ವಿದೇಶ ಪ್ರವಾಸ ಲಕ್ಕಿಡಿಪ್‌ ವಂಚನೆ ಆರೋಪ: ಪ್ರಕರಣ ದಾಖಲು


Team Udayavani, Jun 6, 2019, 3:00 AM IST

Udayavani Kannada Newspaper

ಬೆಂಗಳೂರು: ಬಸವೇಶ್ವರನಗರ ಕಂಟ್ರಿ ಕ್ಲಬ್‌ ಹೆಸರಿನಲ್ಲಿ ದೂರವಾಣಿ ಕರೆ ಮಾಡಿ ಲಕ್ಕಿಡಿಪ್‌ನಲ್ಲಿ ಬಹುಮಾನ ಬಂದಿದ್ದು ವಿದೇಶ ಪ್ರವಾಸ ಹೋಗಬಹುದು ಎಂದು ನಂಬಿಸಿ ಅರವತ್ತು ಸಾವಿರ ರೂ. ವಂಚನೆ ಮಾಡಿರುವುದಾಗಿ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಬಂಧ ಗೋವಿಂದರಾಜನಗರ ನಿವಾಸಿ ವಿನೀತ್‌ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರನಗರದ ಕಂಟ್ರಿಕ್ಲಬ್‌ನ ಹರ್ಷ, ಮಹಮ್ಮದ್‌ ರಾಹಿಲ್‌ ಮತ್ತು ಅಕ್ಮಲ್‌ ವಿರುದ್ಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2018ರ ಮಾರ್ಚ್‌ನಲ್ಲಿ ವಿನೀತ್‌ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ಪದೇ ಪದೆ ಕರೆಗಳು ಬರುತ್ತಿದ್ದು, ಕರೆ ಸ್ವೀಕರಿಸಿದಾಗ ಮಹಿಳೆಯೊಬ್ಬರು, ಬಸವೇಶ್ವರ ನಗರದ ಕಂಟ್ರಿಕ್ಲಬ್‌ನಿಂದ ಮಾತನಾಡುತ್ತಿದ್ದೇವೆ. ತಮ್ಮ ಮೊಬೈಲ್‌ ನಂಬರ್‌ಗೆ ಲಕ್‌ಡಿಪ್‌ನಲ್ಲಿ ಬಹುಮಾನ ಬಂದಿದ್ದು, ನಾಲ್ಕು ಉಡುಗೊರೆ ಮತ್ತು ಹಾಲಿಡೇಸ್‌ ಗಿಫ್ಟ್ ಬಂದಿದೆ. ದಂಪತಿ ಸಮೇತ ಕ್ಲಬ್‌ಗ ಬರುವಂತೆ ಆಹ್ವಾನಿಸಿದ್ದಾರೆ.

ನಂತರ ವಿನೀತ್‌ ತಮ್ಮ ಪತ್ನಿ ಜತೆ ಮಾ.5ರಂದು ಬಸವೇಶ್ವರ ನಗರದ ಕಂಟ್ರಿಕ್ಲಬ್‌ಗ ಹೋದಾಗ ಅಲ್ಲಿದ್ದ ಹರ್ಷ ಎಂಬಾತ ದಂಪತಿಯನ್ನು ಪರಿಚಯಿಸಿಕೊಂಡು, ನಮ್ಮ ಕ್ಲಬ್‌ಗಳಲ್ಲಿ ನಿಮಗೆ ಉಳಿದುಕೊಳ್ಳಲು ಉಚಿತ ವ್ಯವಸ್ಥೆಯಿದ್ದು, ವರ್ಷಕ್ಕೆ ಒಂದು ಬಾರಿ ಪ್ರವಾಸ ಪ್ಯಾಕೇಜ್‌ ಮೂಲಕ ಪ್ರಪಂಚದ ಯಾವುದೇ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳಬಹುದು.

ಅಲ್ಲಿರುವ ಕಂಟ್ರಿಕ್ಲಬ್‌ಗಳಲ್ಲಿ ಉಳಿದುಕೊಳ್ಳಬಹುದು. ಹಾಗೆಯೇ ನಗರದ ಕೆಲ ಜಿಮ್‌ಗಳಲ್ಲಿ ಉಚಿತ ಪ್ರವೇಶವೂ ಇದೆ ಎಂದು ನಂಬಿಸಿದ್ದರು. ಅದನ್ನು ನಂಬಿದ ವಿನೀತ್‌ 60ಸಾವಿರ ರೂ. ಪಾವತಿಸಿ ಕ್ಲಬ್‌ನ ಸದಸ್ಯತ್ವ ಪಡೆದುಕೊಂಡಿದ್ದರು. ಅನಂತರ ಬಸವೇಶ್ವರನಗರ ಜಿಮ್‌ಗೆ ಹೋದಾಗ ಕಂಟ್ರಿಕ್ಲಬ್‌ ಜತೆಗಿನ ಒಪ್ಪಂದ ರದ್ದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಚಾರವನ್ನು ಕ್ಲಬ್‌ನ ಅಧಿಕಾರಿಗಳಿಗೆ ತಿಳಿಸಿ ಸದಸ್ಯತ್ವ ರದ್ದುಗೊಳಿಸಿ ಹಣ ವಾಪಸ್‌ ಕೊಡುವಂತೆ ಕೇಳಿದರೂ ಇದುವರೆಗೂ ಹಣ ಹಿಂದಿರುಗಿಸಿಲ್ಲ. ಪ್ರವಾಸಕ್ಕೂ ಕರೆದೊಯ್ದಿಲ್ಲ ಎಂದು ವಿನೀತ್‌ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.