ಲಾಕ್‌ಡೌನ್‌ನಿಂದ ಶೇ. 41ರಷ್ಟು ಜನರಿಗೆ ಉದ್ಯೋಗ ನಷ್ಟ; ಅಜೀಂ ಪ್ರೇಮ್‌ ಜೀ ವಿವಿ

ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾನಿಲಯ ಕೈಗೊಂಡ ಸಮೀಕ್ಷೆಯಲ್ಲಿ ವಿಚಾರ ಬೆಳಕಿಗೆ

Team Udayavani, Mar 30, 2022, 12:32 PM IST

ಲಾಕ್‌ಡೌನ್‌ನಿಂದ ಶೇ. 41ರಷ್ಟು ಜನರಿಗೆ ಉದ್ಯೋಗ ನಷ್ಟ; ಅಜೀಂ ಪ್ರೇಮ್‌ ಜೀ ವಿವಿ

ಬೆಂಗಳೂರು, ಮಾ. 29: ಲಾಕ್‌ಡೌನ್‌ ಸಮಯದಲ್ಲಿ ಶೇ. 41ರಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದು, ಕೊರೊನಾ ಸಾಂಕ್ರಾಮಿಕ ರೋಗ ಬಂದು ಒಂದೂವರೆ ವರ್ಷ ಕಳೆದರೂ ಶೇ. 21ರಷ್ಟು ಜನರು ಹಿಂದಿನ ವೇತನ ಪಡೆದುಕೊಳ್ಳಲು ಸಾಧ್ಯವಾಗದಿರುವುದು ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ.

ಕೊರೊನಾ ಸಮಯದಲ್ಲಿ ಬೆಂಗಳೂರು ನಗರದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರ ಕುರಿತು ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯವು ಕೈಗೊಂಡ “ಕೊರೊನಾ ಸಾಂಕ್ರಾಮಿಕ ಪರಿಣಾಮಗಳು’ ಕುರಿತ ಸಮೀಕ್ಷೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.

ನಗರದ 33 ವಾರ್ಡ್‌ಗಳಲ್ಲಿ 3 ಸಾವಿರ ಕುಟುಂಬಗಳಲ್ಲಿ ಸಮೀಕ್ಷೆ ನಡೆಸಿದ್ದು, ಲಾಕ್‌ಡೌನ್‌ ವೇಳೆ ಜನರ ಜೀವನೋಪಾಯ, ಉದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರ ಮತ್ತು ಆರ್ಥಿಕತೆ ಮೇಲೆ ಉಂಟಾದ ಪರಿಣಾಮಗಳನ್ನು ಕುರಿತು ಸಮೀಕ್ಷೆ ನಡೆಸಿದೆ. ವಾಹನ ಚಾಲಕರು, ದಿನಗೂಲಿ ನೌಕರರು, ಮನೆಗೆಲಸದವರು ಮತ್ತು ಕಾರ್ಖಾನೆಗಳ ಕಾರ್ಮಿಕರನ್ನು ಒಳಗೊಂಡ ಸಮೀಕ್ಷೆಯನ್ನು 2021ರ ಅಕ್ಟೋಬರ್‌ ತಿಂಗಳಿನಲ್ಲಿ ನಡೆಸಲಾಗಿದೆ.

ಶೇ. 80 ಮಂದಿಗೆ ಕನಿಷ್ಠ ವೇತನವೂ ಇರಲಿಲ್ಲ 2020ರ ಲಾಕ್‌ಡೌನ್‌ ಅವಧಿಯ ಅನಂತರವೂ ಉದ್ಯೋಗ ಮತ್ತು ಆದಾಯ ನಷ್ಟಗಳು ಮುಂದುವರಿದಿವೆ. ಫೆಬ್ರವರಿ 2021ರಲ್ಲಿ ಶೇ. 41ರಷ್ಟು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದು, ಶೇ. 21ರಷ್ಟು ಜನರಿಗೆ ಆದಾಯ ಕುಂಠಿತವಾಗಿದೆ.

ದಿನಗೂಲಿ ಕಾರ್ಮಿಕರು, ಮನೆಗೆಲಸ ಮಾಡುವವರು ಮತ್ತು ಚಿಲ್ಲರೆ ವ್ಯಾಪಾರದಲ್ಲಿ ತೊಡಗಿರುವ ಶ್ರಮಿಕರು ಅತ್ಯಂತ ಹೆಚ್ಚು ಹಾನಿಗೆ ತುತ್ತಾಗಿದ್ದಾರೆ. 2021ರ ಅಕ್ಟೋಬರ್‌ನಲ್ಲಿಯೂ ಶೇ. 21ರಷ್ಟು ಪುರುಷರು ಮತ್ತು ಶೇ. 15ರಷ್ಟು ಮಹಿಳೆಯರು ಉದ್ಯೋಗ ಕಳೆದುಕೊಂಡ ಸ್ಥಿತಿ ಮುಂದುವರಿದಿದೆ ಎಂದರು.ಶೇ. 80ರಷ್ಟು ಜನರಿಗೆ ರಾಷ್ಟ್ರೀಯ ಕನಿಷ್ಠ ವೇತನ (ಪ್ರತಿ ದಿನಕ್ಕೆ 119 ರೂ.) ಕೂಡ ಕಡಿಮೆಯಾಗಿದೆ.

ಅದೇ ರೀತಿ ಆಹಾರ ಅಭದ್ರತೆ ಕೂಡ ತೀವ್ರವಾಗಿ ಏರಿಕೆ ಕಂಡಿದೆ. ಶೇ. 40ರಷ್ಟು ಕುಟಂಬಗಳ ಜನರು ಕೊರೊನಾ ಪೂರ್ವದಲ್ಲಿ ಸೇವಿಸುತ್ತಿದ್ದ ಆಹಾರಕ್ಕಿಂತ ಕಡಿಮೆ ಪ್ರಮಾಣದ ಆಹಾರವನ್ನು ಸೇವಿಸಿದ್ದಾರೆ. ಸಾಲ ತೀರಿಸುವುದಕ್ಕಾಗಿ ಸಾಲ ಕೊರೊನಾ ಸಮಯದಲ್ಲಿ ಜನರು ಈ ಹಿಂದೆ ಮಾಡಿದ್ದ ಹಳೆಯ ಸಾಲ ತೀರಿಸಲು ಹೊಸದಾಗಿ ಸಾಲ ಮಾಡಿಕೊಂಡಿದ್ದಾರೆ. ಶೇ. 11ರಷ್ಟು ಜನರು ಜೀವನ ನಿರ್ವಹಣೆ ಮತ್ತು ಹಳೆಯ ಸಾಲ ತೀರಿಸಲು ಹೊಸ ಸಾಲ ಮಾಡಿದ್ದಾರೆ. ಶೇ. 15ರಷ್ಟು ಜನರು ಒಡವೆ ಮಾರಿ ಅಥವಾ ಗಿರವಿ ಇಟ್ಟಿರುವುದು ತಿಳಿದು ಬಂದಿದೆ.

ಮೂಲಸೌಕರ್ಯ ವಂಚಿತ ಕುಟುಂಬಗಳು
* ಸರ್ವೆಯಲ್ಲಿ ಶೇ. 8ರಷ್ಟು ಜನರಿಗೆ ವೈಯಕ್ತಿಕವಾಗಿ ಅಥವಾ ಸಾರ್ವಜನಿಕವಾಗಿ ಯಾವುದೇ ಶೌಚಾಲಯಗಳಿಲ್ಲ.ಬಯಲುಗಳನ್ನೇ ಆಶ್ರಯಿಸಿದ್ದಾರೆ.

* ಶೇ. 33ರಷ್ಟು ಜನರು ಸಾರ್ವಜನಿಕವಾಗಿ ಪೈಪುಗಳಲ್ಲಿ ಬರುವ ನಳ್ಳಿ ನೀರನ್ನೇ ಆಶ್ರಯಿಸಿದ್ದಾರೆ. ಶೇ. 6ರಷ್ಟು ಜನರು ಟ್ಯಾಂಕರ್‌ಗಳಿಂದ ನೀರನ್ನು ಖರೀದಿಸುತ್ತಾರೆ.

* ಶೇ. 91.5ರಷ್ಟು ಜನರಿಗೆ ಸ್ವಂತ ಮನೆಯಿಲ್ಲ

* ಶೇ. 74ರಷ್ಟು ಜನರಿಗೆ ಬೈಕ್‌ಗಳಿಲ್ಲ

* ಶೇ. 44ರಷ್ಟು ಜನರ ಮನೆಗಳಲ್ಲಿ ವಾಷಿಂಗ್‌ ಮೆಷಿನ್‌, ಫ್ರಿಡ್ಜ್ ಮತ್ತು ಮಿಕ್ಸಿಗಳಿಲ್ಲ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.