ಮೂಲ ಸೌಲಭ್ಯ ಕೊರತೆ ; ಮಾರುಕಟ್ಟೆ ಸ್ಥಳಾಂತರ

ಏ.21ರಿಂದ ವ್ಯಾಪಾರ ಸಗಿತಕ್ಕೆ ನಿರ್ಧಾರ

Team Udayavani, Apr 19, 2020, 10:05 AM IST

ಮಾರುಕಟ್ಟೆ ಸ್ಥಳಾಂತರ

ಬೆಂಗಳೂರು: ಮೂಲಸೌಲಭ್ಯ ಕೊರೆತೆಯ ಹಿನ್ನೆಲೆಯಲ್ಲಿ ತುಮಕೂರು ರಸ್ತೆಯ ನೆಲಮಂಗಲ ಸಮೀಪದ ದಾಸನಪುರ ಉಪ ಮಾರುಕಟ್ಟೆಯಲ್ಲಿ ಮಂಗಳವಾರದಿಂದ ವ್ಯಾಪಾರ ವಾಹಿವಾಟನ್ನು ಸ್ಥಗಿತಗೊಳಿಸಲು ನಿರ್ಧಾರಕ್ಕೆ ವರ್ತಕರು, ಹಮಾಲಿಗಳು ಮತ್ತು ಗುಮಾಸ್ತರು ನಿರ್ಧರಿಸಿದ್ದಾರೆ.

ಈ ಹಿಂದೆ ಕೋವಿಡ್ 19 ಭೀತಿಯ ಹಿನ್ನೆಲೆಯಲ್ಲಿ ಯಶವಂತಪುರದಿಂದ ನೆಲಮಂಗಲ ಸಮೀಪದ ದಾಸನಪುರದಲ್ಲಿರುವ ಉಪ ಮಾರು ಕಟ್ಟೆಗೆ ವ್ಯಾಪಾರವನ್ನು ಸ್ಥಳಾಂತರ ಮಾಡಲ್ಲಾಗಿತ್ತು. ಎಪಿಎಂಸಿ ನಿರ್ದೇಶಕರ ಮನವಿ ಮೇರೆಗೆ ಯಶವಂತಪುರ ಸುಮಾರು 600 ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರು ದಾಸನಪುರ ಉಪ ಮಾರುಕಟ್ಟೆಯಲ್ಲಿ ತಾತ್ಕಾಲಿಕ ವ್ಯಾಪಾರ ಮಾಡಲು ನಿರ್ಧರಿಸಿದ್ದರು. ಆದರೆ ದಾಸನಪುರ ಮಾರುಕಟ್ಟೆಯಲ್ಲಿ ಮೂಲಸೌಕರ್ಯದ ಕೊರತೆ ಎದುರಾಗಿದೆ.

ನೆಲಮಂಗಲದಿಂದ ದಾಸನಪುರ ಮಾರುಕಟ್ಟೆಗೆ ಹೋಗಲು ವಾಹನ ವ್ಯಾವಸ್ಥೆಯಿಲ್ಲ. ಜತೆಗೆ ನೀರಿನ ಸೌಕರ್ಯವಿಲ್ಲ. ಆ ಹಿನ್ನೆಲೆ  ಯಲ್ಲಿಯೇ ರೈತರು ಮತ್ತು ಹಮಾಲಿನಗಳು ಕೂಡ ದಾಸನಪುರ ಮಾರುಕಟ್ಟೆಯತ್ತ ಸುಳಿಯುತ್ತಿಲ್ಲ. ಜತೆಗೆ ಹಣ ಪಡೆಯಲು ಬ್ಯಾಕಿಂಗ್‌ ವ್ಯವಸ್ಥೆಯೇ ಇಲ್ಲ ಎಂದು ವರ್ತಕರು ದೂರಿದ್ದಾರೆ.

ಕ್ರಮ ಕೈಗೊಂಡಿಲ್ಲ: ದೂರದೂರುಗಳಿಂದ ಹೊರ ರಾಜ್ಯಗಳಿಂದ ವ್ಯಾಪಾರಿಗಳು, ರೈತರು ಬರುತ್ತಾರೆ. ಆದರೆ ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕೆಲಸ ಕೂಡ ನಡೆದಿಲ್ಲ. ಹೀಗಾಗಿಯೇ ವ್ಯಾಪಾರಿಗಳು ಕೂಡ ಕೋವಿಡ್ 19 ವೈರಸ್‌ ಸಂಬಂಧದ ಭಯ ಕಾಡತೊಡಗಿದೆ. ಮಾರಾಟ ಅಂಗಡಿಗಳು ಕೂಡ ಅಕ್ಕಪಕ್ಕಯಿವೆ, ಜೊತೆಗೆ ಕೊಳ್ಳುವ ಬರುವ ಸಾರ್ವಜನಿಕರು ಕೂಡ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಕೆಲಸ ನಡೆದಿಲ್ಲ. ಆ ಹಿನ್ನೆಲೆಯಲ್ಲಿಯೇ ಹಮಾನಿಗಳು ಕೂಡ ದಾಸನಪುರ ಮಾರುಕಟ್ಟೆಯತ್ತ ಸುಳಿಯುತ್ತಿಲ್ಲ ಎಂದು ವರ್ತಕರು ಹೇಳಿದ್ದಾರೆ.

21ಕ್ಕೆ ಸ್ಥಗಿತ ಸಾಧ್ಯತೆ: ಕೆಲವು ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರ ಬಳಿ ಇನ್ನೂ ಆವಕ ಇದೆ. ಸೋಮವಾರದ ವೇಳೆಗೆ ಇದು ಮುಗಿಯಲಿದೆ. ಆ ಹಿನ್ನೆಲೆಯಲ್ಲಿಯೇ ಮಂಗಳವಾರ (ಏ.21) ದಿಂದ ವರ್ತಕರು ದಾಸನಪುರ ಉಪ ಮಾರುಕಟ್ಟೆ ಯನ್ನು ಸ್ಥಗಿತಗೊಳಿಸಲು ನಿರ್ಧ ರಿಸಿ ದ್ದಾರೆ. ಈ ಬಗ್ಗೆ ಈಗಾಗಲೇ ವರ್ತಕರು, ಹಮಾಲಿಗಳು ಹಾಗೂ ಗುಮಾಸ್ತರುಗಳು ಸ್ವಯಂ ಪ್ರೇರಿತವಾಗಿ ಚರ್ಚೆ ನಡೆಸಿ ಒಮ್ಮತ ವಾದ ತೀರ್ಮಾ ನಕ್ಕೆ ಬಂದಿದ್ದಾರೆ. ಈ ಹಿಂದೆ ಕೋವಿಡ್ 19 ಭೀತಿಯ ಹಿನ್ನೆಲೆಯಲ್ಲಿ ಅಧಿಕಾರಿ ಗಳು ಒಂದು ತಿಂಗಳ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ನಾವು ಸ್ಪಂದಿಸಿದ್ದೇವು. ಆದರೆ ಇಲ್ಲಿ ಮೂಲಭೂತಗಳ ಸೌಲಭ್ಯಗಲೇ ಇಲ್ಲ. ಆ ಹಿನ್ನೆಲೆಯಲ್ಲಿ ವ್ಯಾಪಾರ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಗುಮಾಸ್ತರು ಹೇಳಿದ್ದಾರೆ.

ಯಶವಂತಪುರದಲ್ಲೇ ವ್ಯಾಪಾರ: ಕೋವಿಡ್ 19 ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಏ. 14 ರವರೆಗೂ ಲಾಕ್‌ ಡೌನ್‌ ಗೆ ಕರೆ ನೀಡಿದೆ. ಒಂದು ವೇಳೆ ಲಾಕ್‌ ಡೌನ್‌ ತೆರೆವುಗೊಂಡರೆ ಯಶವಂತಪುರ ಎಪಿಎಂಸಿಯಲ್ಲಿಯೇ ವ್ಯಾಪಾರ ನಡೆಸುತ್ತೇವೆ. ಲಾಕ್‌ ಡೌನ್‌ ತೆರವುಗೊಳ್ಳಲಿದ್ದರೆ. ಮೇ.1ರವರೆಗೂ ಕಾದು ಆ ನಂತರ ಮತ್ತೆ ಯಶವಂತಪುರ ಮಾರುಕಟ್ಟೆಯಲ್ಲೇ ವ್ಯಾಪಾರ ಆರಂಭಿಸಲಾಗುವುದು ಎಂದು ವರ್ತಕರು ಹೇಳಿದ್ದಾರೆ.

ಮೂಲ ಸೌಕರ್ಯ ಮರೀಚಿಕೆ :  ಮಾರುಕಟ್ಟೆ ಅಂದ ಮೇಲೆ ಕನಿಷ್ಠ ಮೂಲಸೌಕರ್ಯಗಳಾದರೂ ಇರಬೇಕು. ಅಲ್ಲಿ ಯಾವುದೇ ಸೌಲಭ್ಯಗಳು ಇಲ್ಲ. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ವ್ಯವಸ್ಥೆಯೇ ಇಲ್ಲ. ಅಧಿಕಾರಿಗಳ ಮನವಿ ಮೇರೆಗೆ ನಾವು ಅಲ್ಲಿ ವ್ಯಾಪಾರ ಮಾಡಲುಒಪ್ಪಿಕೊಂಡಿದ್ದೆವು. ಆದರೆ ಮೂಲ ಸೌಕರ್ಯಗಳೇ ಇಲ್ಲದೆ ವ್ಯಾಪಾರ ಎಲ್ಲಿಂದ ಎಂದು ವರ್ತಕರು ಪ್ರಶ್ನಿಸಿದ್ದಾರೆ.

ಖರೀದಿದಾರರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿದ್ದವು. ಆ ಹಿನ್ನೆಲೆಯಲ್ಲಿ ದಾಸನಪುರ ಉಪ ಮಾರುಕಟ್ಟೆಯಲ್ಲಿ ವ್ಯಾಪಾರ ಸ್ಥಗಿತಗೊಳಿಸುವ ತೀರ್ಮಾನಕ್ಕೆ ವ್ಯಾಪಾರಿಗಳು ಬಂದಿದ್ದಾರೆ.  ಉದಯಶಂಕರ್‌, ಆಲೂಗಡ್ಡೆ, ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ

ಕೆ.ಆರ್‌.ಮಾರುಕಟ್ಟೆಯನ್ನು ಸಿಂಗೇನ ಅಗ್ರಹಾರಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಿದೆ. ಆದರೆ, ಇಲ್ಲಿ ಸರಿಯಾದ ಮೂಲಸೌಕರ್ಯ ಇಲ್ಲದ ಹಿನ್ನೆಲೆಯಲ್ಲಿ ಈ ಭಾಗದ ಸ್ಥಳೀಯರಿಗೆ ಕೊರೊನಾ ಬಗ್ಗೆ ಆತಂಕ ಮನೆ ಮಾಡಿದೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು   ಸುಷ್ಮಾ, ಗ್ರಾಪಂ ಅಧ್ಯಕ್ಷರು ಹುಸ್ಕೂರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.