ತಿಗಳ ಕ್ಷತ್ರಿಯ ಸಮುದಾಯದ ಮೇಲೆ ನನಗೆ ಹೆಚ್ಚು ನಂಬಿಕೆ ಇದೆ : ಡಿಕೆಶಿ


Team Udayavani, Aug 16, 2021, 6:26 PM IST

fgtret

ಬೆಂಗಳೂರು:  ನಾನು ಇಲ್ಲಿ ನಿಮ್ಮಿಂದ ಸನ್ಮಾನ ಮಾಡಿಸಿಕೊಂಡು, ಜೈಕಾರ, ಮತ ಹಾಕಿಸಿಕೊಳ್ಳಲು ಬಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಇಂದು ಬೆಂಗಳೂರಿನ ಸಿದ್ದಾಪುರದಲ್ಲಿ ಸೋಮವಾರ ಏರ್ಪಡಿಸಿದ್ದ ತಿಗಳ ಕ್ಷತ್ರಿಯ ಸಮುದಾಯದ ಮುಖಂಡರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವಜ್ಞ ಅವರು ಒಂದು ಮಾತು ಹೇಳಿದ್ದಾರೆ. “ನಿಂಬೆಗಿಂತ ಹುಳಿಯಿಲ್ಲ, ದುಂಬಿಗಿಂತ ಕಪ್ಪು ಇಲ್ಲ, ಈಶ್ವರನಿಗಿಂತ ಮಿಗಿಲಾದ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣವಿಲ್ಲ” ಎಂದು. ನಾನು ಚಿಕ್ಕಂದಿನಿಂದಲೂ ನಿಮ್ಮ ಸಮುದಾಯದ ಜತೆ ಬೆರೆತು ಬೆಳೆದವನು. ಹೀಗಾಗಿ ಈ ಸಮುದಾಯದ  ಮೇಲೆ ನನಗೆ ಹೆಚ್ಚು ನಂಬಿಕೆ ಎಂದರು.

ಡಾ. ರಾಜ್ ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದಾಗ, ಪೊಲೀಸ್ ಅಧಿಕಾರಿಗಳು ದಟ್ಟ  ಕಾಡಿನಲ್ಲಿ ಹೋಗಲು ಹಿಂಜರಿಯುತ್ತಿದ್ದರು. ಆಗ ಮುಖ್ಯಮಂತ್ರಿಯಾಗಿದ್ದ ಎಸ್.ಎಂ ಕೃಷ್ಣ ಅವರು, ನಮ್ಮ ತಾಲೂಕಿನಲ್ಲಿ ಶಿಕಾರಿ ಮಾಡುತ್ತಿದ್ದ ತಿಗಳ ಸಮುದಾಯದ ಸ್ನೇಹಿತರಿಗೆ ಗುರುತಿನ ಚೀಟಿ ಕೊಟ್ಟು ಕಾರ್ಯಾಚರಣೆಗೆ ಬಳಸಿಕೊಳ್ಳಲು ಸೂಚಿಸಿದ್ದರು. ಹೀಗೆ ತಿಗಳ ಸಮುದಾಯದವರು ಧೈರ್ಯವಂತರು ಹಾಗೂ ನಂಬಿಕಸ್ಥರು.  ನಿಮ್ಮ ವಿಚಾರ ಆಲೋಚನೆ, ಸಮಸ್ಯೆಗಳನ್ನು ಆಲಿಸಲು ನಾನು ಇಂದು ಇಲ್ಲಿಗೆ ಬಂದಿದ್ದೇನೆ. 2ಎ ಮೀಸಲಾತಿಯಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ ಎಂಬುದು ನಿಮ್ಮ ನೋವು. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಹಾಯ ಬೇಕು ಎಂದು ಕೇಳಿಕೊಂಡಿದ್ದೀರಿ ಎಂದರು.

ಪಿ.ಆರ್. ರಮೇಶ್ ಅವರನ್ನು ಮೇಯರ್ ಮಾಡುವ ಸಂದರ್ಭದಲ್ಲಿ ಏನೇನಾಯ್ತು ಎಂದು ನಾವೆಲ್ಲ ನೋಡಿದ್ದೇವೆ. ಇಡೀ ಪಾಲಿಕೆ ವ್ಯವಸ್ಥೆ ಬಗ್ಗೆ ಸರಿಯಾದ ಜ್ಞಾನ ಇರುವವರು ರಮೇಶ್. ಇನ್ನು ಗುಣಶೇಖರ್, ಬಸವರಾಜ್, ಕೃಷ್ಣಮೂರ್ತಿ ಅವರು ಸೇರಿದಂತೆ ಅನೇಕ ಸಮರ್ಥ ನಾಯಕರಿದ್ದಾರೆ. ಅವರನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಹೂವಿನ ನಿಷೇಧ ನಿರ್ಧಾರದಿಂದ ಆಗಿರುವ ತೊಂದರೆ ಸೇರಿದಂತೆ ನೀವು ಅನೇಕ ನೋವು ಹಾಗೂ ಬೇಡಿಕೆ ಮುಂದಿಟ್ಟಿದ್ದೀರಿ. ಕೋವಿಡ್ ಸಮಯದಲ್ಲಿ ಈ ಸಮುದಾಯಕ್ಕೆ ಆದ ಅನ್ಯಾಯ ಆ ಭಗವಂತನಿಗೇ ಗೊತ್ತು. ಪ್ರತಿ ಹೆಕ್ಟೇರ್ ಹೂ ಬೆಳೆಗಾರರಿಗೆ 10 ಸಾವಿರ ರೂ. ಮಾತ್ರ ಪರಿಹಾರ ಘೋಷಿಸಿದರು.

ಕರಗ ಉತ್ಸವಕ್ಕೆ ಅನುದಾನ ನಿಲ್ಲಿಸಿರುವ ಬಗ್ಗೆ ಪಿ.ಆರ್ ರಮೇಶ್ ಅವರು ಹಿಂದೆ ನಾನು ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದ ವೇಳೆ ಗಮನಕ್ಕೆ ತಂದಿದ್ದರು. ಈ ವಿಚಾರವಾಗಿ ಆದೇಶ ಹೊರಡಿಸಬೇಕು ಎನ್ನುವಷ್ಟರಲ್ಲಿ ನನ್ನ ಖಾತೆ ಬದಲಾಯಿತು. ಮುಂದೆ ಒಳ್ಳೆಯ ಕಾಲ ಬಂದಾಗ ಅದನ್ನು ಸರಿ ಮಾಡೋಣ. ಈ ಅನುದಾನದಿಂದಲೇ ಹಬ್ಬ ನಡೆಯುತ್ತದೆ ಎಂದಲ್ಲ. ಆದರೆ ಈ ಉತ್ಸವಕ್ಕೆ ಒಂದು ಪುಷ್ಟಿ ಸಿಗುತ್ತದೆ.

ಇವತ್ತು ರಾಜಕೀಯ ಸ್ಥಾನಮಾನದ ಬಗ್ಗೆ ಮಾತನಾಡಿದ್ದೀರಿ. ರಾಜಕೀಯ ಸ್ಥಾನಮಾನ ಇಲ್ಲದಿದ್ದರೆ ಧ್ವನಿ ಎತ್ತಲು ಸಾಧ್ಯವಿಲ್ಲ. ಶೈಕ್ಷಣಿಕ ವಿಚಾರವೂ ಬೇಕು. ಹೀಗಾಗಿ ಈ ಸಮಾಜಕ್ಕೆ ಯಾವ ರೀತಿ ಸಹಾಯ ಮಾಡಬಹುದು ಎಂದು ತಿಳಿಯಲು ನಿಮ್ಮ ಜತೆ ಈ ಸಂವಾದ ಕಾರ್ಯಕ್ರಮ ಮಾಡುತ್ತಿದ್ದೇನೆ. ಮುಂದೆ ನಿಮ್ಮ ಜತೆಯಲ್ಲೇ ಇರುತ್ತೇನೆ ಎಂದು ಹೇಳಲು ಈ ಪ್ರಯತ್ನ ಮಾಡಲಾಗುತ್ತಿದೆ. ನಿಮಗೆ ಅವಕಾಶ ಸಿಗುತ್ತಿಲ್ಲ ಎಂಬ ಬಗ್ಗೆ ನಾನು ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತೇನೆ.

ನೀವು ಮೂಲತಃ ಕ್ಷತ್ರೀಯರು. ನಿಮ್ಮಲ್ಲಿ ಹೋರಾಟದ ಸಾಮರ್ಥ್ಯವಿದೆ. ಯಾವ ನಿರ್ಧಾರವನ್ನು ಬೇಕಾದರೂ ಬದಲಿಸುವ ಶಕ್ತಿ ಇದೆ. ಈ ದೇಶದ ಇತಿಹಾಸದಲ್ಲಿ ನೀವು ಪಾಲುದಾರರು. ರಾಜಕಾರಣ ಒಂದೇ ಮುಖ್ಯವಲ್ಲ. ನಿಮ್ಮ ಭಾವನೆಯನ್ನು ನಿಮ್ಮ ಬಾಯಿಂದಲೇ ಕೇಳಿ ತಿಳಿದುಕೊಳ್ಳಲು ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಸಮುದಾಯದ ನಾಯಕರನ್ನು ಕರೆದು ಮಾತನಾಡುತ್ತೇನೆ. ನೀವು ಇಂದು ಹೇಳಿಕೊಂಡಿರುವ ದುಗುಡವನ್ನು ನಾನು ಆಲಿಸಿ, ದಾಖಲಿಸಿಕೊಂಡಿದ್ದೇನೆ.

“ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು” ಎಂಬಂತೆ ನಾನು ನಿಮ್ಮ ಜತೆಗೂಡಲು ಬಂದಿದ್ದೇನೆ. ನಿಮ್ಮ ಜತೆ ನಾನು ಇದ್ದೀನಿ. ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಇರಲಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.