ಮಹದಾಯಿ: ಕಾನೂನು ಚೌಕಟ್ಟು ಮೀರಿಲ್ಲ
Team Udayavani, Jul 26, 2018, 6:00 AM IST
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದಲ್ಲಿ ಕರ್ನಾಟಕ ಕಾನೂನು ಚೌಕಟ್ಟು ಮೀರಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ಸುರಂಗ ಮಾರ್ಗದ ಮೂಲಕ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ಹರಿಸಿದೆ ಎಂಬುದಾಗಿ ಗೋವಾ ಸರ್ಕಾರ ಮಾಡಿರುವ ಆರೋಪವನ್ನು ತಳ್ಳಿ ಹಾಕಿರುವ ಅವರು, ಮಹದಾಯಿ ಲೀಕೇಜ್ ಬಗ್ಗೆ ಫೋಟೋ ಸಹಿತ ದಾಖಲೆಗಳನ್ನು ನ್ಯಾಯಾಧಿಕರಣಕ್ಕೆ ನೀಡಲಾಗಿದೆ. ನಾವು ಎಲ್ಲಿಯೂ ನೀರನ್ನು ಬಳಕೆ ಮಾಡಿಕೊಳ್ಳುತ್ತಿಲ್ಲವೆಂದು ಸ್ಪಷ್ಟಪಡಿಸಿದರು.
ಗೋವಾ ಅತ್ಯಂತ ಸಣ್ಣ ರಾಜ್ಯವಾಗಿದ್ದು, ಅವರೊಂದಿಗೆ ಜಗಳ ಅಥವಾ ಯುದ್ಧ ಮಾಡಲು ನಾವು ಸಿದಟಛಿರಿಲ್ಲ. ಆಗಸ್ಟ್ ಅಂತ್ಯದೊಳಗೆ ನ್ಯಾಯಾಧಿಕರಣದ ತೀರ್ಪು ಬರುವ ಸಾಧ್ಯತೆಯಿದೆ. ಗೋವಾ ಸರ್ಕಾರ ಸಮುದ್ರಕ್ಕೆ ಹೋಗುವ ನೀರನ್ನು ಬಳಸಿಕೊಳ್ಳಲಿ. ಅದಕ್ಕೆ ನಮ್ಮ ತಕರಾರಿಲ್ಲ. ಕರ್ನಾಟಕಕ್ಕೆ ನ್ಯಾಯಯುತವಾಗಿ ಎಷ್ಟು ನೀರು ಸಿಗಬೇಕೋ ಅಷ್ಟು ಸಿಗಬೇಕು ಎನ್ನುವುದು ನಮ್ಮ ಬೇಡಿಕೆ. ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಸಿಗಬೇಕು. ಅದಕ್ಕೆ ನೀರು ಕೊಡಿ ಎಂದು ಕೇಳುತ್ತಿದ್ದೇವೆ. ಗೋವಾ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಲಿ ಎಂದರು.
ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ನ್ಯಾಯ ಸಿಗಲಿದ್ದು, ಆತ್ಮವಿಶ್ವಾಸದಿಂದ ಇರುವಂತೆ ರಾಜ್ಯದ ಪರ ವಕೀಲರು ಹೇಳಿದ್ದಾರೆ.
ಅದಕ್ಕಾಗಿ ನಾವು ಕಾಯುತ್ತಿದ್ದೇವೆ. ನಾನೂ ಮಹದಾಯಿ ಸ್ಥಳ ಪರಿಶೀಲನೆಗೆ ಹೊರಟಿದ್ದೆ. ಸ್ಥಳಕ್ಕೆ ಭೇಟಿ ನೀಡಿದರೆ ಅಪಾರ್ಥವಾಗುತ್ತದೆ ಎಂಬ ಕಾರಣಕ್ಕೆ ಧಾರವಾಡದಿಂದ ವಾಪಸ್ ಬಂದೆ ಎಂದು ಹೇಳಿದರು.
ರಾಹುಲ್ ಪ್ರಧಾನಿಯಾಗಬೇಕು: ದೇಶದ ಹಿತದೃಷ್ಟಿಯಿಂದ ಗಾಂಧಿ ಕುಟುಂಬ ತ್ಯಾಗ ಮಾಡಿಕೊಂಡು ಬಂದಿದೆ. ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿಯಾಗಬೇಕೆಂದು ಕಾಂಗ್ರೆಸ್ ಪಕ್ಷದ ತೀರ್ಮಾನವಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಲ್ಲರೂ ಒಗ್ಗೂಡಬೇಕು ಎಂದು ಅವರು ಹೇಳಿದರು.
ಆತ್ಮಹತ್ಯೆ ನಿಲ್ಲಲಿ: ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತರ ನೆರವಿಗಾಗಿ ಸಾಲ ಮನ್ನಾ ಮಾಡಿದೆ. ವೈಯಕ್ತಿಕ ಕಾರಣವೇ ಇರಲಿ, ಸಾಲವೇ ಇರಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಾಲ ಮನ್ನಾ ವಿಚಾರದಲ್ಲಿ ಅನುಮಾನಗಳನ್ನು ಬಗೆಹರಿಸಲು ಬ್ಯಾಂಕರ್ಗಳೊಂದಿಗೆ ಸಭೆ ನಡೆಸಲಾಗಿದೆ. ಈ ವಿಷಯದಲ್ಲಿ ಸರ್ಕಾರ ಸುಮ್ಮನೆ ಕುಳಿತಿಲ್ಲ ಎಂದರಲ್ಲದೆ, ರೈತರು ಯಾವುದೇ ಸಮಸ್ಯೆಯಿಂದ ಮೃತಪಟ್ಟರೂ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legislative Council Bye Election: ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ
Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ
Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು
Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.