ಪಾರುಪತ್ಯಕ್ಕೆ ಗೌಡರ ಛಾಯಾಕದನ


Team Udayavani, Apr 21, 2018, 6:40 AM IST

hassan.jpg

ಏನಾದರೂ ಮಾಡಿ ಹಾಸನದಲ್ಲಿ ಪ್ರಭಾವ ಬೆಳೆಸಿಕೊಳ್ಳುತ್ತಿರುವ ಸಚಿವ ಎ.ಮಂಜು ಅವರನ್ನು ಕಟ್ಟಿ ಹಾಕಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಪಟ್ಟು… ಹೇಗಾದರೂ ಮಾಡಿ ಹಾಸನ ಜಿಲ್ಲೆಯಲ್ಲಿರುವ ದೇವೇಗೌಡರ ಪ್ರಭಾವ ಇಳಿಸಬೇಕು ಎಂಬುದು ಈಗಾಗಲೇ ಗೆದ್ದು ಸಚಿವ ಸ್ಥಾನವನ್ನೂ ಅಲಂಕರಿಸಿರುವ ಮತ್ತು ಒಕ್ಕಲಿಗ ಮುಖಂಡನೂ ಆಗಿರುವ ಎ.ಮಂಜು ಅವರ ಮಹಾಪಟ್ಟು… 

ಈ ಎರಡು ಕಾರಣಗಳಿಂದಾಗಿ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ. ಮಂಜು ಎದುರಾಳಿಯಾಗಿ ಜೆಡಿಎಸ್‌ನಿಂದ ಎ.ಟಿ.ರಾಮಸ್ವಾಮಿ ಸ್ಪರ್ಧಿಸುತ್ತಿ ದ್ದಾರೆ. ಈ ಕ್ಷೇತ್ರದಲ್ಲಿಯೇ ಮೂರು ಬಾರಿ ಶಾಸಕರಾಗಿದ್ದ ಅವರು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 

ಈ ಬಾರಿ ಎ. ಮಂಜು ಗೆದ್ದರೆ ಅದು ಹ್ಯಾಟ್ರಿಕ್‌ ಗೆಲುವು. ಹಾಗೆಯೇ ಅವರ ಪ್ರತಿಸ್ಪರ್ಧಿ ರಾಮ ಸ್ವಾಮಿ ವಿಜಯಿಯಾದರೂ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಶಾಸಕರೆಂಬ ದಾಖಲೆಯಾಗಲಿದೆ.  ಮಂಜು ಹಾಗೂ ರಾಮಸ್ವಾಮಿ ಈಗಾಗಲೇ ಮೂರು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಯೋಗಾರಮೇಶ್‌ ಎರಡನೇ ಬಾರಿ ಕಣಕ್ಕಿಳಿಯುತ್ತಿದ್ದು ಚೊಚ್ಚಲ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.  ಯೋಗಾರಮೇಶ್‌ ಸ್ಪರ್ಧೆ ಕಳೆದ ಬಾರಿಯ ಚುನಾವಣೆಯಲ್ಲಿ ರಾಮಸ್ವಾಮಿ ಗೆಲುವಿಗೆ ಅಡ್ಡಿಯಾಗಿತ್ತು ಎಂದು ವಿಶ್ಲೇಷಿಸಲಾಗಿತ್ತು. 

ಕುರುಬ ಹಾಗೂ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಹಳ್ಳಿಮೈಸೂರು ಹೋಬಳಿಯಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವರೆಂಬ ಕಾರಣಕ್ಕೆ ಮಂಜು ಅವರನ್ನು ಕುರುಬ ಸಮುದಾಯ ಬೆಂಬಲಿಸಿತ್ತು. 

ಈ ಬಾರಿ ಕುರುಬ ಮುಖಂಡರು ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಸಮುದಾಯದ ಯುವ ಮುಖಂಡ ಹಳ್ಳಿಮೈಸೂರಿನ ಎಂ.ಕೆ.ಶೇಷೇಗೌಡ ಅವರನ್ನು ಎ.ಮಂಜು ಅವರ ವಿರುದ್ಧ  ಸ್ಪರ್ಧೆಗಿಳಿಸುತ್ತಿದ್ದಾರೆ. ಅನೇಕ ಪ್ರಭಾವಿ ಕುರುಬ ಮುಖಂಡರು ಜೆಡಿಎಸ್‌‌ ಸೇರಿರುವುದು ಅವರಿಗೆ ತಲೆನೋವು. ಜೆಡಿಎಸ್‌ನ ಹಿರಿಯ ಮುಖಂಡ ದೊಡ್ಡಮಗ್ಗೆ ರಂಗಸ್ವಾಮಿ ಅವರು ಕೆಲ ದಿನಗಳಿಂದ ಪಕ್ಷದ ವೇದಿಕೆಗಳಲ್ಲಿ ಕಾಣಿಸಿಕೊಳ್ಳದೆ ಪಕ್ಷ ಸಂಘಟನೆಯಿಂದ ದೂರ ಉಳಿದಿದ್ದರು. ಅವರ ಸಹೋದರ ನಿವೃತ್ತ ಐಎಎಸ್‌ ಅಧಿಕಾರಿ ರಾಮೇಗೌಡ  ಬಿಜೆಪಿಯಿಂದ ಸ್ಪರ್ಧಿಸುವ ಪ್ರಯತ್ನ ನಡೆಸಿದ್ದರು. ಆದರೆ ಅವರಿಗೆ ಬಿಜೆಪಿ ಟಿಕೆಟ್‌ ಸಿಗಲಿಲ್ಲ. ಯೋಗಾರಮೇಶ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ದೊಡ್ಡಮಗ್ಗೆ ರಂಗಸ್ವಾಮಿ ಕುಟುಂಬದವರೂ ಈಗ ಜೆಡಿಎಸ್‌ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಎ.ಮಂಜು ಅವರಿಗೆ ಹಿಡಿದ ಕೆಲಸ ಮಾಡಿಯೇ ತೀರುವ ಬದ್ಧತೆ ಇಲ್ಲ. ಎರಡೂವರೆ ವರ್ಷ ಅಧಿಕಾರದಲ್ಲಿದ್ದರೂ ಗುರುತಿಸುವಂಥ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿಲ್ಲ ಎಂಬ ಆರೋಪವಿದೆ. ಎದುರಾಳಿ ಎ.ಟಿ.ರಾಮಸ್ವಾಮಿ ಅವರು ಪ್ರಾಮಾಣಿಕ, ಬದ್ಧತೆಯಿರುವ ರಾಜಕಾರಣಿ ಎಂಬ ಭಾವನೆಯಿದೆ. 

ಕ್ಷೇತ್ರದಲ್ಲಿ  ಬಿಜೆಪಿಗೆ ಭದ್ರ ನೆಲೆ ಇಲ್ಲ. ಯೋಗಾರಮೇಶ್‌ ಅವರು ಸ್ವಂತ ವರ್ಚಸ್ಸಿನಿಂದ ಮತ ಸೆಳೆಯಬೇಕಾಗಿದೆ. ಮತ ಸೆಳೆಯಬಹುದಾದ ವರ್ಚಸ್ವೀ ಬಿಜೆಪಿ ನಾಯಕರೂ ಈ ಕ್ಷೇತ್ರದಲ್ಲಿ ಯಾರೂ ಇಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ಅವರು ಸದ್ಯದ ಮಟ್ಟಿಗೆ ಪ್ರಬಲರಾಗಿ ಕಾಣುತ್ತಿದ್ದಾರೆ. ಅವರ ವೇಗವನ್ನು ಎ.ಮಂಜು ಹಾಗೂ ಯೋಗಾರಮೇಶ್‌ ಯಾವ ಮಟ್ಟಿಗೆ ತಡೆಯುವರೆಂಬ ಕುತೂಹಲ ಕ್ಷೇತ್ರದಲ್ಲಿದೆ.

ಮಂಜು ಚಿಂತೆ
ಕ್ಷೇತ್ರದ ಪ್ರಮುಖ ಮುಖಂಡರ ಪಡೆ ಎ.ಟಿ.ರಾಮಸ್ವಾಮಿ  ಜೊತೆಗಿದೆ. ಎಚ್‌.ಡಿ.ದೇವೇಗೌಡ, ಎಚ್‌.ಡಿ.ರೇವಣ್ಣ ಪ್ರಭಾವ ದಟ್ಟವಾಗಿದೆ. ಈ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ದಿನೇ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಶಿವರಾಂ ಸೇರಿ ಜಿಲ್ಲೆಯ ಯಾವ ಕಾಂಗ್ರೆಸ್‌ ಮುಖಂಡರೂ ಎ.ಮಂಜು ಪರವಾಗಿ ಪ್ರಚಾರ ಮಾಡಿ ಮತದಾರರನ್ನು ಸೆಳೆಯುವ ಪರಿಸ್ಥಿತಿ ಇಲ್ಲ. ಇದು ಎ.ಮಂಜು ಅವರನ್ನು ಚಿಂತೆಗೀಡು ಮಾಡಿವೆ.

2500 ಕೋಟಿ  ರೂ.ಗಳ ಅನುದಾನ ತಂದಿ ರುವೆ. ಇಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದೆ. ಇದು ಈ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆ.
– ಎ.ಮಂಜು, ಸಚಿವ, ಕಾಂಗ್ರೆಸ್‌ ಅಭ್ಯರ್ಥಿ

ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಲೂಟಿ ಮಾಡಿದ್ದಾರೆ. ಹಣಬಲದ ಹಿಂದೆ ಮತದಾರರು ಹೋಗುವುದಿಲ್ಲ.
– ಎ.ಟಿ.ರಾಮಸ್ವಾಮಿ, ಜೆಡಿಎಸ್‌ ಅಭ್ಯರ್ಥಿ

ಕ್ಷೇತ್ರದ ಜನರು ಹೊಸ ಮುಖದ ಕಾತುರ ದಲ್ಲಿದ್ದಾರೆ. ನನ್ನ ಎದುರಾಳಿ ಗಳಾಗಿರುವವರು ಮೂರು ಬಾರಿ ಶಾಸಕರಾಗಿದ್ದಾರೆ. 
– ಎಚ್‌.ಯೋಗಾರಮೇಶ್‌, ಬಿಜೆಪಿ ಅಭ್ಯರ್ಥಿ

– ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.