ಕೇಂದ್ರ ಗೃಹ ಸಚಿವರ ಮಧ್ಯಪ್ರವೇಶ ಕೋರಿ ಶೋಭಾ ಕರಂದ್ಲಾಜೆ ಪತ್ರ


Team Udayavani, Apr 30, 2019, 3:05 AM IST

gruha

ಬೆಂಗಳೂರು: ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತರು, ಪಕ್ಷದ ಪರ ಒಲವು ಹೊಂದಿರುವವರನ್ನು ಗುರಿಯಾಗಿಸಿಕೊಂಡು ಪ್ರತೀಕಾರ ತೋರುತ್ತಿದ್ದು, ಕೂಡಲೇ ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರಿಗೆ ಸೋಮವಾರ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರವು ಬಿಜೆಪಿ ಪರ ಒಲವು ಹೊಂದಿರುವವರ ವಿರುದ್ಧ ಸುಳ್ಳು ಆರೋಪ ಹೊರಿಸಿ ತೊಂದರೆ ನೀಡಲಾರಂಭಿಸಿದೆ.

ಪ್ರತ್ಯೇಕ ಧರ್ಮ ಸ್ಥಾಪನೆ ಹೆಸರಿನಲ್ಲಿ ಲಿಂಗಾಯಿತ ಮತಗಳನ್ನು ವಿಭಜಿಸುವ ಕಾರ್ಯತಂತ್ರದ ಬಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾಗಾಂಧಿಯವರಿಗೆ ಬರೆದಿದ್ದಾರೆ ಎನ್ನಲಾದ ಪತ್ರಕ್ಕೆ ಸಂಬಂಧಪಟ್ಟಂತೆ ಎಂ.ಬಿ.ಪಾಟೀಲ್‌ ದೂರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಧರಿಸಿ ಅನಗತ್ಯವಾಗಿ ಕೆಲವರನ್ನು ವಿಚಾರಣೆಗೆ ಒಳಪಡಿಸುವುದು, ಬಂಧಿಸುತ್ತಿರುವುದು ಖಂಡನೀಯ ಎಂದು ಪತ್ರದಲ್ಲಿ ದೂರಿದ್ದಾರೆ.

ತಾವು ಯಾವುದೇ ಪತ್ರ ಬರೆದಿಲ್ಲ. ಅದು ನಕಲಿ ಪತ್ರ ಎಂಬುದಾಗಿ ಎಂ.ಬಿ.ಪಾಟೀಲ್‌ ಹೇಳಿದ್ದರು. ಗೃಹ ಸಚಿವರೇ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಅಧಿಕಾರಿಗಳು ಒತ್ತಡದಲ್ಲಿದ್ದು, ಮಹೇಶ್‌ ವಿಕ್ರಮ್‌ ಹೆಗ್ಡೆ ಅವರನ್ನು ಬಂಧಿಸಿ ಎರಡು ದಿನ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.

ಏ.27ರಂದು ಬಿಜೆಪಿ ಪರ ಒಲವುಳ್ಳ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು ನಕಲಿ ಪತ್ರ ಸೃಷ್ಟಿಸಿ ಹುಬ್ಬಳ್ಳಿಯಲ್ಲಿ ವೈರಲ್‌ ಮಾಡಿದ ಆರೋಪದಲ್ಲಿ ಬಂಧಿಸಲಾಗಿದೆ. ಹಾಗೆಯೇ ಎಂ.ಬಿ.ಪಾಟೀಲ್‌ ಅವರು ಧರ್ಮ ವಿಭಜನೆಗೆ ಮುಂದಾಗಿದ್ದಾರೆ ಎಂಬುದಾಗಿ ವಿಡಿಯೋ ಹೇಳಿಕೆ ನೀಡಿದ ಆರೋಪದಡಿ ಧಾರ್ಮಿಕ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನು ಬಂಧಿಸಲಾಗಿತ್ತು ಎಂದು ವಿವರಿಸಿದ್ದಾರೆ.

ಈ ಸಂಬಂಧ ಬಿಜೆಪಿ ನಾಯಕರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿರಾಜು ಅವರನ್ನು ಭೇಟಿ ಮಾಡಿ ಬಿಜೆಪಿ ಕಾರ್ಯಕರ್ತರು, ಪಕ್ಷದ ಪರ ಒಲವುಳ್ಳವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ ಬಗ್ಗೆ ಉತ್ತರ ನೀಡುವಂತೆ ಕೋರಲಾಯಿತು.

ಆದರೆ ಪೊಲೀಸ್‌ ಮಹಾನಿರ್ದೇಶಕರು ಸೂಕ್ತ ಸಮಜಾಯಿಷಿ ನೀಡಲು ತಡವರಿಸಿದ್ದು, ಗೃಹ ಸಚಿವರ ಆಣತಿಯಂತೆ ಪೊಲೀಸರು ಕಾರ್ಯ ನಿರ್ವಹಿಸುತ್ತಿರುವುದನ್ನು ಸಾಬೀತುಪಡಿಸಿದಂತಿತ್ತು. ಈ ನಡುವೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿದ್ದು, ಸಿಐಡಿ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರಿಗೆ ತನಿಖೆ ಜವಾಬ್ದಾರಿ ವಹಿಸಿದೆ.

ಹೇಮಂತ್‌ ನಿಂಬಾಳ್ಕರ್‌ ಅವರು ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ಪತಿಯಾಗಿದ್ದು, ಆಡಳಿತ ಪಕ್ಷವನ್ನು ಓಲೈಸುವ ರೀತಿಯಲ್ಲಿ ತನಿಖೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರನ್ನೇ ಗುರಿಯಾಗಿಸಿ ಪ್ರಕರಣ ದಾಖಲಿಸುತ್ತಿರುವ ಬಗ್ಗೆ ಸಿಐಡಿ ಹಿರಿಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಸಮರ್ಥನೀಯ ಸಮಜಾಯಿಷಿ ನೀಡಿಲ್ಲ ಎಂದು ವಿವರಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ನಾಯಕ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್‌ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ್ದರು. ಈ ಸಂಬಂಧ ವಿಡಿಯೋ ದಾಖಲೆ ನೀಡಿದರೂ ನಗರ ಪೊಲೀಸ್‌ ಆಯುಕ್ತರ ಈವರೆಗೆ ಕ್ರಮ ಕೈಗೊಂಡಿಲ್ಲ. ಬೀದರ್‌ನ ಕಾಂಗ್ರೆಸ್‌ ಶಾಸಕ ನಾರಾಯಣ ರಾವ್‌ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿಯವರ ಬಗ್ಗೆ ಅವಹೇಳನಕಾರಿ ಹೆಳಿಕೆ ನೀಡಿದ್ದರು.

ಈ ಬಗ್ಗೆಯೂ ಪೊಲೀಸ್‌ ಇಲಾಖೆ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಆಡಳಿತ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳದೆ ಪೊಲೀಸರು ಮೌನ ವಹಿಸಿರುವುದು ಅವರ ಮೇಲಿನ ಒತ್ತಡವನ್ನು ತೋರಿಸತ್ತದೆ. ಆದರೆ ಗೃಹ ಸಚಿವರು ದೂರು ನೀಡಿದರೆ ಪೊಲೀಸರು ತಕ್ಷಣವೇ ಸಾಮಾಜಿಕ ಜಾಲತಾಣ ಕಾರ್ಯಕರ್ತರು, ಪತ್ರಕರ್ತರು, ಧಾರ್ಮಿಕ ಕಾರ್ಯಕರ್ತರ ವಿರುದ್ಧ ಸುಳ್ಳು ದೂರು ದಾಖಲಿಸಿ ಬಂಧಿಸುವ ಮೂಲಕ ಮೆಚ್ಚಿಸುವ ಪ್ರಯತ್ನ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂ.ಬಿ.ಪಾಟೀಲ್‌ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ್ದಾರೆ ಎನ್ನುವುದಾದರೆ ನಿಜವಾದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಿ ಕ್ರಮ ಜರುಗಿಸುವ ಇಲ್ಲವೇ ಪತ್ರದ ಸಾಚಾತನವನ್ನು ಪತ್ತೆ ಮಾಡುವ ಬದಲಿಗೆ ಯಾವುದೇ ಸಂಚು, ಪಾತ್ರವಿಲ್ಲದ ಮುಗ್ಧ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

ಗೃಹ ಸಚಿವರನ್ನು ಮೆಚ್ಚಿಸಲು ಸುಳ್ಳು ಆರೋಪ ಹೊರಿಸಿದ್ದಾರೆ. ಹಾಗಾಗಿ ಕೂಡಲೇ ಕೇಂದ್ರ ಗೃಹ ಸಚಿವರು ಮಧ್ಯಪ್ರವೇಶಿಸಬೇಕು. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಬಿಜೆಪಿ ಕಾರ್ಯಕರ್ತವಿರುದ್ಧ ಪ್ರತೀಕಾರ ತೆಗೆದುಕೊಳ್ಳುವ ಮನೋಭಾವವನ್ನು ನಿಲ್ಲಿಸುವಂತೆ ಸೂಚಿಸುವ ಜತೆಗೆ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಬೇಕು ಎಂದು ಶೋಭಾ ಕರಂದ್ಲಾಜೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.