![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
Love Story: 70ರ ಅಜ್ಜ ವಿವಾಹ ನಿರಾಕರಿಸಿದ್ದಾಗಿ 63ರ ಅಜ್ಜಿ ದೂರು!
Team Udayavani, Aug 22, 2023, 1:16 PM IST
![Love Story: 70ರ ಅಜ್ಜ ವಿವಾಹ ನಿರಾಕರಿಸಿದ್ದಾಗಿ 63ರ ಅಜ್ಜಿ ದೂರು!](https://www.udayavani.com/wp-content/uploads/2023/08/tdy-6-16-620x372.jpg)
ಬೆಂಗಳೂರು: ವೃದ್ಧನೊಬ್ಬ ತನ್ನ ಮದುವೆಯಾಗುವುದಾಗಿ ನಂಬಿಸಿ ಇದೀಗ ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ವೃದ್ಧೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಲಸೂರು ನಿವಾಸಿ ದಯಾವಾಣಿ (63) ಎಂಬುವರು ನೀಡಿದ ದೂರಿನ ಮೇರೆಗೆ ಪೂರ್ವವಿಭಾಗದ ಶಿವಾಜಿನಗರ ಮಹಿಳಾ ಠಾಣೆ ಪೊಲೀಸರು ಲೋಕನಾಥನ್ (70) ಎಂಬುವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ದಯಾಮಣಿ ಮತ್ತು ಲೋಕನಾಥನ್ ಅಕ್ಕ-ಪಕ್ಕದ ನಿವಾಸಿಗಳಾಗಿದ್ದಾರೆ. ದೂರುದಾರೆ ಪತಿ ಹಾಗೂ ಆರೋಪಿ ಲೋಕನಾಥನ್ ಪತ್ನಿ ಮೃತಪಟ್ಟಿದ್ದಾರೆ. ಐದು ವರ್ಷಗಳ ಹಿಂದೆ ಆರೋಪಿ ತನ್ನ ಮಗನ ಮದುವೆಗೆ ವಧು ಹುಡುಕುತ್ತಿದ್ದಾಗ ವೃದ್ಧೆಯ ಪರಿಚಯವಾಗಿತ್ತು. ನಂತರ ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ಇಬ್ಬರೂ ಸಹ ಮೈಸೂರು, ದಾವಣಗೆರೆೆ, ಬೆಳಗಾವಿ ಕಡೆ ಪ್ರವಾಸಕ್ಕೂ ಹೋಗಿದ್ದರು. ಅದೇ ಸಂದರ್ಭದಲ್ಲಿ ತನ್ನನ್ನು ಮದುವೆಯಾಗುವಂತೆ ದೂರುದಾರೆ ಆರೋಪಿಗೆ ಕೇಳಿದ್ದರು. ಆರಂಭದಲ್ಲಿ ಒಪ್ಪಿದ ಆರೋಪಿ, ನಂತರ ಆಕೆಯನ್ನು ನಿರ್ಲಕ್ಷಿಸಿದ್ದು, ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಅದನ್ನು ಪ್ರಶ್ನಿಸಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಶಿವಾಜಿನಗರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗನ ಮದುವೆಯಲ್ಲಿ ಪ್ರೇಮಾಂಕುರ :
ಲೋಕನಾಥ್ ಕುಟುಂಬದೊಂದಿಗೆ ಮೊದಲಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದ ಮಹಿಳೆ, ಹೆಣ್ಣು ನೋಡುವ ಸಲುವಾಗಿ ಲೋಕನಾಥ್ ಜತೆಯಲ್ಲಿ ಸುತ್ತಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ನಿನ್ನನ್ನು ಮದುವೆಯಾಗುತ್ತೇನೆಂದು ಲೋಕನಾಥ್ ಭರವಸೆ ನೀಡಿದ್ದರು. 5 ವರ್ಷಗಳಿಂದ ಇಬ್ಬರ ನಡುವೆ ಉತ್ತಮ ಸಂಬಂಧವಿತ್ತು. ಅವರನ್ನು ನಂಬಿ ಮನೆ ಬಿಟ್ಟು ಬಂದಿದ್ದೇನೆ. ಆದರೆ, ಇದೀಗ ಲೋಕನಾಥನ್ ಮದುವೆಗೆ ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![11-bng](https://www.udayavani.com/wp-content/uploads/2024/07/11-bng-150x90.jpg)
Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್
![10-bng](https://www.udayavani.com/wp-content/uploads/2024/07/10-bng-150x90.jpg)
Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![7-bng](https://www.udayavani.com/wp-content/uploads/2024/07/7-bng-150x90.jpg)
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.