![1-a-baaba](https://www.udayavani.com/wp-content/uploads/2024/07/1-a-baaba-415x233.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
Team Udayavani, Jul 1, 2024, 10:35 AM IST
![4](https://www.udayavani.com/wp-content/uploads/2024/07/4-620x372.jpg)
ಬೆಂಗಳೂರು: ಲಕ್ಷಾಂತರ ರೂ. ಸಾಲ ಪಡೆದು ವಾಪಸ್ ನೀಡದೆ ವಂಚಿಸಿ ಬೆಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಯುವಕನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿದ್ದ ಇಬ್ಬರು ಆರೋಪಿಗಳನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಶಿವಕೃಷ್ಣನ್ (34) ಮತ್ತು ಜಾಯ್ ಸ್ಟಿವನ್(34) ಬಂಧಿತ ಆರೋಪಿಗಳು. ಇತರೆ ಆರೇಳು ಮಂದಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಆರೋಪಿಗಳು ತೆಲಂಗಾಣ ಮೂಲದ ರಾಜು ಅಲಿಯಾಸ್ ಅಜ್ಮೀರಾ ರಾಜು(29) ಎಂಬಾತನನ್ನು ಜೂನ್ 16ರಂದು ಎಂ.ಜಿ.ರಸ್ತೆಯ ಹೋಟೆಲ್ವೊಂದರ ಸಮೀಪದಿಂದ ಅಪಹರಿಸಿದ್ದರು ಎಂದು ಪೊಲೀಸರು ಹೇಳಿದರು.
ಅಪಹರಣಕ್ಕೊಳಗಾಗಿದ್ದ ರಾಜು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಕೆಲಸ ಮಾಡಿಕೊಂಡಿದ್ದು, ಐಷಾರಾಮಿ ಜೀವನ ನಡೆಸುತ್ತಿದ್ದ. ಈ ಮಧ್ಯೆ ಕ್ರಿಕೆಟರ್ಸ್, ಸಿನಿಮಾ ನಟರು ಹಾಗೂ ಗಣ್ಯರ ಜತೆ ಪೋಟೋ ತೆಗೆಸಿಕೊಳ್ಳುವ ಹವ್ಯಾಸ ಹೊಂದಿದ್ದು, ಅದನ್ನೇ ಬಂಡವಾಳ ಮಾಡಿಕೊಂಡು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ, ಕೆಲ ಸರ್ಕಾರಿ ನೌಕರಿ ಹಾಗೂ ಕೆಲವೆಡೆ ಉದ್ಯೋಗ ಅವಕಾಶಗಳನ್ನು ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾನೆ. ಆರೋಪಿಗಳ ಪೈಕಿ ಕೆಲವರಿಂದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹಾಗೂ ಇತರೆ ಆಮಿಷವೊಡ್ಡಿ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದ. ಆದರೆ, ವಾಪಸ್ ನೀಡಿರಲಿಲ್ಲ. ಅಲ್ಲದೆ, ತೆಲಂಗಾಣ ತೊರೆದು ಆರೇಳು ತಿಂಗಳಿಂದ ಬೆಂಗಳೂರಿನ ಹೋಟೆಲ್ಗಳಲ್ಲಿ ವಾಸವಾಗಿದ್ದ. ಕೆಲ ದಿನಗಳಿಂದ ಎಂ.ಜಿ.ರಸ್ತೆಯ ಹೋಟೆಲ್ವೊಂದರಲ್ಲಿ ವಾಸವಾಗಿದ್ದ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯನಾಗಿದ್ದ ರಾಜು, ತನ್ನ ಐಷಾರಾಮಿ ಜೀವನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದ. ಅದನ್ನು ಗಮನಿಸಿದ ಆರೋಪಿಗಳು ರಾಜುನ ಅಪಹರಣಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.
ಫಾರ್ಮ್ಹೌಸ್ನಲ್ಲಿ ಹಿಂಸೆ: ಜೂನ್ 16ರಂದು ಎರಡು ಕಾರಿನಲ್ಲಿ ಬಂದಿದ್ದ 8-10 ಮಂದಿ ಆರೋಪಿಗಳು ಹಲ್ಲೆ ನಡೆಸಿ ರಾಜುನನ್ನು ಅಪಹರಣ ಮಾಡಿ ತೆಲಂಗಾಣಕ್ಕೆ ಕರೆದೊಯ್ದಿದ್ದರು. ಅಲ್ಲಿನ ಫಾರ್ಮ್ಹೌಸ್ವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಕೋಟ್ಯಂತರ ರೂ.ಗೆ ಬೇಡಿಕೆ ಇಟ್ಟಿದ್ದರು. ಇತ್ತ ರಾಜು ಸ್ನೇಹಿತ ಹಲಸೂರು ಠಾಣೆಗೆ ದೂರು ನೀಡಿದ್ದ. ಅದನ್ನು ಆಧರಿಸಿ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ರಾಜುನನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-a-baaba](https://www.udayavani.com/wp-content/uploads/2024/07/1-a-baaba-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
MUST WATCH
ಹೊಸ ಸೇರ್ಪಡೆ
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
![4-manipal](https://www.udayavani.com/wp-content/uploads/2024/07/4-manipal-150x90.jpg)
Manipal: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿ ವಂಚನೆಗೊಳಗಾದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.