ಪಾಠ ಇಂಗ್ಲಿಷ್‌ ಆದರೂ ಚಿಂತನೆ ಕನ್ನಡ


Team Udayavani, Jun 17, 2019, 3:06 AM IST

patha

ಬೆಂಗಳೂರು: ವಿಮರ್ಶೆಗೆ ನಿಷ್ಠರಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ತಮ್ಮ ಬದುಕಿನುದ್ದಕ್ಕೂ ಅದನ್ನು ಒಂದು ವ್ರತದಂತೆ ಆಚರಿಸಿದರು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.

ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತು ಭಾನುವಾರ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವಿರತ ಪುಸ್ತಕ ಹೊರತಂದಿರುವ “ಡಾ. ಗಿರಡ್ಡಿ ಗೋವಿಂದರಾಜ: ವ್ಯಕ್ತಿ-ವಾಙ್ಮಯ’ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಗಿರಡ್ಡಿಯವರ ವಿಮರ್ಶೆ ಓದಿದಾಗ ಮಲ್ಲಿಕಾರ್ಜುನ ಮನ್ಸೂರ ಅವರ ಸಂಗೀತ ಕೇಳಿದ ಅನುಭವ ಆಗುತ್ತದೆ’ ಎಂದು ಡಾ.ಎಂ.ಎಂ. ಕಲಬುರಗಿಯವರು ತಮ್ಮ ಲೇಖನ ಒಂದರಲ್ಲಿ ಉಲ್ಲೇಖೀಸಿದ್ದಾರೆ. ಗಿರಡ್ಡಿಯವರು ವಿಮರ್ಶೆಗೆ ವಿಶಿಷ್ಟ ಮತ್ತು ವಿಸ್ಮತ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಬರವಣಿಗೆ ಶುದ್ಧಿ ಹೊಂದಿದ್ದ ಅವರು ವಿಮರ್ಶೆಗೆ ಇಂಗ್ಲಿಷ್‌ ಮಾನದಂಡಗಳನ್ನು ಅಳವಡಿಸಿಕೊಳ್ಳುತ್ತಿದ್ದರು ಎಂದರು.

ಇಂಗ್ಲಿಷ್‌ ಪಾಠ ಮಾಡುತ್ತಿದ್ದರೂ ಗಿರಡ್ಡಿಯವರ ಚಿಂತನೆ ಕನ್ನಡದ ಕುರಿತಾಗಿತ್ತು. ಇಂಗ್ಲಿಷ್‌ನಲ್ಲಿ ಕಲಿತ ವಿದ್ವತ್ತನ್ನು ಕನ್ನಡಕ್ಕೆ ಧಾರೆ ಎರೆಯುತ್ತಾ ಬಂದರು. ಕನ್ನಡ ಎಂ.ಎ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರ ಬಗ್ಗೆ ಅವರಿಗೆ ತುಂಬಾ ಬೇಸರ ಇತ್ತು. ವಿಮರ್ಶೆಗಳ ಮೂಲಕ ಓದುಗರಲ್ಲಿ ಓದುವ ಅಭಿರುಚಿ ಹುಟ್ಟು ಹಾಕುತ್ತಿದ್ದ ಗಿರಡ್ಡಿಯವರು, ಸಾಹಿತ್ಯ ಓದಿಗೆ ಒಂದು ವಲಯವನ್ನು ಕಟ್ಟಿಕೊಟ್ಟರು ಎಂದು ಸ್ಮರಿಸಿದ ವಸುಂಧಾರ ಅವರು, ಮಹಿಳಾ ಸಾಹಿತ್ಯ ವಿಮರ್ಶೆ ಬಗ್ಗೆ ಗಿರಡ್ಡಿಯವರಿಗೆ ಒಂದಿಷ್ಟು ಅಸಡ್ಡೆ ಇತ್ತು ಅನ್ನುವುದು ಅನೇಕರ ಭಾವನೆಯಾಗಿತ್ತು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ. ಸಿ.ಎನ್‌. ರಾಮಚಂದ್ರನ್‌ ಮಾತನಾಡಿ, ಗಿರಡ್ಡಿ ಅವರು ಕರ್ನಾಟಕ ಸಾಹಿತ್ಯಅಕಾಡೆಮಿಯ ಅಧ್ಯಕ್ಷರಾಗಿದ್ದ ಕೊನೆಯ ಅವಧಿಯಲ್ಲಿ ಕೈಗೊಂಡ ಶತಮಾನದ ಸಾಹಿತ್ಯ ಸಂಕಲನ ಹೊರತಂದಿದ್ದು ಅವರಿಗೆ ಕಿರಿಟಪ್ರಾಯವಾಗಿತ್ತು. 20ನೇ ಶತಮಾನದಲ್ಲಿ ರಚನೆಗೊಂಡ ಶ್ರೇಷ್ಠ ಕಥೆ, ಕವನ, ವಿಮರ್ಶೆ, ಸಂಶೋಧನೆ, ಲಲಿತ ಪ್ರಬಂಧ ಸೇರಿದಂತೆ ಒಟ್ಟು ಆರು ವಿಧದ ಸಂಪುಟಗಳ ಸಂಪಾದಿಸಿ ಪ್ರಕಟಿಸಿದ್ದು, ಅಸಾಧಾರಣ ಕಾರ್ಯ ಎಂದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 21 ಮಂದಿ ಸಾಧಕರಿಗೆ “ಕನ್ನಡ ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ಮದ್ರಾಸ್‌ ವಿವಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ತಮಿಳ್‌ ಸೆಲ್ವಿ, ನಗರ ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾಯಣ್ಣ, ಕೃತಿಯ ಸಂಪಾದಕರಾದ ಟಿ.ಎಸ್‌. ದಕ್ಷಿಣಾಮೂರ್ತಿ, ಪ್ರೊ. ಮಹೇಶ್‌ ತಿಪ್ಪಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಹತ್ತಿ ಬಟ್ಟೆಯ ಧ್ವಜ ಬಳಸಿ: ಎಲ್ಲ ಕನ್ನಡಪರ ಸಂಘಟನೆಗಳು ಇನ್ನು ಮುಂದೆ ಹತ್ತಿ ಬಟ್ಟೆಯಿಂದ ತಯಾರಿಸಿದ ಧ್ವಜ ಮತ್ತು ಬಾವುಟಗಳನ್ನು ಬಳಸಬೇಕು. ಏಕೆಂದರೆ, ಈಗ ಬಳಸುತ್ತಿರುವ ಧ್ವಜ ಪಾಲಿಸ್ಟರ್‌ ಬಟ್ಟೆಯದ್ದು, ಇದು ಮಣ್ಣಲ್ಲೂ ಕರಗುವುದಿಲ್ಲ. ಮೈ ಮತ್ತು ಚರ್ಮಕ್ಕೂ ಅದು ಒಳ್ಳೆಯದಲ್ಲ. ಹತ್ತಿ ನಾಡಿನ ಘನತೆಗೆ ಬಹಳ ಮುಖ್ಯ. ಅಲ್ಲದೇ ಹತ್ತಿ ಬಳಸಿದರೆ ಹತ್ತಿ ಬೆಳೆಯುವ ರೈತರಿಗೆ ಉತ್ತೇಜನ ನೀಡಿದಂತಾಗುತ್ತದೆ. ಆದ್ದರಿಂದ ಕನ್ನಡಪರ ಸಂಘಟನೆಗಳು ಹಾರಿಸಲು ಮತ್ತು ಹಾಕಿಕೊಳ್ಳಲು ಹತ್ತಿ ಬಟ್ಟೆಯ ಧ್ವಜಗಳನ್ನು ಬಳಸುವಂತೆ ವಸುಂಧರಾ ಭೂಪತಿ ಮನವಿ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.