ಬಡತನ, ಅಸ್ಪ್ರಶ್ಯತೆ ಮುಕ್ತ ಭಾರತ ಪಕ್ಷಗಳ ಆದ್ಯತೆಯಾಗಲಿ
Team Udayavani, Mar 30, 2018, 11:38 AM IST
ಬೆಂಗಳೂರು: ದೇಶವನ್ನು ಬಡತನ, ಅಸ್ಪ್ರಶ್ಯತೆ, ಅಸಮಾನತೆ ಮುಕ್ತವಾಗಿಸಲು ರಾಜಕೀಯ ಪಕ್ಷಗಳು ಆದ್ಯತೆ ನೀಡಲಿ ಎಂದು ಮಾಜಿ ಸಚಿವೆ ಹಾಗೂ ಸಾಹಿತಿ ಡಾ.ಬಿ.ಟಿ.ಲಲಿತಾನಾಯಕ್ ಅಭಿಪ್ರಾಯಪಟ್ಟರು.
ಅಖೀಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆದ ಸಾಹಿತ್ಯ ರಚನಾ ಕಮ್ಮಟದಲ್ಲಿ “ಬಂಡಾಯ ಸಾಹಿತ್ಯದ ಹಿನ್ನೆಲೆ’ ಕುರಿತು ಮಾತನಾಡಿದ ಅವರು, ಸಮಾಜದಲ್ಲಿ ಇಂದಿಗೂ ದೌರ್ಜನ್ಯ, ಜಾತೀಯತೆ, ಕೋಮುವಾದ ಶಕ್ತಿಗಳು ಬೇರೂರಿವೆ. ಇವುಗಳ ವಿರುದ್ಧ ಬಂಡಾಯ ಶಕ್ತಿ ಮೊಳಗಬೇಕು ಎಂದರು.
ಚುನಾವಣೆ ಸಂಧರ್ಭದಲ್ಲಿ ಬಿಜೆಪಿ ಮುಕ್ತ, ಕಾಂಗ್ರೆಸ್ ಮುಕ್ತ ಎಂದು ಅಬ್ಬರದ ಘೋಷಣೆಗಳ ಬದಲಿಗೆ ದೇಶವನ್ನು ಕಾಡುವ ಹಸಿವು, ಅಸ್ಪಶ್ಯತೆ ಸಮಸ್ಯೆಗಳನ್ನು ಮುಕ್ತ ಮಾಡುತ್ತೇವೆ ಎಂಬ ಹೊಸ ಚಿಂತನೆಗೆ ತೆರೆದುಕೊಳ್ಳಲಿ ಎಂದು ಸಲಹೆ ನೀಡಿದರು.
ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಮಾತನಾಡಿ, ಸಾಹಿತಿಯ ಬರವಣಿಗೆಗೆ ಎಂದಿಗೂ ಅಕ್ಷರ ಹಾಗೂ ಕ್ರಿಯಾ ಆಯಾಮವಿರಬೇಕು. ಈ ಸಾಧ್ಯತೆಗಳನ್ನು ಬಳಸಿಕೊಂಡು ಗಟ್ಟಿ ಸಾಹಿತ್ಯ ರಚಿಸಬೇಕು. ಅನಿವಾರ್ಯವಾದರೆ ಕ್ರಿಯೆಗೆ ಇಳಿಯಬೇಕು.
ಅಲ್ಲದೆ, ಕಳೆದ 40 ವರ್ಷಗಳ ಹಿಂದೆ ಬಂಡಾಯ ಸಾಹಿತ್ಯ ಯಾವ ಸವಾಲುಗಳನ್ನು ಎದುರಿಸುತ್ತಿತ್ತೋ, ಅವು ಇನ್ನೂ ಜೀವಂತವಾಗಿವೆ. ಹೀಗಾಗಿ ಬಂಡಾಯ ಭೂತಕಾಲದ್ದರೂ ಇಂದಿನ ತುರ್ತಾಗಿದ್ದು, ಸಮಾಜಘಾತುಕ ಶಕ್ತಿಗಳನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು.
ಮಂಡ್ಯ ಜಿಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ ಸತೀಶ್ ಜವರೇಗೌಡ, ಕರ್ನಾಟಕ ಕೈಗಾರಿಕಾ ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ. ತಿಮ್ಮಯ್ಯ, ಅಖೀಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಟಿ.ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.