ಮಧುಕರ ಶೆಟ್ಟಿ ಸಾವು ಸಂಭ್ರಮಿಸುವವರೂ ಇದ್ದಾರೆ!


Team Udayavani, Jan 7, 2019, 6:52 AM IST

adikari.jpg

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಾ.ಮಧುಕರ ಶೆಟ್ಟಿ ಅವರ ಸಾವನ್ನು ಕೂಡ ಸಂಭ್ರಮಿಸುವ ಅಧಿಕಾರಿಗಳು ಆಡಳಿತ ವ್ಯವಸ್ಥೆಯಲ್ಲಿ ಮತ್ತು ರಾಜಕೀಯದಲ್ಲಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

ಬಂಟರ ಸಂಘ ಭಾನುವಾರ ವಿಜಯನಗರದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ಆಯೋಜಿಸಿದ್ದ ಡಾ.ಮಧುಕರ ಶೆಟ್ಟಿ ಅವರಿಗೆ “ನುಡಿ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಧುಕರ ಶೆಟ್ಟಿ ಸಾವಿನಿಂದ ತಾವು ಬಚಾವಾಗಿದ್ದೇವೆ. ಇನ್ಯಾವ ಕಂಟಕಗಳೂ ತಮಗಿಲ್ಲ ಎಂದು ಖುಷಿ ಪಡುವ ವ್ಯಕ್ತಿಗಳು ಸಮಾಜದಲ್ಲಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ದಕ್ಷ, ಪ್ರಾಮಾಣಿಕ ಅಧಿಕಾರಿ ಮಧುಕರ ಶೆಟ್ಟಿ ಅವರನ್ನು 2-3 ತಿಂಗಳಿಗೊಮ್ಮೆ ವರ್ಗಾವಣೆ ಮಾಡುತ್ತಿದ್ದುದಲ್ಲದೆ, ರಾಜ್ಯಪಾಲರ ಎಡಿಸಿಯಾಗಿ ನೇಮಕ ಮಾಡಿದ್ದರು. ಅಂತಹ ವರ್ಗಾವಣೆಗಳನ್ನು ಸಹಿಸಿಕೊಂಡೇ ಅವರು ಇಲಾಖೆ ಮತ್ತು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಕೆಲ ನಿವೇಶನಗಳನ್ನು ಅಲ್ಲಿನ ಮಾಲೀಕರನ್ನು ಬೆದರಿಸಿ ಸಚಿವರೊಬ್ಬರು ಅವುಗಳನ್ನು ಕಬಳಿಸಲು ಮುಂದಾಗಿದ್ದರು. ಈ ಮಾಹಿತಿ ಪಡೆದ ಮಧುಕರ ಶೆಟ್ಟಿ ಪ್ರಕರಣ ದಾಖಲಿಸಿಕೊಂಡು ಸಚಿವ ಹಾಗೂ ಅವರ ಪುತ್ರನನ್ನು ಜೈಲಿಗೆ ಕಳುಹಿಸಿದ್ದರು. ಅಲ್ಲದೆ, ರಾಜ್ಯದ ಅಕ್ರಮ ಗಣಿಗಾರಿಕೆ ಬಯಲಿಗೆಳೆಯುವಲ್ಲಿ ಶೆಟ್ಟಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್‌ ಶೆಟ್ಟಿ ಅವರು ಮಾತನಾಡಿ, ಸಮಾಜಕ್ಕಾಗಿ ದುಡಿದ ಐಪಿಎಸ್‌ ಅಧಿಕಾರಿ ಮಧುಕರ ಶೆಟ್ಟಿ, ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುವಾಗ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದರು. ಅಂತಹ ಮತ್ತೂಬ್ಬ ಅಧಿಕಾರಿ ಸಿಗುವುದು ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಮಧುಕರ್‌ ಶೆಟ್ಟಿ ಹೆಸರಿನಲ್ಲಿ ಸಂಶೋಧನ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯ ತೆರೆಯುವಲ್ಲಿ ಬಂಟರ ಸಂಘ ಮುಂದಾಗಬೇಕು. ಇದಕ್ಕೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಗಿರೀಶ್‌ ಹೇಳಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಉಮೇಶ್‌ ಶೆಟ್ಟಿ, ಗೌರವ ಕಾರ್ಯದರ್ಶಿ ಮಧುಕರ್‌ ಎಂ. ಶೆಟ್ಟಿ ಇತರರು ಇದ್ದರು.

ಅವರು ನಿವೇಶನಕ್ಕೆ ಅರ್ಜಿ ಹಾಕಲಿಲ್ಲ: ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್‌ ಮಾತನಾಡಿ, ಪ್ರೊಬೇಷನರಿ ಅವಧಿಯಿಂದಲೇ ಮಧುಕರ ಶೆಟ್ಟಿ ಆದರ್ಶವಾದಿಯಾಗಿದ್ದರು. ತಮ್ಮ 36 ವರ್ಷದ ಸೇವಾ ಅವಧಿಯಲ್ಲಿ ನೂರಾರು ಮಂದಿ ಐಪಿಎಸ್‌ ಅಧಿಕಾರಿಗಳ ಜತೆ ಕೆಲಸ ಮಾಡಿದ್ದೇನೆ. ಆದರೆ, ಮಧುಕರ ಶೆಟ್ಟಿ ನಡವಳಿಕೆ, ಮಾತುಗಳು ನನ್ನ ಮನಸ್ಸಿಗೆ ಹತ್ತಿರವಾಗಿತ್ತು.

ವೀರಪ್ಪನ್‌ ಕಾರ್ಯಾಚರಣೆ ಬಳಿಕ ನಿವೇಶನದ ಆಸೆಗಾಗಿ ಐಪಿಎಸ್‌ ಅಧಿಕಾರಿಗಳು ಸೇರಿ ಅನೇಕರು ನಾವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದೇವೆ ಎಂದು ನೂರಾರು ಅರ್ಜಿಗಳನ್ನು ಹಾಕಿದ್ದರು. ಆದರೆ, ಮಧುಕರ್‌ ಶೆಟ್ಟಿ ಇದ್ಯಾವುದನ್ನೂ ಬಯಸದೇ ಎಲ್ಲದರಿಂದ ದೂರು ಉಳಿದು ತಮ್ಮ ಕರ್ತವ್ಯಕ್ಕೆ ನಿಷ್ಠರಾಗಿದ್ದರು ಎಂದು ಸ್ಮರಿಸಿದರು. ಅಲ್ಲದೆ, ಮಧುಕರ ಶೆಟ್ಟಿ ನಕ್ಸಲರ ಮನಪರಿವರ್ತನೆಗೆ ಮುಂದಾಗಿದ್ದು, ಜತೆಗೆ ನಕ್ಸಲ್‌ ಕುರಿತ ಪುಸ್ತಕ ಕೂಡ ಬರೆದಿದ್ದರು. ಬಹುಶಃ ಆ ಪುಸ್ತಕ ಎಲ್ಲಿಯೂ ಪ್ರಕಟವಾದಂತಿಲ್ಲ ಎಂದು ಹೇಳಿದರು.

ಮಧುಕರ ಶೆಟ್ಟಿ ಹೆಸರಿನಲ್ಲಿ ಪ್ರಶಸ್ತಿ: ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿದ್ದ ಮಧುಕರ ಶೆಟ್ಟಿ ಹೆಸರಿನಲ್ಲಿ ಬಂಟರ ಸಂಘ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದೆ ಎಂದು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಹೇಳಿದರು. ಪ್ರತಿ ವರ್ಷ ಪ್ರಾಮಾಣಿಕ ಪೊಲೀಸ್‌ ಅಧಿಕಾರಿಗಳನ್ನು ಗುರುತಿಸಿ ಅವರಿಗೆ “ಮಧುಕರ ಶೆಟ್ಟಿ’ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಹೆಡ್‌ ಕಾನ್‌ಸ್ಟೆಬಲ್‌ಗೆ ಕ್ಲಾಸ್‌!: ಮಧುಕರ ಶೆಟ್ಟಿ ಅವರ ಜತೆ ಕರ್ತವ್ಯ ನಿರ್ವಹಿಸಿದ ದಿನಗಳನ್ನು ನೆನೆದ ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಎಸ್‌.ಗಿರೀಶ್‌, ಮಧುಕರ ಶೆಟ್ಟಿ ಅವರು ಸಂಚಾರ ಡಿಸಿಪಿಯಾಗಿದ್ದಾಗ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರು ಕಡಲೇ ಕಾಯಿ ವ್ಯಾಪಾರಿಯಿಂದ 100 ರೂ. ಲಂಚ ಪಡೆಯುವುದನ್ನು ನೋಡಿದ್ದರು.

ಸಾರ್ವಜನಿಕವಾಗಿ ಅವಮಾನಿಸುವುದು ಬೇಡ ಎಂದು, ವ್ಯಾಪಾರಿ ಹಾಗೂ ಹೆಡ್‌ಕಾನ್‌ಸ್ಟೆàಬಲ್‌ನನ್ನು ತಮ್ಮ ಕಚೇರಿಗೆ ಕರೆಸಿಕೊಂಡು, ವಿಚಾರಣೆ ನಡೆಸಿದರು. ಕಡಲೇ ಕಾಯಿ ವ್ಯಾಪಾರಿ ಮಕ್ಕಳು ಕೂಲಿ ಮಾಡುತ್ತಿದ್ದರೆ, ಕಾನ್‌ಸ್ಟೆಬಲ್‌ ಮಕ್ಕಳು ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದರು. ದಿನದಲ್ಲಾಗುವ 500 ರೂ. ವಹಿವಾಟು ನೆಚ್ಚುಕೊಂಡು ವ್ಯಾಪಾರಿ ಜೀವನ ಸಾಗಿಸಿದರೆ, ಕಾನ್‌ಸ್ಟೆಬಲ್‌ಗೆ ಸಂಬಳವಿತ್ತು.

ಇದನ್ನು ಕಾನ್‌ಸ್ಟೆಬಲ್‌ಗೆ ತಿಳಿಸಿ ಬುದ್ಧಿ ಹೇಳಿದ ಮಧುಕರ್‌ ಶೆಟ್ಟಿ, ತಮ್ಮ ಪರ್ಸ್‌ನಿಂದ ನಲ್ಲಿದ್ದ 1,300 ರೂ. ಪೈಕಿ 800 ರೂ.ಗಳನ್ನು ವ್ಯಾಪಾರಿಗೆ ಕೊಟ್ಟು, ಇನ್ನೊಮ್ಮೆ ಯಾರಿಗೂ ಲಂಚ ಕೊಡಬೇಡ ಎಂದು ಸೂಚಿಸಿದರು. ಉಳಿದ 500 ರೂ.ಗಳನ್ನು ಹೆಡ್‌ಕಾನ್‌ಸ್ಟೆಬಲ್‌ಗೆ ನೀಡಿ ಲಂಚಕ್ಕೆ ಕೈಚಾಚದಂತೆ ಎಚ್ಚರಿಸಿದ್ದರು. ಇಂತಹ ಆದರ್ಶಗಳೊಂದಿಗೆ ಬದುಕಿದ ಅವರಲ್ಲಿ ಶೇ.1ರಷ್ಟು ತಪ್ಪನ್ನು ಗುರುತಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.