ಪುರುಷ ಪ್ರಧಾನ ಪೊಲೀಸ್ ಇಲಾಖೆ
Team Udayavani, Feb 4, 2018, 12:16 PM IST
ಬೆಂಗಳೂರು: ರಕ್ಷಣಾ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಪುರುಷ ಪ್ರಧಾನ ಇಲಾಖೆಗಳಲ್ಲಿ ಮಹಿಳೆಯರಿಗೆ ಆಯಕಟ್ಟಿನ ಹುದ್ದೆ ನೀಡಲು ಹಿಂಜರಿಯಲಾಗುತ್ತಿದೆ ಎಂದು ಐಜಿಪಿ ಡಿ. ರೂಪಾ ಕಳವಳ ವ್ಯಕ್ತಪಡಿಸಿದರು.
ಬಂಟರ ಸಂಘದ ಮಹಿಳಾ ವಿಭಾಗದ ರಜತ ಮಹೋತ್ಸವದ ಅಂಗವಾಗಿ ವಿಜಯನಗರದ ಬಂಟರ ಸಂಘ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಪ್ರಮುಖ ಸ್ಥಾನಗಳಲ್ಲಿ ಪುರುಷ ಅಧಿಕಾರಿಗಳಿಗೆ ಹೆಚ್ಚು ಮಣೆ ಹಾಕಲಾಗುತ್ತದೆ. ಮಹಿಳೆಯರು ಉನ್ನತ ಹುದ್ದೆಯಲ್ಲಿದ್ದರೆ ಸಮರ್ಥವಾಗಿ ಕೆಲಸ ಮಾಡುವುದಿಲ್ಲ ಎಂಬ ಆರೋಪ ಹೊರಿಸಲಾಗುತ್ತದೆ ಎಂದು ಹೇಳಿದರು.
ಕೆಲಸದ ವಿಚಾರದಲ್ಲಿ ಮಹಿಳೆ- ಪುರುಷ ಎಂಬ ವ್ಯತ್ಯಾಸ ಇರುವುದಿಲ್ಲ. ಆದರೆ, ವ್ಯವಸ್ಥಿತವಾಗಿ ಕೆಲವರು ಮಹಿಳೆಯರು ಯಾವುದೇ ಕ್ಷೇತ್ರದಲ್ಲೂ ಮುಂದುವರಿಯದಂತೆ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ಬಯಲಿಗೆ ಎಳೆದಾಗ ಅನೇಕರು ನನ್ನನ್ನು ಪ್ರಶ್ನಿಸಿದ್ದರು. ಎಲ್ಲವನ್ನು ಸಮರ್ಥವಾಗಿ ಎದುರಿಸಿದೆ ಎಂದರು.
ಪೂಜನೀಯ ಸ್ಥಾನ: ಮೈಸೂರು ರಾಜಮನೆತನದ ಡಾ. ಪ್ರಮೋದಾದೇವಿ ಒಡೆಯರ್, ಮಹಿಳೆಯರ ಸಬಲೀಕರಣದ ಚರ್ಚೆ ಈಗ ಜಗತ್ತಿನಾದ್ಯಂತ ನಡೆಯುತ್ತಿದೆ. ಬಂಟರ ಸಮುದಾಯ ಅದನ್ನು ತಲೆತಲಾಂತರದಿಂದ ಪಾಲಿಸಿಕೊಂಡು ಬಂದಿದೆ. ಭಾರತದಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನವಿದೆ. ಮಹಿಳೆಯನ್ನು ಲಕ್ಷ್ಮೀ, ಅನ್ನಪೂರ್ಣೆ, ದುರ್ಗೆ, ರಾಜರಾಜೇಶ್ವರಿ ಎಂದು ಗೌರವಿಸಲಾಗುತ್ತದೆ. ಎಲ್ಲಾ ದೇವತೆಗಳ ಗುಣವನ್ನು ಮಹಿಳೆ ಹೊಂದಿದ್ದಾಳೆ ಎಂದು ಬಣ್ಣಿಸಿದರು.
ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾತನಾಡಿ, ಮಹಿಳೆ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ದೇಶದಲ್ಲಿ ಪ್ರತಿ ಸಾವಿರ ಪುರುಷರಿಗೆ 855 ಮಹಿಳೆಯರು ಮಾತ್ರವಿದ್ದಾರೆ. ರಾಜಕೀಯದಲ್ಲಿ ಮಹಿಳೆಯರಿಗೆ ಶೇ.13 ಸ್ಥಾನಗಳು ಮಾತ್ರವೇ ಸಿಕ್ಕಿದೆ. ಇದು ಹೆಚ್ಚಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯಾಯಾಧೀಶೆ ವಿನುತಾ ಪಿ. ಶೆಟ್ಟಿ, ಐಪಿಎಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ, ಡಾ. ವಾಹಿನಿ ಅರವಿಂದ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಬಂಟರ ಸಂಘದ ಮಹಿಳಾ ವಿಭಾಗದ ಮುಖ್ಯಸ್ಥೆ ಅಮೃತಾ ಎಸ್.ಶೆಟ್ಟಿ, ಉಪಾಧ್ಯಕ್ಷೆ ಅಮೃತ್ ಪಿ.ರೈ, ಸಂಚಾಲಕಿ ಮಾಲತಿ ಜೆ.ಶೆಟ್ಟಿ, ಬಂಟರ ಸಂಘದ ಅಧ್ಯಕ್ಷ ಡಿ. ಚಂದ್ರಹಾಸ ರೈ, ಗೌರವ ಕಾರ್ಯದರ್ಶಿ ಜೆ. ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.