Police Harassment: ಖಾಕಿ ಕಿರುಕುಳಕ್ಕೆ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ


Team Udayavani, Sep 21, 2023, 12:33 PM IST

tdy-9

ಬೆಂಗಳೂರು: ವೈಯಾಲಿಕಾವಲ್‌ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ.

ತಲಘಟ್ಟಪುರದ ನಾಗ ರಾಜ್‌(47) ಮೃತಪಟ್ಟವರು.

ಸನಾವುಲ್ಲಾ ಎಂಬಾ ತನ ಒಡೆತನದಲ್ಲಿರುವ ಇಪಿಪಿ (ಎನ್‌ ವೇರ್‌ವೆುಂಟ್‌ ಪೊಲೂಷನ್‌ ಪ್ರಾಜೆಕ್ಟ್) ಕಂಪನಿಯಲ್ಲಿ ನಾಗರಾಜ್‌ ಕೆಲಸ ಮಾಡುತ್ತಿದ್ದ. ಈ ಕಂಪನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್‌ ಎಂಬುವವರು ವೈಯಾಲಿಕಾವಲ್‌ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್‌‌ರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದ ನಾಗರಾಜ್‌ 2 ಪುಟ ಡೆತ್‌ನೋಟ್‌ ಬರೆದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್‌ಸ್ಪೆಕ್ಟರ್‌ ಸೇರಿ ಐವರ ವಿರುದ್ಧ ಎಫ್ಐಆರ್‌: ನಾಗರಾಜ್‌ ಅವರ ಪತ್ನಿ ವಿನುತಾ ಕೊಟ್ಟ ದೂರಿನ ಆಧಾರದ ಮೇಲೆ ಸನಾವುಲ್ಲಾ, ನಟರಾಜ್‌, ಈರೇಗೌಡ, ವೈಯಾಲಿಕಾವಾಲ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಹಾಗೂ ಹೆಣ್ಣೂರು ಪೊಲೀಸ್‌ ಸಿಬ್ಬಂದಿ ಶಿವಕುಮಾರ್‌ ವಿರುದ್ಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಖಾಸಗಿ ಕಂಪನಿಯಲ್ಲಿ ಟೀಮ್‌ ಲೀಡರ್‌ ಆಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ನಾಗರಾಜ್‌ ಪ್ರತಿಷ್ಠಿತ ಕಂಪನಿಯಲ್ಲಿ ಟೆಕ್ನಿಷಿಯನ್‌ ಕೆಲಸ ಮಾಡಿ ಕಳೆದ 2 ವರ್ಷಗಳ ಹಿಂದೆ ವಾಲೆಂಟರಿ ರಿಟೈರ್‌ವೆುಂಟ್‌ ಪಡೆದಿದ್ದರು. ಆತ್ಮಹತ್ಯೆಗೂ ಮುನ್ನ ನನ್ನ ವಾಟ್ಸ್‌ಆ್ಯಪ್‌ಗೆ ಡೆತ್‌ನೋಟ್‌ ಕಳಿಸಿದ್ದರು. ನನ್ನ ಸಾವಿಗೆ ಈ ಐವರು ಕಾರಣ ಎಂದು ತಿಳಿಸಿದ್ದಾರೆ.

ಹೆಣ್ಣೂರು ಪೊಲೀಸ್‌ ಠಾಣೆಯ ಶಿವಕುಮಾರ್‌ಗೆ 8 ಲಕ್ಷ ರೂ. ನೀಡಿದ್ದೇನೆ. ದೇವಾರಾಜ್‌ ಎಂಬುವವರಿಗೆ 9 ಲಕ್ಷ ರೂ. ಕೊಡಬೇಕು. ದಯವಿಟ್ಟು ನನ್ನನ್ನು ಕ್ಷಮಿಸು ಎಂದು ಹೇಳಿದ್ದರು. ಹೀಗಾಗಿ ನಾಗರಾಜ್‌ ಆತ್ಮಹತ್ಯೆಗೆ ಕಾರಣವಾದ ಐವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ.

ಬೆಲ್ಟ್, ಬ್ಯಾಟ್‌, ಶೂ ಏಟು: ಡೆತ್‌ನೋಟ್‌ನಲ್ಲಿ ಉಲ್ಲೇಖ: ವೈಯಾಲಿಕಾವಲ್‌ ಪೊಲೀಸರು ಬೆಲ್ಡ್‌ನಿಂದ ಹಲ್ಲೆ ನಡೆಸಿದ್ದಾರೆ. ಸಾಲದಕ್ಕೆ ಬ್ಯಾಟ್‌ನಿಂದ ಬಡಿದು, ಶೂನಿಂದ ಒದ್ದಿದ್ದರು ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ವೈಯಾಲಿ ಕಾವಲ್‌ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌, ಇಪಿಪಿ ಕಂಪನಿ ಮಾಲೀಕ ಸನಾವುಲ್ಲಾ, ನಟರಾಜ್‌, ಎಂ.ಸಿ ಯೆರ್ರೆಗೌಡ ಹೆಸರನ್ನೂ ಉಲ್ಲೇಖೀಸಲಾಗಿದೆ.

 

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.