ಪೊಲೀಸರ ವಿರುದ್ಧ ಲಿಂಬಾವಳಿ ಪ್ರತಿಭಟನೆ
Team Udayavani, Feb 26, 2017, 12:11 PM IST
ಮಹದೇವಪುರ: ಬೆಳ್ಳಂದೂರಿನ ಖಾಸಗಿ ನರ್ಸರಿ ಶಾಲೆಯಲ್ಲಿ ಹಸುಳೆಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಾದಿಯನ್ನು ಪೊಲೀಸರು ತಪ್ಪಿಸಿದ್ದಾರೆಂದು ಆರೋಪಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಎಎಲ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕನ ಲಿಂಬಾವಳಿ, “ಶಾಲೆಯಲ್ಲಿ ಹದಿಹರೆಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಪೊಲೀಸ್ ಇಲಾಖೆ ಕಾನೂನು ಕ್ರಮಕೈಗೊಳ್ಳದೆ, ಆರೋಪಿಗಳಿಗೆ ಸಹಕರಿಸುತ್ತಿದ್ದಾರೆ,” ಎಂದು ದೂರಿದರು.
“ಪೋಕೊ ಕಾಯ್ದೆಯಡಿ ಕೇವಲ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಪೋಕೊÕà ಕಾಯ್ದೆಧಿಯನ್ವಯ ಜಾಮೀನು ನೀಡುವಂತಿಲ್ಲ. ಆದರೆ, ಜಾಮೀನು ಸಿಕ್ಕಿರುವುದು ಪ್ರಕಧಿರಣದ ಹಾದಿಯನ್ನೇ ಬದಲಿಸಿದೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿದೆ,” ಎಂದು ಹೇಳಿದರು.
“ಸರ್ಕಾರವೇ ಆರೋಪಿಗಳನ್ನು ಬಂಧಿಸುವಂತೆ ಆದೇಶಿಸಿದರು, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯವೆಸಗಿದ್ದಾರೆ. ಈವರೆಗೂ ಹೆಚ್ಎಎಲ್ ಠಾಣೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ಎಂಟು ಪ್ರಕರಣಗಳು ದಾಖಲಾಗಿವೆ. ಇದನ್ನು ತಡೆಯುವಲ್ಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ,” ಎಂದರು.
“ದೌರ್ಜನ್ಯ ಪ್ರಕರಣಗಳಲ್ಲಿ ಸಾರ್ವಜನಿಕರು ಧ್ವನಿ ಎತ್ತಿದರೇ ಮಾತ್ರವೇ ಪೊಲೀಸರು ಎಚ್ಚೆತುಕೊಳ್ಳುತ್ತಿದ್ದಾರೆ. ಪ್ರತಿಭಟನೆಯಿಂದ ಸಂಚಾರ ದಟ್ಟಣೆಯಾಗಲು ಪೊಲೀಸರೇ ನೇರ ಕಾರಣರಾಗಿದ್ದಾರೆ. ಒಂದು ಶಾಲೆಯಲ್ಲಿ ನಡೆದಿರುವ ಇಂತಹ ಪ್ರಕರಣಕ್ಕೆ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಂಡರೆ, ಬೇರೆ ಶಾಲೆಯ ಆಡಳಿತ ಮಂಡಳಿಗಳೂ ಸಹ ಎಚ್ಚೆತ್ತುಕೋಳುತ್ತಾರೆ,” ಎಂದರು. ಹಲವರು ತಾಸು ಪ್ರತಿ¸ಟನೆ ನಡೆದಿದ್ದರಿಂದ ಕಿಲೋಮಿಟರ್ಗಳಷ್ಟು ದೂರು ಸಂಚಾರದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.
ಭರವಸೆ ನಂತರ ಪ್ರತಿಭಟನೆ ಹಿಂದಕ್ಕೆ
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹಿರಿಯ ಪೋಲಿಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ನಂತರ ಮಾತನಾಡಿ, ತಪ್ಪಿತಸ್ಥರು ಯಾರೇ ಇದ್ದರು ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಎಲ್ಲೆ ಇದ್ದರೂ ಅಂಥವರನ್ನು ಬಂಧಿಸಿ ಜೈಲಿಗಟ್ಟಲಾಗುವುದು,” ಎಂದು ಅವರು ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.