನೆಲೆವುಳ್ಳ ಬಸವನಗುಡಿಯಲ್ಲಿ ಪ್ರತಿ ಕಾರ್ತೀಕ ಮಾಸದ ಕಡೆ ಸೋಮವಾರ ಕಡಲೆಕಾಯಿ ಪರಿಷೆ ನಡೆಯುತ್ತದೆ. ಈ ಬಾರಿಯೂ ಮೇಳೈಸಿದೆ. ಈಗಾಗಲೇ ನೆರೆಯ ರಾಜ್ಯಗಳ ಮಾರಾಟಗಾರರು ಶೇಂಗಾ ರಾಶಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದಾರೆ. ಈ ಬಾರಿ “ಬೆಲ್ಲದ ಪರಿಷೆ’ಗೂ ಅವಕಾಶ ನೀಡಿದ್ದು, ಈ ಬಗ್ಗೆ ಸುದ್ದಿ ಸುತ್ತಾಟದಲ್ಲಿ ಬೆಳಕು ಚೆಲ್ಲಲಾಗಿದೆ.

ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆ ಸೋಮವಾರ (ಡಿ.11) ದಿಂದ ಅಧಿಕೃತವಾಗಿ ಆರಂಭವಾಗಲಿದ್ದು, ರಜಾ ದಿನವಾದ ಭಾನುವಾರವೇ ಸಾವಿರಾರು ಸಂಖ್ಯೆಯಲ್ಲಿ ಜನ ಪರಿಷೆಗೆ ಬಂದಿದ್ದರು. ವಿದ್ಯಾರ್ಥಿಗಳು, ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದು ವಿಶೇಷವಾಗಿತ್ತು. ಕಡಲೆಕಾಯಿ ಪರಿಷೆ ಆರಂಭವಾಗುವ ಒಂದು ದಿನ ಮೊದಲೇ ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಗಳಲ್ಲಿ ಪರಿಷೆಯ ಸಂಭ್ರಮ ಮೇಳೈಸಿದ್ದು, ಕಾಂಕ್ರೀಟ್‌ ಕಾಡಿನಲ್ಲಿ ಹಳ್ಳಿಯ ಸೊಗಡು ಗರಿಬಿಚ್ಚಿಕೊಂಡಿದೆ.

ದೊಡ್ಡಗಣಪತಿ ದೇವಸ್ಥಾನದ ಮುಂಭಾಗದ ರಸ್ತೆ, ಬಿಎಂಎಸ್‌ ಮಹಿಳಾ ಕಾಲೇಜು ರಸ್ತೆ, ಸುಂಕೇನಹಳ್ಳಿ, ಬ್ಯೂಗಲ್‌ ರಾಕ್‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನ ಸಾಗರವೇ ನೆರೆದಿತ್ತು. ರಸ್ತೆಯ ಎರಡೂ ಬದಿಯಲ್ಲಿ ಕಡಲೆಕಾಯಿ ರಾಶಿ ಹಾಕಲಾಗಿತ್ತು. ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ಮಂಡ್ಯ, ಮೈಸೂರು, ತುಮಕೂರು, ಕುಣಿಗಲ್‌ ಜತೆಗೆ ನೆರೆ ಆಂಧ್ರ, ತಮಿಳುನಾಡಿನ ಭಾಗಗಳಿಂದಲೂ ರೈತರು ಕಡಲೆಕಾಯಿ ತಂದು ಸೇರು ಮತ್ತು ಲೀಟರ್‌ ಲೆಕ್ಕದಲ್ಲಿ ಮಾರಾಟ ಮಾಡುತ್ತಿದ್ದಾರೆ.

ದೊಡ್ಡಗಣಪತಿ ದೇವಾಲಯದಿಂದ ರಾಮಕೃಷ್ಣ ಮಠದ ವರೆಗೂ ಪರಿಷೆ ಮೇಳೈಸಿದ್ದು, ಒಂದೊಂದು ಬೆಲೆಯಲ್ಲಿ ಕಡಲೆಕಾಯಿ ಖರೀದಿ ಆಗುತ್ತಿದೆ. ಕೆಲವು ಕಡೆ 100 ರೂ.ಗೆ 4 ಸೇರು ನೀಡಿದರೆ, ಇನ್ನೂ ಕೆಲವು ಕಡೆಗಳಲ್ಲಿ 3 ಸೇರು ನೀಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಸೇರಿಗೆ 40, 50 ರೂ. ಬೆಲೆ ಇತ್ತು. ಕೋವಿಡ್‌ ನಂತರ ಕಳೆದ ವರ್ಷ ದೊಡ್ಡಮಟ್ಟದಲ್ಲಿ ಕಡಲೆಕಾಯಿ ಪರಿಷೆ ನಡೆಯಿತು. ವ್ಯಾಪಾರ ಕೂಡ ಉತ್ತಮವಾಗಿತ್ತು. ಈ ವರ್ಷ ಬರಗಾಲ ಇರುವ ಕಾರಣ ಕಡಲೆಕಾಯಿ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಉತ್ತಮ ವ್ಯಾಪಾರದ ನಿರೀಕ್ಷೆಯಲ್ಲಿ ಇರುವುದಾಗಿ ತಮಿಳುನಾಡಿನ ವ್ಯಾಪಾರಿ ಸೇಂಥಿಲ್‌ ಹೇಳುತ್ತಾರೆ.

ರಸ್ತೆ ಅಕ್ಕಪಕ್ಕ ನೂರಾರು ಮಳಿಗೆ: ದೊಡ್ಡಬಸವಣ್ಣ ದೇವಸ್ಥಾನದ ರಸ್ತೆ ಅಕ್ಕಪಕ್ಕ ನೂರಾರು ತಾತ್ಕಾಲಿಕ ಮಳಿಗೆಗಳನ್ನು ತೆರೆಯಲಾಗಿದೆ. ಇವುಗಳಲ್ಲಿ ಕಡಲೆಕಾಯಿ ಮಾರಾಟ ಮಳಿಗೆಗಳೇ ಹೆಚ್ಚು. ತಿಂಡಿ-ತಿನಿಸು, ಬಣ್ಣ ಬಣ್ಣದ ಬಲೂನು, ಮಕ್ಕಳ ಆಟಿಕೆಗಳು, ಪೀಪಿ, ಅಲಂಕಾರಿಕ, ಗೃಹೋಪಯೋಗಿ ವಸ್ತುಗಳನ್ನು ಮಾರುವ ಮಳಿಗೆಗಳು ಸಹ ಜನರ ಗಮನ ಸೆಳೆಯುತ್ತಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಅಲಂಕಾರಿ ವಸ್ತುಗಳ ಖರೀದಿಯಲ್ಲಿ ಆಸಕ್ತಿವಹಿಸಿದ್ದು ಭಾನುವಾರ ಕಂಡು ಬಂತು .

ಜೊತೆಗೆ ಕೈ ಚೀಲ ತನ್ನಿ : ಈ ಬಾರಿ ಪರಿಷೆಯ ಘೋಷವಾಕ್ಯ “ಪರಿಷೆಗೆ ಬನ್ನಿ , ಕೈ ಚೀಲ ತನ್ನಿ’ ಎಂಬುದಾಗಿದೆ. ಪ್ಲಾಸ್ಟಿಕ್‌ ನಿಯಂತ್ರಿಸುವ ಸಲುವಾಗಿ ಬಟ್ಟೆ ಬ್ಯಾಗ್‌ ಬಳಕೆ ಮಾಡಿ ಎಂದು ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಹಿಂದಿನ ಪರಿಷೆಗಳಲ್ಲಿ 2.5 ಲಕ್ಷ ಪ್ಲಾಸ್ಟಿಕ್‌ ಬ್ಯಾಗ್‌ಗಳು ಸೇಲ್‌ ಆಗುತ್ತಿದ್ದವು. ಈಗ ಕಡಿಮೆ ಆಗಿದೆ. ಕೆಲವು ಜಾತ್ರೆಗಳಲ್ಲಿ ಹತ್ತರಿಂದ ಇಪ್ಪತ್ತು ಲಕ್ಷ ಜನರು ಸೇರುತ್ತಾರೆ. ಅಲ್ಲಿ ಕೂಡ ಬಟ್ಟೆ ಕೈ ಚೀಲ ಬಳಕೆ ಮಾಡಲಿ ಎಂಬುವುದು ಕೂಡ ಈ ಘೋಷ ಣೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಕಡಲೆಕಾಯಿ ಪರಿಷೆ ಯಶಸ್ಸಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 7 ಲಕ್ಷ ಜನ ಸೇರುವ ಸಾಧ್ಯತೆಯಿದೆ. ಪ್ರತಿ ಪಾಳಿಯಲ್ಲಿ 500 ಪೊಲೀಸರು ಭದ್ರತೆಗೆ ನೋಡಿಕೊಳ್ಳಲಿದ್ದಾರೆ. ಜತೆಗೆ ಆಯಕಟ್ಟಿನ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ, ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಅನುಕೂಲವಾಗಲಿ ಎಂದು ನೇರ ದರ್ಶನದ ಅವಕಾಶ ಒದಗಿಸಲಾಗಿದೆ ಎಂದು ವಿವರಿಸಿದರು.

ಶಬ್ದಮಾಲಿನ್ಯ ಮಾಡದಂತೆ ಮನವಿ: ಪರಿಷೆ ನಡೆಯುವ ಸುತ್ತಮುತ್ತ ಆಸ್ಪತ್ರೆಗಳು ಇರುವ ಹಿನ್ನೆಲೆಯಲ್ಲಿ ಶಬ್ದಮಾಲಿನ್ಯ ಮಾಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ವಿಶೇಷವಾಗಿ ಸಂಜೆ ವೇಳೆ ಸ್ವಲ್ಪ ಗೊಂದಲ ಉಂಟಾಗುತ್ತದೆ. ಇದರಿಂದ ಸ್ಥಳೀಯರೂ ಸಮಸ್ಯೆ ಎದುರಿಸುತ್ತಿದ್ದಾರೆ. ನಾವು ಅದನ್ನು ತಪ್ಪಿಸಲು ಪ್ರಯತ್ನಿಸುತ್ತೇವೆ. ಕಳೆದ ವರ್ಷ ಕೂಡ ಶಬ್ದಮಾಲಿನ್ಯದ ಬಗ್ಗೆ ಬೆಳಕು ಚೆಲ್ಲವಾಗಿತ್ತು. ಈ ವರ್ಷ ಮಾಲಿನ್ಯ ಮಾಡದಂತೆ ಸಾರ್ವಜನಿಕರಲ್ಲಿ ಪೊಲೀಸ್‌ ಇಲಾಖೆಯ ಮೂಲಕ ಮನವಿ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಷೆಗೆ ಪೊಲೀಸ್‌ ಬಂದೋಬಸ್ತ್ : ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆ ಸುಸೂತ್ರವಾಗಿ ನಡೆಯಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಸಜ್ಜಾಗಿದ್ದಾರೆ. ಸಂಚಾರ ದಟ್ಟಣೆ ಆಗದಂತೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.ಪರಿಷೆ ಹಿನ್ನೆಲೆಯಲ್ಲಿ ಹಲವು ಮಾರ್ಗಗಳನ್ನು ಕೂಡ ಬದಲಾವಣೆ ಮಾಡಲಾಗಿದೆ. ಆಯಾ ಕಟ್ಟಿನ ಪ್ರದೇಶದಲ್ಲಿ 200ಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಕಡ್ಲೆಕಾಯಿ ಜತೆಗೆ “ಬೆಲ್ಲದ ಪರಿಷೆ’ : ಪ್ರತಿ ವರ್ಷ ಕೇವಲ ಕಡಲೆಕಾಯಿ ಪರಿಷೆ ನಡೆಯುತ್ತಿತ್ತು. ಆದರೆ, ಈ ಬಾರಿ ಬೆಲ್ಲದ ಪರಿಷೆ ಆಯೋಜಿಸಲಾಗಿದೆ. ದೊಡ್ಡಗಣಪತಿ ದೇವಸ್ಥಾನದ ಬಳಿ ಕೃಷಿ ಇಲಾಖೆ ಮಂಡ್ಯ ವಿಭಾಗವು ಮಳಿಗೆ ತೆರೆದಿದ್ದು, ನಗರದ ಜನರ ಗಮನ ಸೆಳೆಯುತ್ತಿದೆ. ಅಲ್ಲಿ ಮಂಡ್ಯದ ರೈತರು ವಿವಿಧ ಬಗೆಯ ಬೆಲ್ಲದ ಅಚ್ಚುಗಳನ್ನು ಮಾರಾಟಕ್ಕೆ ಇರಿಸಿದ್ದಾರೆ. ಜನರು ನೇರ ರೈತರಿಂದಲೇ ಉತ್ತಮ ಬೆಲ್ಲ ಖರೀದಿಸಬಹುದು ಎಂದು ಬಸವನಗುಡಿಯ ದೊಡ್ಡಗಣಪತಿ ಮತ್ತು ಸಮೂಹ ದೇಗುಲಗಳ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಬಾಬು ಹೇಳಿದರು. 10 ರೈತರು ವಿಭಿನ್ನ ರೀತಿಯ ಅಚ್ಚು ಬೆಲ್ಲ ಮಾರಾಟಕ್ಕೆ ಇರಿಸಿದ್ದಾರೆ. “ಕುರಿಕಾಲು ಅಚ್ಚು, ಕ್ಯೂಬ್‌, ಕುಲ್ಫಿ ಬೆಲ್ಲ, ಬಕೆಟ್‌ ಬೆಲ್ಲ, ಗರಿ ಅಚ್ಚು ಹೀಗೆ 20ಕ್ಕೂ ಹೆಚ್ಚು ಬಗೆಯ ಬೆಲ್ಲ ಇಲ್ಲಿ ಲಭ್ಯ. ಕೆಜಿ ಬೆಲ್ಲದ ಬೆಲೆ 80 ರೂ.ನಿಂದ 120 ರೂ. ವರೆಗೂ ಇದೆ. ಜನರು ಕೂಡ ಬೆಲ್ಲದ ಅಚ್ಚು, ಉಪಯೋಗದ ಬಗ್ಗೆ ಮಾಹಿತಿ ಪಡೆದು ಖರೀದಿ ಮಾಡುತ್ತಿದ್ದಾರೆ ಎಂದು ಮಂಡ್ಯದ ರೈತ ವೆಂಕಟೇಶ್‌ ಮಾಹಿತಿ ನೀಡಿದರು.

ಮಂಡ್ಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್‌ ಅವರ ಕಲ್ಪನೆ ಇದರ ಹಿಂದಿದೆ. ಸ್ಥಳೀಯ ಶಾಸಕ ರವಿಸುಬ್ರಹ್ಮಣ್ಯ “ಬೆಲ್ಲದ ಪರಿಷೆ”ಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅಲೆಮನೆ ಮಾಲೀಕ ಸೋಮಶೇಖರ್‌ ಮಾಹಿತಿ ನೀಡಿದರು.

ಬಿಳಿ ಬೆಲ್ಲದ ಅಚ್ಚು ಆರೋಗ್ಯಕ್ಕೆ ಒಳ್ಳೆಯದಲ್ಲ: ರಾಸಾಯನಿಕಗಳನ್ನು ಉಪಯೋಗಿಸಿ ತಯಾರಿಸುವ ಬಿಳಿಬೆಲ್ಲ ಆರೋಗ್ಯಕ್ಕೆ ಒಳ್ಳೆಯದಲ್ಲ. ಜನರು ಕಪ್ಪು ಅಚ್ಚಿನ ಬೆಲ್ಲ ಖರೀದಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಕಡಲೆಕಾಯಿ ಪರಿಷೆಯಲ್ಲಿ ಬೆಲ್ಲದ ಮಾರಾಟ ನಡೆಯುತ್ತಿರುವುದು ಹೊಸ ಪ್ರಯೋಗವಾಗಿದೆ. ಕಬ್ಬು ಬೆಳೆಗಾರರಿಗೆ ಇದು ಖುಷಿ ಕೊಟ್ಟಿದೆ ಎಂದು ಹೇಳಿದರು.

ಕಡಲೆಕಾಯಿ ಪರಿಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಪ್ಲಾಸ್ಟಿಕ್‌ ಮುಕ್ತ ಪರಿಷೆ ಮಾಡಲು ಈ ಸಲ “ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷವಾಕ್ಯದಡಿ ಅರಿವು ಮೂಡಿಸಲಾಗುತ್ತಿದೆ. ಬಿಎಂಟಿಸಿ ಬಸ್‌ ಸೇರಿ ಹಲವು ಕಡೆಗಳಲ್ಲಿ ಅರಿವು ಮೂಡಿಸಲಾಗಿದೆ. ಎಚ್‌.ಬಸವರಾಜೇಂದ್ರ, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ.

ಸೋಮವಾರ ತರಗತಿ ಇರುವುದರಿಂದ ಪರಿಷೆಗೆ ಬರಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಗೆಳೆತಿಯರ ಜನತೆ ಭಾನುವಾರೇ ಪರಿಷೆ ಆಗಮಿಸಿ ಇಲ್ಲಿನ ಸಂಭ್ರಮ ಸವಿಯುತ್ತಿದ್ದೇನೆ. ಸೋನಾಲಿ, ವಿದ್ಯಾರ್ಥಿ, ಬಿಎಂಎಸ್‌ ಮಹಿಳಾ ಕಾಲೇಜು.

ದೇವೇಶ ಸೂರಗುಪ್ಪ

 

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.