ಭೂ ಹಗರಣದಲ್ಲಿ ಕೃಷ್ಣಪ್ಪ ಪಾತ್ರವಿಲ್ಲ


Team Udayavani, Jun 7, 2017, 1:31 PM IST

krishnapp.jpg

ಬೆಂಗಳೂರು: ಭೂಸ್ವಾಧೀನದಲ್ಲಿ ಮಧ್ಯವರ್ತಿಯಾಗಿ ರೈತರನ್ನು ವಂಚಿಸಿದ್ದ ಆರೋಪದ ಪ್ರಕರಣದಲ್ಲಿ ವಸತಿ ಸಚಿವ ಎಂ. ಕೃಷ್ಣಪ್ಪ ಅವರ ಯಾವುದೇ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ವರದಿ ನೀಡಿದ್ದಾರೆ.

ಪ್ರಕರಣ ಸಂಬಂಧ ರಾಜ್ಯ ಅಡ್ವೋಕೇಟ್‌ ಜನರಲ್‌ ಅವರು “ಪ್ರಕರಣದಲ್ಲಿ ಸಚಿವ ಎಂ. ಕೃಷ್ಣಪ್ಪ ಅವರದ್ದು ಯಾವುದೇ ಪಾತ್ರವಿಲ್ಲ’ ಎಂದು ಅಭಿಪ್ರಾಯ ನೀಡಿದ್ದು, ಅವರ ಅಭಿಪ್ರಾಯದ ಜತೆಗೆ ಸಿಎಂ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ 1989ರಲ್ಲಿ ವಾಜರಹಳ್ಳಿ, ರಘುವನಹಳ್ಳಿಯಲ್ಲಿ ನಡೆದ ಭೂಸ್ವಾಧೀನ ಪ್ರಕರಣದಲ್ಲಿ ಎಂ. ಕೃಷ್ಣಪ್ಪ ಮಧ್ಯವರ್ತಿಯಾಗಿ ಅಲ್ಲ, ಒಬ್ಬ ಗುತ್ತಿಗೆದಾರರಾಗಿ ಕೆಲಸ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅವರಂತೆ ಅನೇಕ ಗುತ್ತಿಗೆದಾರರು ಇದ್ದಾರೆ. ಕೃಷ್ಣಪ್ಪ ಅವರು ರೈತರ ಮೇಲೆ ಒತ್ತಡ ಹೇರಿಲ್ಲ.

1989ರಲ್ಲಿ ಕೃಷ್ಣಪ್ಪ ಅವರಿಗೆ ಯಾವುದೇ ಅಧಿಕಾರ ಇರಲಿಲ್ಲ. ಹಾಗಾಗಿ ವಂಚನೆ ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಎಂದು ವರದಿಯಲ್ಲಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಚಿವರ ಮೇಲೆ ಗಂಭೀರ ಆರೋಪಗಳಿದ್ದರೆ ಸಹಿಸುವುದಿಲ್ಲ’ ಎಂದು ವರದಿಯಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಭೂಸ್ವಾಧೀನ ಪ್ರಕರಣಲ್ಲಿ ಎಂ. ಕೃಷ್ಣಪ್ಪ ಅವರು ರೈತರಿಂದ ಬಲವಂತವಾಗಿ ಜಿಪಿಎ ಪಡೆದುಕೊಂಡು ಸರ್ಕಾರದಿಂದ ಭೂಪರಿಹಾರ ಮಂಜೂರು ಮಾಡಿಸಿಕೊಂಡಿದ್ದರು ಎಂದು ಆರೋಪಿಸಿದ್ದ ರೈತರು, ನ್ಯಾಯ ಕೇಳಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಸಚಿವರ ಪ್ರಭಾವ ಅಕ್ರಮಕ್ಕೆ ಸಮ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್‌, ಭೂಸ್ವಾಧೀನವನ್ನು ರದ್ದುಪಡಿಸಿತ್ತು. ಇದರ ಆಧಾರದಲ್ಲಿ “ಕಳಂಕಿತರನ್ನು ಸಚಿವ ಸಂಪುಟದಲ್ಲಿ ಮುಂದುವರಿಸುವುದು ಎಷ್ಟು ಸರಿ’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮುಖ್ಯಮಂತ್ರಿಯವರಿಂದ ವರದಿ ಕೇಳಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.