Bangalore: ಕಾಡಂಚಿನ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಚಿರತೆ!


Team Udayavani, Oct 31, 2023, 11:01 AM IST

Bangalore: ಕಾಡಂಚಿನ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಚಿರತೆ!

ಬೆಂಗಳೂರು: ಬೊಮ್ಮನಹಳ್ಳಿ ಸಿಂಗ ಸಂದ್ರಲ್ಲಿರುವ ಎಸಿಅಸ್‌ ಲೇಔಟ್‌ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್‌ವೊಂದರ ಮುಂದೆ ಚಿರತೆ ರಾಜಾರೋಷವಾಗಿ ಓಡಾಡುತ್ತಿದ್ದು, ಸಾಮಾಜಿಕ ಜಾಲತಾಣ ದಲ್ಲಿ ಭಯಾನಕ ದೃಶ್ಯ ವೈರಲ್‌ ಆಗಿದೆ.

ಚಿರತೆಯೊಂದು ಕೂಡ್ಲುಗೇಟ್‌ ಬಳಿಯ ಸಲಾರ್‌ಪುರಿಯ ಸತ್ವ ಕ್ಯಾಡೆನಾj ಅಪಾರ್ಟ್‌ಮೆಂಟ್‌ ಒಳಗೆ ನುಗ್ಗಿತ್ತು. ಅಪಾರ್ಟ್‌ ಮೆಂಟ್‌ನ ಪಾರ್ಕಿಂಗ್‌ ಸ್ಥಳದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ. ಬೊಮ್ಮನಹಳ್ಳಿ ಸಿಂಗಸಂದ್ರ, ಹೊಸಪಾಳ್ಯ, ಕೂಡ್ಲು ಸೇರಿ ಹಲವು ಭಾಗದಲ್ಲಿ ಚಿರತೆ ಓಡಾಟ ನಡೆಸಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೊಟ್ಟ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆಗೆ ಮುಂದಾಗಿದ್ದಾರೆ.

ಚಿರತೆ ಸೆರೆಯಾದ ವಿಡಿಯೋದಲ್ಲೇನಿದೆ ?:  ಅ.28ರಂದು ಮುಂಜಾನೆ ಚಿರತೆ ಅಪಾರ್ಟ್‌ಮೆಂಟ್‌ ಒಳಕ್ಕೆ ಪ್ರವೇಶಿಸುತ್ತದೆ. ಆನಂತರ ಮೆಟ್ಟಿಲುಗಳನ್ನೇರಿ ಮೊದಲ ಮಹಡಿಗೆ ಹೋಗುತ್ತದೆ. ಅಲ್ಲಿದ್ದ ಲಿಫ್ಟ್ ಬಳಿ ಸುತ್ತ-ಮುತ್ತ ಓಡಾಡಿದೆ. ಮತ್ತೆ ಕೆಳಕ್ಕೆ ಇಳಿದು ಬಂದು ಅಲ್ಲಿಂದ ಏಕಾಏಕಿ ಓಡಿ ಹೋಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಡ್ರೋಣ್‌ ಮೂಲಕ ಚಿರತೆ ಪತ್ತೆ ಮಾಡಲು ಮುಂದಾಗಿದ್ದಾರೆ.

ಚಿರತೆ ಪತ್ತೆ ಯಾಗಿರುವ ಆಪಾರ್ಟ್‌ಮೆಂಟ್‌ಗಳ ಬಳಿ ನಾಲ್ಕೂವರೆ ಎಕರೆಯಷ್ಟು ಅರಣ್ಯ ಪ್ರದೇಶ ವಿದೆ. ಚಿರತೆ ಅಲ್ಲಿಂದಲೇ ಬಂದಿರಬಹುದು ಅಥವಾ ಅಲ್ಲೇ ಅಡಗಿರ ಬಹದು ಎಂಬ ಭೀತಿ ಎದುರಾಗಿದೆ.  ಬೆಳಗಿನ ಜಾವದಲ್ಲಿ ಸಾಮಾನ್ಯ ವಾಗಿ ವಯಸ್ಕರು ವಾಯು ವಿಹಾರಕ್ಕೆ ಹೊರ ಹೋಗುತ್ತಾರೆ. ಗೃಹಿಣಿಯರು ಹಾಲು, ದಿನಸಿ ವಸ್ತು ಖರೀದಿಗೆ ಇಲ್ಲಿ ಓಡಾಡುತ್ತಾರೆ. ಇದೀಗ ಬೊಮ್ಮನಹಳ್ಳಿ, ಎಚ್‌ಎಸ್‌ಆರ್‌, ಬಿಟಿಎಮ್‌ ಲೇಔಟ್‌ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.