ಕಾಲ್‌ ಮಾಡಿ 72 ಗಂಟೆಯಲ್ಲೇ ಪಿಂಚಣಿ ಪಡೆಯಿರಿ : ದೇಶದಲ್ಲೇ ಮೊದಲು ಅನುಷ್ಠಾನ

60 ವರ್ಷ ದಾಟಿದವರು ಕರೆ ಮಾಡಿದ ತಕ್ಷಣ ಪಿಂಚಣಿ ಅರ್ಜಿ ಜನರೇಟ್‌

Team Udayavani, Apr 10, 2022, 7:55 AM IST

ಕಾಲ್‌ ಮಾಡಿ 72 ಗಂಟೆಯಲ್ಲೇ ಪಿಂಚಣಿ ಪಡೆಯಿರಿ : ದೇಶದಲ್ಲೇ ಮೊದಲು ಅನುಷ್ಠಾನ

ಬೆಂಗಳೂರು: ಮನೆ ಬಾಗಿಲಿಗೆ ಪಿಂಚಣಿ ಮಂಜೂರು ಪತ್ರ ಅನುಷ್ಠಾನದ ಅನಂತರ, ಈಗ ಕರೆ ಮಾಡಿದ 72 ಗಂಟೆಗಳಲ್ಲಿ ಪಿಂಚಣಿ ತಲುಪಿಸಲು ಮುಂದಾಗಿರುವ ಕಂದಾಯ ಇಲಾಖೆ, ಅದಕ್ಕಾಗಿ ವಿಶೇಷ ಆ್ಯಪ್‌ ಸಿದ್ಧಪಡಿಸಿ ಸಹಾಯವಾಣಿ ಕೇಂದ್ರ ತೆರೆಯಲು ಸಜ್ಜಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಮೊದಲ ಹಂತ ಹಾಗೂ ತಾಲೂಕು ಮಟ್ಟದಲ್ಲಿ ಎರಡನೇ ಹಂತದಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಅರವತ್ತು ವರ್ಷ ದಾಟಿದವರು ಕರೆ ಮಾಡಿದ 72 ಗಂಟೆಗಳಲ್ಲಿ ಪಿಂಚಣಿ ಬ್ಯಾಂಕ್‌ ಖಾತೆಗೆ ಜಮೆ ಆಗಲಿದೆ. ಮನೆ ಬಾಗಿಲಿಗೆ ಪಿಂಚಣಿ ಮಂಜೂರು ಪತ್ರ ಕಾರ್ಯಕ್ರಮ ಅನುಷ್ಠಾನದಲ್ಲೂ ಗ್ರಾಮ ಲೆಕ್ಕಿಗ ಹಾಗೂ ಕಂದಾಯ ನಿರೀಕ್ಷಕರ ಮಟ್ಟದಲ್ಲಿ ಕೆಲವೊಂದು ದೂರುಗಳು ಬಂದ ಹಿನ್ನಲೆಯಲ್ಲಿ ಈಗ ಸುಧಾರಿತ ಯೋಜನೆ ಜಾರಿಗೆ ಇಲಾಖೆ ಮುಂದಾಗಿದೆ.

ತತ್‌ಕ್ಷಣ ಸ್ಪಂದನೆ
60 ವರ್ಷ ತುಂಬಿದವರು ಸಹಾಯವಾಣಿಗೆ ಕರೆ ಮಾಡಿದ ತತ್‌ಕ್ಷಣ ಅಧಿಕೃತವಾಗಿ ಮನವಿ ದಾಖಲಾಗುತ್ತದೆ. ಅನಂತರ ಅವರ ಆಧಾರ್‌ ಹಾಗೂ ಬಿಪಿಎಲ್‌ ಕಾರ್ಡ್‌ ಮತ್ತು ಚುನಾವಣ ಗುರುತಿನ ಚೀಟಿಯ ಮಾಹಿತಿ ಪಡೆದು ಅದನ್ನು ಸಂಬಂಧಪಟ್ಟ ಗ್ರಾಮ ಲೆಕ್ಕಿಗರು ಅಥವಾ ಕಂದಾಯ ನಿರೀಕ್ಷಕರಿಗೆ ಕಳುಹಿಸಲಾಗುವುದು.

ಈ ತಿಂಗಳಾಂತ್ಯಕ್ಕೆ ಸಿದ್ಧ
ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರು ಸಂಬಂಧಪಟ್ಟವರ ಮನೆಗೆ ಹೋಗಿ ದಾಖಲಾತಿ ಹಾಗೂ ಮಾಹಿತಿ ಪರಿಶೀಲಿಸಿ 48 ಗಂಟೆಗಳಲ್ಲಿ ವರದಿ ಸಲ್ಲಿಸಬೇಕು. ಅನಂತರ ತಹಸೀಲ್ದಾರ್‌ ಹಂತದಲ್ಲಿ ಪಿಂಚಣಿ ಮಂಜೂರಾತಿ ಆದೇಶ ಹೊರಡಿಸಿ 72 ಗಂಟೆಗಳಲ್ಲಿ ಅವರ ಖಾತೆಗೆ ಪಿಂಚಣಿ ಜಮೆ ಮಾಡಲಾಗುವುದು. ಎಪ್ರಿಲ್‌ ತಿಂಗಳಾಂತ್ಯಕ್ಕೆ ಆ್ಯಪ್‌ ಹಾಗೂ ಸಹಾಯವಾಣಿ ಸಿದ್ಧಗೊಳ್ಳಲಿದ್ದು, ಆದಷ್ಟು ಶೀಘ್ರ ಯೋಜನೆ ಜಾರಿಯಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಹಾಯವಾಣಿ ಮುಂದಿನ ದಿನಗಳಲ್ಲಿ ವಿಧವಾ, ವಿಕಲಚೇತನ ಸೇರಿದಂತೆ ಎಲ್ಲ ಮಾಸಾಶನ ಯೋಜನೆಗಳಿಗೂ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸಲಿದೆ.

68 ಲಕ್ಷ ಜನರಿಗೆ ಪಿಂಚಣಿ
ಸಾಮಾಜಿಕ ಭದ್ರತಾ ಯೋಜನೆಯಡಿ ವೃದ್ಧಾಪ್ಯ, ವಿಧವಾ, ವಿಕಲಚೇತನ ಸೇರಿದಂತೆ 68 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಇತ್ತೀಚೆಗೆ ಮನೆ ಬಾಗಿಲಿಗೆ ಪಿಂಚಣಿ ಯೋಜನೆ ಜಾರಿಯಾದ ಅನಂತರ 3.52 ಲಕ್ಷ ಜನರನ್ನು ಹೊಸದಾಗಿ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲೂ ಹೆಚ್ಚು ಪಿಂಚಣಿ ಹಾಗೂ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಕೆಯಾಗುತ್ತಿರುವುದು ಹಾಗೂ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ಮಂದಿ ಈ ಯೋಜನೆಗಳಿಗೆ ಅರ್ಹತೆ ಪಡೆಯುತ್ತಿರುವುದನ್ನು ಗಮನಿಸಿ ಮನೆ ಬಾಗಿಲಿಗೆ ಪಿಂಚಣಿ ಹಾಗೂ 72 ಗಂಟೆಗಳಲ್ಲಿ ಪಿಂಚಣಿ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಈ ಮಧ್ಯೆ ಕುಂದು ಕೊರತೆ ಸ್ವೀಕಾರಕ್ಕೂ ಸಹಾಯವಾಣಿ ಕೇಂದ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು, ಹಾಲಿ ಪಿಂಚಣಿ ಮತ್ತು ಮಾಸಾಶನ ಪಡೆಯುತ್ತಿರುವವರ ಸಂಪೂರ್ಣ ವಿವರ ಸಹಾಯವಾಣಿ ಕೇಂದ್ರದಲ್ಲಿ ಲಭ್ಯವಿರುವಂತೆ ಸೂಚಿಸಲಾಗಿದೆ.

ಮನೆ ಬಾಗಿಲಿಗೆ ಪಿಂಚಣಿ ಅನಂತರ ಇದೀಗ 72 ಗಂಟೆಗಳಲ್ಲಿ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಇದು ಸದ್ಯದಲ್ಲೇ ಜಾರಿಯಾಗಲಿದೆ. ಇಂತಹ ಸುಧಾರಿತ ವ್ಯವಸ್ಥೆ ದೇಶದಲ್ಲಿ ಇದೇ ಮೊದಲು.
– ಆರ್‌. ಅಶೋಕ್‌, ಕಂದಾಯ ಸಚಿವ

– ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.