ಕೆ.ಆರ್‌. ಮಾರುಕಟ್ಟೆ ಅಕ್ರಮ ಮಳಿಗೆ ತೆರವು ವರದಿ ಸಲ್ಲಿಕೆ


Team Udayavani, Apr 10, 2019, 3:00 AM IST

highcourt2

ಬೆಂಗಳೂರು: ಕೆ.ಆರ್‌. ಮಾರುಕಟ್ಟೆ ಪ್ರದೇಶದಲ್ಲಿ ಬಿಬಿಎಂಪಿ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಮಂಗಳವಾರ ಹೈಕೋರ್ಟ್‌ಗೆ ಪರಿಶೀಲನಾ ವರದಿ ಸಲ್ಲಿಸಿದೆ.

ಮಾರುಕಟ್ಟೆ ಸಂಕೀರ್ಣದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವಂತೆ ಕೋರಿ ಬೆಂಗಳೂರು ಹೂವು ವ್ಯಾಪಾರಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಈ ವರದಿ ಸಲ್ಲಿಸಲಾಗಿದೆ.

ಹೈಕೋರ್ಟ್‌ ಆದೇಶದಂತೆ ಒತ್ತುವರಿ ತೆರವು ಕಾರ್ಯಾಚರಣೆಯ ಪರಿಶೀಲನೆ ನಡೆಸಿರುವ ಅಗ್ನಿ ಶಾಮಕ ಅಧಿಕಾರಿಗಳು, ಅಗ್ನಿಶಾಮಕ ವಾಹನಗಳ ಸುಗಮ ಸಂಚಾರಕ್ಕೆ ಮಾರುಕಟ್ಟೆ ರಸ್ತೆಯನ್ನು ಮುಕ್ತಗೊಳಿಸಿದ್ದು, ಕೆಲ ಸಿವಿಲ್‌ ಕಾಮಗಾರಿಗಳು ನಡೆಯುತ್ತಿವೆ.

ಮಾರುಕಟ್ಟೆ ಕಟ್ಟಡದ ಕಾರಿಡಾರ್‌, ಮೆಟ್ಟಿಲುಗಳು, ರಸ್ತೆ ಬದಿ ಸೇರಿ ಇತರ ಪ್ರದೇಶಗಳ ಒತ್ತುವರಿಯನ್ನು ಬಿಬಿಎಂಪಿ ತೆರವುಗೊಳಿಸಿದೆ. ಅಗ್ನಿ ಅವಘಡ ಎಚ್ಚರಿಕೆ ವ್ಯವಸ್ಥೆ, ಅಗ್ನಿ ಅವಘಡ ಪತ್ತೆ ಹಚ್ಚುವ ಹಾಗೂ ಅಗ್ನಿ ಶಮನ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ವರದಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಅಗ್ನಿಶಾಮಕ ಇಲಾಖೆಯ ನೀಡಿದ್ದ ಎಲ್ಲ 19 ಅಂಶಗಳ ಮಾರ್ಗಸೂಚಿಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿತು.

ಇದೇ ವೇಳೆ ಬಿಬಿಎಂಪಿ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಕೆ.ಆರ್‌. ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳಿಗೆ ನಕ್ಷೆ ಮಂಜೂರು ಮಾಡಿರುವ ಅಧಿಕಾರಿಗಳೇ ಅವುಗಳ ತೆರವು ಕಾರ್ಯಾಚರಣೆಗೆ ತಗುಲುವ ವೆಚ್ಚ ಭರಿಸಬೇಕಾಗುತ್ತದೆ ಎಂದು ಮೌಖೀಕ ಎಚ್ಚರಿಕೆ ನೀಡಿತು.

ಎಷ್ಟು ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಎಷ್ಟು ಅನಧಿಕೃತ ಮಳಿಗೆಗಳಿವೆ ಎಂದು ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕುತ್ತರಿಸಿದ ವಕೀಲರು, ಒಟ್ಟು 1,285 ಮಳಿಗೆಗಳಿಗೆ ನಕ್ಷೆ ಮಂಜೂರು ಮಾಡಲಾಗಿದೆ.

ಮಾರುಕಟ್ಟೆಯ ಸಂಕೀರ್ಣದ ಮೊದಲ ಮಹಡಿಯಲ್ಲಿ 24 ಅನಧಿಕೃತ ಮಳಿಗೆಗಳಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆಗೆ ತಗಲುವ ವೆಚ್ಚ ನಕಾಶೆ ಮಂಜೂರು ಮಾಡಿದ ಅಧಿಕಾರಗಳೇ ಭರಿಸಬೇಕಾದಿತು ಎಂದು ನ್ಯಾಯಪೀಠ ಹೇಳಿತು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.