ಅರ್ಧಗಂಟೆಯಲ್ಲೇ ಬೆಂಗಳೂರಿಂದ ಹುಬ್ಬಳ್ಳಿಗೆ ಪ್ರಯಾಣ!
Team Udayavani, Nov 17, 2017, 6:00 AM IST
ಬೆಂಗಳೂರು: ಎಲ್ಲವೂ ಅಂದುಕೊಂಡಂತೆಯೇ ಆದರೆ ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ!
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಈ ಒಪ್ಪಂದದ ಪ್ರಕಾರ, ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಹೊಸೂರುಗಳಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೋಧನೆ ಮಾಡುವುದಲ್ಲದೇ, ಆರ್ಥಿಕವಾಗಿಯೂ ಇದು ಪ್ರಯೋಜನಕ್ಕೆ ತರುತ್ತದೆಯೇ ಎಂಬ ಬಗ್ಗೆಯೂ ಅಧ್ಯಯನ ನಡೆಸಲಿದೆ.
ಒಂದೊಮ್ಮೆ ಈ ಯೋಜನೆ ಜಾರಿಯಾಗಲು ಅರ್ಹವೆಂದು ಕಂಡುಬಂದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವೇಗ ಕೇವಲ ಅರ್ಧಗಂಟೆಗೆ ಇಳಿಯಲಿದೆ. ಅಂದರೆ, ವಿಮಾನ ಪ್ರಯಾಣಕ್ಕಿಂತಲೂ ಕಡಿಮೆ ಸಮಯದಲ್ಲಿ ಈ ನಗರಗಳ ನಡುವೆ ಸಂಚಾರ ಮಾಡಬಹುದಾಗಿದೆ.
ಒಪ್ಪಂದದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “”ಬೆಂಗಳೂರು ಐಟಿ ಹಬ್ ಆಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಜಗತ್ತಿನ ಅತ್ಯಂತ ಪ್ರಮುಖ ಐಟಿ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಒಂದು ವೇಳೆ ಹೈಪರ್ಲೂಪ್ನಂಥ ನವ ತಂತ್ರಜ್ಞಾನವನ್ನು ರಾಜ್ಯದಲ್ಲಿ ಅಳವಡಿಸಿದ್ದೇ ಆದರೆ, ಕರ್ನಾಟಕದ ಪ್ರಗತಿಯ ವೇಗ ಮತ್ತಷ್ಟು ಹೆಚ್ಚುತ್ತದೆ,” ಎಂದಿದ್ದಾರೆ.
ಹೈಪರ್ಲೂಪ್ ಯೋಜನೆಗಾಗಿ ಕೇವಲ ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳೂ ವರ್ಜಿನ್ ಹೈಪರ್ಲೂಪ್ ಒನ್ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿವೆ. ಈ ಕಂಪನಿ ಪ್ರಾಥಮಿಕವಾಗಿ ಸ್ಥಳ ಮತ್ತು ಯೋಜನೆಯ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲಿದೆ.
ಪರೀಕ್ಷೆಯಲ್ಲಿ ಯಶಸ್ವಿ
2013ರಲ್ಲಿ ಹೈಪರ್ಲೂಪ್ ಕನಸನ್ನು ಕಂಡ ಎಲೋನ್ ಮಾಸ್ಕ್, ಈಗಾಗಲೇ ಅಮೆರಿಕದ ನಾವಡಾ ಮರುಭೂಮಿಯಲ್ಲಿ ಪರೀಕ್ಷೆ ನಡೆಸಿ ಯಶಸ್ವಿಯೂ ಆಗಿದ್ದಾರೆ. ಆದರೆ, ಈ ಯೋಜನೆಗೆ ಮತ್ತಷ್ಟು ಧನ ಸಹಾಯ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಕಳೆದ ತಿಂಗಳಷ್ಟೇ, ವರ್ಜಿನ್ ಏರ್ಲೈನ್ಸ್ನ ರಿಚರ್ಡ್ ಬ್ರಾನ್ಸನ್ ಅವರು ಹೈಪರ್ಲೂಪ್ ಯೋಜನೆಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿ, ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ. ಇದೀಗ ಭಾರತದಲ್ಲೂ ವರ್ಜಿನ್ ಸಹಭಾಗಿತ್ವದಲ್ಲೇ ಹೈಪರ್ಲೂಪ್ ಯೋಜನೆ ನಡೆಸಲಿದೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತಾದರೆ 2021ಕ್ಕೆ ಯೋಜನೆ ಆರಂಭವಾಗಬಹುದು.
ಏನಿದು ಹೈಪರ್ಲೂಪ್?
ವಿಶೇಷವಾಗಿ ನಿರ್ಮಿಸಲಾದ ಕೊಳವೆಯೊಂದರಲ್ಲಿ ಪಾಡ್(ಪುಟ್ಟ ವಾಹನಗಳು)ಗಳು ಸಾಗುವಂತೆ ಮಾಡುವುದು. ಈ ಕೊಳವೆಯನ್ನು ನೆಲದಿಂದ ಕೊಂಚ ಮೇಲೆಯೇ ನಿರ್ಮಿಸಲಾಗಿರುತ್ತದೆ. ಅಯಸ್ಕಾಂತೀಯ ಗುಣದೊಂದಿಗೆ ಈ ಕೊಳವೆಯ ಯಾವುದೇ ಬದಿಗೂ ಪಾಡ್ ತಗುಲದಂತೆ ಮಾಡಲಾಗುತ್ತದೆ. ಇನ್ನೂ ವಿಶೇಷವೆಂದರೆ, ಈ ಕೊಳವೆಗೆ ಹೊರಗಿನಿಂದ ಗಾಳಿ ಹೋಗದಂತೆ ನಿರ್ಮಿಸಲಾಗುತ್ತದೆ. ಅಲ್ಲದೆ, ಇದೇ ಕಾಂತೀಯ ಶಕ್ತಿಯಿಂದಲೇ ಇದನ್ನು ಚಲಿಸುವಂತೆ ಮಾಡಲಾಗುತ್ತದೆ. ಆರಂಭದಲ್ಲಿ ಗಂಟೆಗೆ 640 ಕಿ.ಮೀ. ವೇಗ ಎಂದು ಹೇಳಲಾಗಿತ್ತಾದರೂ, ಇದೀಗ ಪ್ರಯೋಗ ಯಶಸ್ವಿಯಾದ ಬಳಿಕ ಗಂಟೆಗೆ ಒಂದು ಸಾವಿರ ಕಿ.ಮೀ. ವೇಗವಾಗಿ ಹೋಗಬಹುದು ಎಂದು ಹೇಳಲಾಗುತ್ತಿದೆ.
ಎಲ್ಲೆಲ್ಲಿ ಯೋಜನೆ?
ಅಮೆರಿಕ, ಬ್ರಿಟನ್, ಕೆನಡಾ, ಯುಎಇ, ಫಿನ್ಲಂಡ್ ಮತ್ತು ಭಾರತ. ಭಾರತದಲ್ಲಿ ಬೆಂಗಳೂರು, ತುಮಕೂರು, ಹೊಸೂರು, ಹುಬ್ಬಳ್ಳಿ, ಮುಂಬೈ, ಪುಣೆ ನಗರಗಳಲ್ಲಿ ಯೋಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.