ರಾಜಕೀಯ ಬದಿಗಿಟ್ಟರೆ ಮಹದಾಯಿಗೆ ಪರಿಹಾರ
Team Udayavani, Feb 4, 2018, 12:16 PM IST
ಮಹದೇವಪುರ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜಕಾರಣ ಮಾಡದೆ ಪ್ರಮಾಣಿಕ ಪ್ರಯತ್ನ ಮಾಡಿದ್ದೇ ಆದರೆ ಕೆಲವೇ ತಾಸುಗಳಲ್ಲಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.
ಕಾಡುಗುಡಿಯ ಸರ್ಕಾರಿ ಮಾದರಿ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಕಸಾಪ ವತಿಯಿಂದ ಆಯೋಜಿಸಿದ್ದ 2ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಿಂದ ಕೂಡಿರುವ ಭಾರತದಲ್ಲಿ ವಿವಿಧ ವಿಚಾರಗಳಿಂದ ಬಿಕ್ಕಟ್ಟು ಮೂಡುತ್ತಿದೆ.
ಪ್ರಸ್ತುತ ಮಹದಾಯಿ, ಕಳಸಾ ಬಂಡೂರಿ ವಿಚಾರ ರಾಜ್ಯಗಳ ನಡುವೆ ಬಿಕ್ಕಟ್ಟು ಮೂಡಿಸಿದೆ. ರಾಜಕೀಯ ಪಕ್ಷಗಳು ಜನರ ಹಿತಕ್ಕೆ ನಿರ್ಣಯ ಕೈಗೊಳ್ಳುವ ಮನಸ್ಸು ಮಾಡಿದ್ದರೆ ಕೆಲವೇ ಗಂಟೆಗಳಲ್ಲಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಬಹುದಿತ್ತು ಎಂದರು.
ತುಂಬಾ ನೋವಾಗಿದೆ: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಪರ ಹೋರಾಟಗಾರರು ಯಾವುದೇ ಪಕ್ಷದ ಏಜೆಂಟರಲ್ಲ. ಯಾರ ಗುಲಾಮರೂ ಅಲ್ಲ. ಆದರೆ, ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಲು ಇತ್ತೀಚೆಗೆ ಕರೆ ನೀಡಲಾಗಿದ್ದ ಬಂದ್ “ರಾಜಕೀಯ ಪ್ರೇರಿತ’ ಎಂದು ಪಕ್ಷವೊಂದರ ಸಣ್ಣ ಮನಸ್ಸಿನ ನಾಯಕರು ಆಡಿದ ಮಾತುಗಳಿಂದ ತುಂಬಾ ನೋವಾಗಿದೆ,’ ಎಂದು ಚಂಪಾ ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ಬಗ್ಗೆ ಗೌರವವಿದೆ: ಪಕ್ಷಗಳ ಸಿದ್ಧಾಂತಗಳು ಬೇರೆ ಬೇರೆ ಇರಬಹುದು. ಆದರೆ ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾದ ನಂತರ ಸಿದ್ಧಾಂತಗಳನ್ನು ಬದಿಗಿರಿಸಿ ಜನಪರ ನಿಲುವುಗಳಿಗೆ ಬದ್ಧವಾಗಬೇಕು. ಆದರೆ, ಮಹದಾಯಿ ವಿಚಾರದಲ್ಲಿ ಯಾವ ನಾಯಕರೂ ತಮ್ಮ ಪಕ್ಷದ ಇತಿಮಿತಿ ಮೀರಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ.
ಅವರ ಪಕ್ಷದ ಸಿದ್ಧಾಂತದ ಬಗ್ಗೆ ನಮಗೆ ಭಿನ್ನಾಭಿಪ್ರಯ ಇರಬಹುದು. ಆದರೆ, ಅವರು ಹೋರಾಟದ ಹಿನ್ನೆಲೆಯಿಂದ ಬಂದವರು. ಮೇಲಾಗಿ ಇಡೀ ದೇಶಕ್ಕೆ ಅವರೇ ಪ್ರಧಾನಮಂತ್ರಿ. ಹೀಗಾಗಿ ಮಹದಾಯಿಗೆ ಸಂಬಂಧಿಸಿದ ರಾಜ್ಯಗಳನ್ನು ಂದೆಡೆ ಸೇರಿಸಿ, ಚರ್ಚಿಸಿ ಸಮಸ್ಯೆ ಪರಿಹರಿಸಬೇಕು. ಈ ಮೂಲಕ ಮನೆ ಯಜಮಾನನ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಚಂಪಾ ಹೇಳಿದರು.
ಕೃತಿಗಳ ಮೆರವಣಿಗೆ ಮಾಡಿ: ಸಮ್ಮೇಳನಾಧ್ಯಕ್ಷ ಕೋಟಗಾನಹಳ್ಳಿ ರಾಮಯ್ಯ ಅವರು ಮಾತನಾಡಿ, “ಅದ್ಧೂರಿತನದಿಂದ ಭಾಷೆ ಬೆಳೆಯುವುದಿಲ್ಲ. ಇದೇ ಉದ್ದೇಶದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಮಾಡದಂತೆ ತಿಳಿಸಿದ್ದೆ. ಹಿಂದೆ ಕೋಲಾರದಲ್ಲಿ ನಡೆದ ಸಮ್ಮೇಳನದಲ್ಲೂ ನಾನು ಸಾರೋಟು ಏರಿರಲಿಲ್ಲ.
ಸಾರೋಟಿನಲ್ಲಿ ಕವಿ ಕೂರುವ ಅಗತ್ಯವಿಲ್ಲ. ಆತನ ಬದಲಿಗೆ ಮೇರು ಕೃತಿಗಳನ್ನಿರಿಸಿ ಮೆರವಣಿಗೆ ಮಾಡಬೇಕು. ಯಾವುದೇ ಸಮಾರಂಭ, ಸಮ್ಮೇಳನ, ಸಮಾವೇಶ ಆಯೋಜಿಸಿದರೂ ಸಂಪ್ರದಾಯ, ಅದ್ಧೂರಿತನ ಬಿಟ್ಟು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು,’ ಎಂದು ಸಲಹೆ ನೀಡಿದರು.
ಕಾಡುಗುಡಿಯಲ್ಲಿ 20 ವರ್ಷಗಳ ಹಿಂದೆ ಮಕ್ಕಳ ಮೇಳ ನಡೆಸಿದ ನೆನಪಿದೆ. ಬಿ.ವಿ.ಕಾರಂತರು, ಇಕ್ಬಾಲ್ ಅನ್ಸಾರಿ ಅವರು ನಟಕ ರಚಿಸಿದ್ದ ವೇದಿಕೆ ಇದು. ಇಂಥ ಖ್ಯಾತನಾಮರ ನೇತೃತ್ವದಲ್ಲಿ ಕಾಡುಗುಡಿಯಲ್ಲಿ ಪ್ರದರ್ಶನಗೊಳ್ಳುತ್ತಿದ್ದ ನಾಟಕಗಳು, ರಂಗಮಂಟಪಕ್ಕೆ ಮಾದರಿ ಎಂಬಂತೆ ಮೂಡಿಬರುತ್ತಿದ್ದವು. ಹಾಗೇ ರಂಗಾಯಣ ಕಲಾವಿದರು ಮಕ್ಕಳ ಮೇಳಕ್ಕೆ ದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಸ್ಮರಿಸಿದರು.
ಚನ್ನಸಂದ್ರ ಸರ್ಕಾರಿ ಶಾಲೆಯಿಂದ ಕಾಡುಗುಡಿಯಲ್ಲಿ ಸಿದ್ಧಪಡಿಸಿದ್ದ ಸಾಹಿತ್ಯ ಸಮ್ಮೇಳನದ ವೇದಿಕೆವರೆಗೂ ಕನ್ನಡ ಜಾಗೃತಿ ಮೆರವಣಿಗೆ ನಡೆಯಿತು. ವಿವಿಧ ಜನಪದ ಕಲಾತಂಡಗಳು ಮೆರವಣಿಗೆಗೆ ಸಾಥ್ ನೀಡಿದವು. ಸಮ್ಮೇಳನದ ಅಂಗವಾಗಿ ಶಾಲೆ ಆವರಣದಲ್ಲಿ ಕನ್ನಡ ಪುಸ್ತಕ ಮಳಿಗೆಗಳನ್ನು ತೆರೆಯಲಾಗಿತ್ತು.
ಇದೇ ವೇಳೆ ಬೆಳ್ಳಂದೂರು ವಾರ್ಡ್ ಕಸಾಪ ವತಿಯಿಂದ ಆಯೋಜಿಸಿದ್ದ ಸಾಲುಮರದ ತಿಮ್ಮಕ್ಕ ಅವರ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು.
ಚಿತ್ರ ನಟಿ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ, ನಾಡೋಜ ಡಾ.ಮಹೇಶ್ ಜೋಷಿ, ಡಾ.ಬಾನಂದೂರು ಕೆಂಪಯ್ಯ, ಸಾಹಿತಿ ಬಿ.ಆರ್.ಲಕ್ಷ್ಮಣರಾವ್, ಬೈರಮಂಗಲ ರಾಮೇಗೌಡ, ಅಜಿತ್ ಕುಮಾರ್, ಪಾಲಿಕೆ ಸದಸ್ಯರಾದ ಎಸ್.ಮುನಿಸ್ವಾಮಿ, ಶ್ವೇತಾ ವಿಜಯ್ ಕುಮಾರ್, ಪರಿಸರ ಮಂಜುನಾಥ್ ಇತರರು ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.