Name board: ಭಾಷಾಂತರ ಎಡವಟ್ಟು; ಕನ್ನಡಕ್ಕೆ ಆಪತ್ತು


Team Udayavani, Nov 13, 2023, 12:49 PM IST

Name board: ಭಾಷಾಂತರ ಎಡವಟ್ಟು; ಕನ್ನಡಕ್ಕೆ ಆಪತ್ತು

ಬೆಂಗಳೂರು: ರಾಜಧಾನಿಯ ಹಲವು ಕಡೆಗಳಲ್ಲಿ ಅಳವಡಿಸಲಾಗಿರುವ ನಾಮಫ‌ಲಕಗಳಲ್ಲಿ ಮೂಲ ಕನ್ನಡ ಪದಗಳೇ ಮಾಯವಾಗಿದ್ದು “ಗೂಗಲ್‌ ಭಾಷಾಂತರ ಕನ್ನಡ’ ಇಡೀ ಭಾಷೆಯ ಸೊಗಡನ್ನೇ ಹಾಳು ಮಾಡುತ್ತಿದೆ.ಅದರಲ್ಲೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಗರ ಸಂಚಾರ ಪೊಲೀಸರು ಹಲವೆಡೆಗಳಲ್ಲಿ ಅಳವಡಿಸಿರುವ ನಾಮಫ‌ಲಕಗಳಲ್ಲಿ ಕನ್ನಡ ಅಕ್ಷರ ಮಾಲೆಯ ಕಗ್ಗೊಲೆಯಾಗಿದೆ.

ಸಿಲಿಕಾನ್‌ ಸಿಟಿಯ ಬಸ್‌ ನಿಲ್ದಾಣಗಳಲ್ಲಿ ಬಿಬಿಎಂಪಿ ಅಳವಡಿಕೆ ಮಾಡಿರುವ ಬೋರ್ಡ್ ಗಳಲ್ಲಿ ಹಾಗೂ ವಿವಿಧ ಕಾಮಗಾರಿಗಳ ಬಗ್ಗೆ ವಿವರ ನೀಡುವ ನಾಮಫ‌ಲಕಗಳಲ್ಲಿ ಗೂಗಲ್‌ ಭಾಷಾಂತರ ಕನ್ನಡ ಅಕ್ಷರಗಳ ಲೋಪ ಕನ್ನಡಪರ ಹೋರಾಟಗಾರರ ಸಿಟ್ಟಿಗೆ ಕಾರಣವಾಗಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ ಸಮೀಪದ ಬಾಳೇಕುಂದ್ರಿ ಸರ್ಕಲ್‌ನಲ್ಲಿ ಅಳವಡಿಸಿರುವ ಗೂಗಲ್‌ ಭಾಷಾಂತರ ಕನ್ನಡ ಬೋರ್ಡ್‌ ಇದಕ್ಕೆ ಒಂದು ತಾಜಾ ಉದಾಹರಣೆ ಆಗಿದೆ. ಅಲ್ಲಿ “ಬಾಳೇಕುಂದ್ರಿ ಸರ್ಕಲ್‌’ ಬದಲಾಗಿ ಆಂಗ್ಲ ಭಾಷೆಯಲ್ಲಿ “ಬಾಲಕುಂದ್ರಿ ಸರ್ಕಲ್‌ ‘ಎಂದು ಇದ್ದು, ಕನ್ನಡದಲ್ಲೂ ಅದನ್ನೇ ಬರೆಯಲಾಗಿದೆ. ಇಂತಹ ದೋಷಗಳಿಂದ ಕನ್ನಡಕ್ಕೆ ಅಪಮಾನದ ಜತೆಗೆ ಸಾಧಕರನ್ನೂ ಅವಮಾನಿಸಿದಂತಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ರಾ.ನಂ. ಚಂದ್ರಶೇಖರ್‌ ಬೇಸರ ವ್ಯಕ್ತಪಡಿಸುತ್ತಾರೆ.

ನಗರದ ಹಲವೆಡೆಗಳಲ್ಲಿ ಪಾಲಿಕೆ ಅಳವಡಿಸಿ ರುವ ಬೋರ್ಡ್‌ಗಳು ಬಹುತೇಕ “ಗೂಗಲ್‌ ಭಾಷಾಂತರ ಕನ್ನಡ’ ಆಗಿರುವ ಹಿನ್ನೆಲೆಯಲ್ಲಿ ಬಹ ಳಷ್ಟು ವ್ಯಾಕರಣ, ಪದ ದೋಷಗಳಿವೆ. ಕರ್ನಾಟಕ ಎಂದು ಹೆಸರಿಟ್ಟ 50ರ ಸಂಭ್ರಮದಲ್ಲಿ ನಾವಿದ್ದೇವೆ. “ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಸರ್ಕಾರ ಸಂಭ್ರಮಿತ್ತಿದೆ. ಆದರೆ, ಸರ್ಕಾರಿ ಸಂಸ್ಥೆಗಳೇ ಕನ್ನಡ ಭಾಷೆಗೆ ಅಪಮಾನ ಮಾಡುವುದು ಎಷ್ಟು ಸರಿ ಎಂದು ಜನ ಪ್ರಶ್ನಿಸುತ್ತಾರೆ.

ಪಾಲಿಕೆಯ ಎಂಟೂ ವಲಯಗಳ ಕೆಲವು ವಾರ್ಡ್ ಗಳಲ್ಲಿ ಅಳವಡಿಸಲಾಗಿರುವ ಮಹನೀ ಯರ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ಬಿಬಿಎಂಪಿಯ “ಗೂಗಲ್‌ ಮಿಶ್ರಣ’ ಕನ್ನಡ ನಾಮಫ‌ಲಕಗಳಿಗೆ ಕಡಿವಾಣ ಬೀಳಬೇಕು ಎಂದು ಕನ್ನಡಪರ ಹೋರಾಟಗಾರ ವ.ಚ.ಚನ್ನೇಗೌಡ ಒತ್ತಾಯಿಸುತ್ತಾರೆ.

ಸರ್ಕಾರ ಎಚ್ಚರ ವಹಿಸಬೇಕು: ಸರ್ಕಾರ “ಗೂಗಲ್‌ ಭಾಷಾಂತರ’ ಕನ್ನಡದ ಮೇಲೆ ಎಚ್ಚರಿಕೆ ವಹಿಸಬೇಕು. ನಮ್ಮಲ್ಲಿ ಮ್ಯಾನ್ಯುವೆಲ್‌ಗ‌ಳಿಗೆ ಯಾವುದೇ ರೀತಿಯ ಕೊರತೆಯಿಲ್ಲ. ಅವುಗಳನ್ನು ಬಳಕೆಯತ್ತ ಆಲೋಚನೆ ಮಾಡಬೇಕು. ಹಿರಿಯ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ಕನ್ನಡ ಅರ್ಥವಾಗದೇ ಇದ್ದಾಗ ಗೂಗಲ್‌ ಭಾಷಾಂತರ ಕನ್ನಡದ ಮೊರೆ ಹೋಗುತ್ತಾರೆ. ಗೂಗಲ್‌ ಭಾಷಾಂತರ ನಮ್ಮ ಕನ್ನಡ ಅಕ್ಷರ ಮಾಲೆಯ ಸಿರಿತನಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸಾಹಿತಿ ಪ್ರೊ. ಎಸ್‌.ಜಿ.ಸಿದ್ದರಾಮಯ್ಯ ದೂರುತ್ತಾರೆ.

ಭಾಷೆ ವಿಚಾರದಲ್ಲಿ ಬರೀ ಆದೇಶಗಳಿಂದ ಏನೇನೂ ಆಗದು. ಅದಕ್ಕೆ ಶಾಸನಬದ್ಧವಾದಂತಹ ಕಾಯ್ದೆಯನ್ನು ಸರ್ಕಾರ ಜಾರಿಗೆ ತರಬೇಕು. ಶಾಸನ ಬದ್ಧ ಕಾಯ್ದೆ ಆದಾಗ ಯಾವುದೇ ಕೋರ್ಟ್‌ ಕೂಡ ತಿರಸ್ಕಾರ ಮಾಡುವುದಿಲ್ಲ. ಸುಮ್ಮನೆ ಆದೇಶದ ರೀತಿಯಲ್ಲಿ ಕೆಲಸ ಮಾಡಿದರೆ ಅದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ. ಭಾಷೆ ಮತ್ತು ಪ್ರಾದೇಶಿಕ ವಿಚಾರದಲ್ಲಿ ನಾವು ನೆರೆಯ ತಮಿಳುನಾಡಿನವರನ್ನು ನೋಡಿ ಕಲಿಯಬೇಕಾಗಿದೆ ಎನ್ನುತ್ತಾರೆ.

ಪ್ರಾಧಿಕಾರಕ್ಕೆ ಪತ್ರ ಬರೆಯುತ್ತೇನೆ:  ನಾವೀಗ ಕರ್ನಾಟಕ-50 ಸಂಭ್ರಮದಲ್ಲಿದ್ದೇವೆ. ಇಂತಹ ಸಂದರ್ಭದಲ್ಲಿ ಕನ್ನಡದ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಬೇಕಾಗಿದೆ. ಪಾಲಿಕೆ ವಾರ್ಡ್‌ ಮಟ್ಟದ ನಾಮಫ‌ಲಕಗಳು, ಬಸ್‌ ನಿಲ್ದಾಣದ ಬೋರ್ಡ್‌ಗಳು ಸೇರಿ ಹಲವುಕಡೆಗಳಲ್ಲಿ ಗೂಗಲ್‌ ಭಾಷಾಂತರ ಮೂಲ ಕನ್ನಡ ಭಾಷೆಗೆ ಧಕ್ಕೆ ತಂದಿದೆ. ಇದನ್ನು ಕಸಾಪ ತೀವ್ರವಾಗಿ ಖಂಡಿಸುತ್ತದೆ ಎಂದು ಪರಿಷತ್‌ ಅಧ್ಯಕ್ಷ ಮಹೇಶ ಜೋಶಿ ಹೇಳಿದರು. ಕೆಲವು ಹೆದ್ದಾರಿಗಳಲ್ಲಿ ಅಳವಡಿಸಿರುವ ಬೋರ್ಡ್‌ ಗಳಲ್ಲಿ ಅಕ್ಷರ ದೋಷಗಳಿವೆ. ಅವುಗಳನ್ನು ಸರಿಪಡಿಸುವ ಕಾರ್ಯಕ್ಕೆ ಸಂಬಂಧ ಪಟ್ಟ ಇಲಾಖೆಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಗೂಗಲ್‌ ಭಾಷಾಂತರ ಬಳಸಿ ತಪ್ಪಾಗಿ ಕನ್ನಡ ಬರೆಯಬಾರದು. ಸರಿಯಾದ ಪದವನ್ನು ವಿದ್ವಾಂಸರಿಂದ, ಇಲ್ಲವೇ ಶಬ್ದಕೋಶ ಬಳಸಬೇಕು. ತಪ್ಪು ಬರೆಯುವುದು ಕನ್ನಡದ ಕೊಲೆ ಮಾಡಿದಂತೆ. ಜತೆಗೆ ಭಾಷೆಗೆ ಅಪಮಾನ ಮಾಡಿದಂತೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ನಾಮಫ‌ಲಕಗಳಲ್ಲಿ ಕನ್ನಡವನ್ನು ಸರಿಯಾಗಿ ಬರೆಯಬೇಕು.-ಡಾ.ದೊಡ್ಡರಂಗೇಗೌಡ, ಹಿರಿಯ ಸಾಹಿತಿ

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.