ಒಕ್ಕಲಿಗ ಸಮುದಾಯದಲ್ಲಿ ಐಕ್ಯತೆ ಬರಲಿ: ಎಚ್.ಡಿ. ದೇವೇಗೌಡ
Team Udayavani, Sep 19, 2017, 9:45 AM IST
ಬೆಂಗಳೂರು: ‘ಒಕ್ಕಲಿಗ ಸಮುದಾಯದಲ್ಲಿ ಒಗ್ಗಟ್ಟಿಲ್ಲ. ಸಮುದಾಯದ ಮೂವರು ಸ್ವಾಮೀಜಿಗಳು ಸಮಾಜವನ್ನು ಒಟ್ಟಿಗೆ ಮುನ್ನಡೆಸುವ ಮೂಲಕ ಸಮುದಾಯದವರಲ್ಲಿ ಐಕ್ಯತೆ ಮೂಡಿಸಲು ಮುಂದಾಗಬೇಕು’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ರಾಜ್ಯ ಒಕ್ಕಲಿಗರ ಸಂಘವು ಕೃಷ್ಣಪ್ಪ ರಂಗಮ್ಮ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಸಂಘದ ಕುವೆಂಪು ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಅಪೂರ್ವ ಪುರುಷಸಿಂಹ ಕೆ.ಎಚ್. ರಾಮಯ್ಯ’ ಸಂಸ್ಮರಣ ಗ್ರಂಥ ಬಿಡುಗಡೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಆದಿಚುಂಚನಗಿರಿ ಮಠದ ಹಿಂದಿನ ಮಠಾಧಿಪತಿಗಳಾಗಿದ್ದ ಡಾ| ಬಾಲಗಂಗಾಧರನಾಥ ಸ್ವಾಮೀಜಿ ಅವರೊಂದಿಗೆ ಸ್ವಲ್ಪ ವ್ಯತ್ಯಾಸವಿದ್ದರೂ ಅದು ವೈಯಕ್ತಿಕವಾಗಿರಲಿಲ್ಲ. ಅವರ ದೂರದೃಷ್ಟಿ, ಕೊಡುಗೆಯನ್ನು ಸಮುದಾಯವರು ಸದಾ ಸ್ಮರಿಸಬೇಕು’ ಎಂದು ಅವರು ಬಣ್ಣಿಸಿದರು.
ದೇವೇಗೌಡರು ನನ್ನ ನಾಯಕರು
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾತನಾಡಿ, ‘ದೇವೇಗೌಡರು ನನ್ನ ನಾಯಕರು. ಯಾವುದೇ ಸಂದರ್ಭದಲ್ಲೂ ನಮ್ಮತನವನ್ನು ಗಟ್ಟಿಯಾಗಿ ಉಳಿಸಿಕೊಂಡು ನಡೆಸುವಲ್ಲಿ ಈ ಹಿಂದೆ ಕೆಲವು ಲೋಪಗಳಾಗಿದ್ದು, ಅದನ್ನು ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಆ ರೀತಿ ಆಗದಂತೆ ಮುನ್ನೆಚ್ಚರಿಕೆಯಿಂದ ಮುಂದುವರಿಯುತ್ತೇನೆ’ ಎಂದು ಹೇಳಿದರು.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.36ರಷ್ಟು ಒಕ್ಕಲಿಗರಿದ್ದು, ಗೆಲುವಿಗೆ ನಿರ್ಣಾಯಕರೆನಿಸಿದ್ದಾರೆ. ಆ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದಾಗ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದಾಗ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡರೆ ಉಪಯುಕ್ತವಾಗಲಿದೆ ಎಂದು ಸಲಹೆ ನೀಡಿದರು. ಅಲ್ಲಿಯವರೆಗೆ ಸದಾನಂದನಾಗಿದ್ದ ನಾನು ಸದಾನಂದ ಗೌಡನಾದೆ. ಈ ಗೌಡ ಹೆಸರಿನ ಏಣಿಯ ಮೂಲಕ ಈವರೆಗೆ ನಾನಾ ಉನ್ನತ ಸ್ಥಾನಗಳನ್ನು ಪಡೆದಿದ್ದೇನೆ ಎಂದು ಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.