![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 26, 2023, 11:07 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ಹೋಗಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಬ್ಬಗೋಡಿ ನಿವಾಸಿ ರಾಮು(40) ಮೃತ ವ್ಯಕ್ತಿ.
ಮಂಗಳವಾರ ರಾತ್ರಿ ನಾಲ್ಕೈದು ಮಂದಿ ಸ್ನೇಹಿತರ ಜತೆ ಪಾರ್ಟಿ ಮಾಡಲು ಆನೇಕಲ್-ಇಳಲಗಿ ರೈಲ್ವೆ ನಿಲ್ದಾಣ ಬಳಿ ಹೋಗಿದ್ದರು. ಎಲ್ಲರೂ ರಾತ್ರಿ ಪಾರ್ಟಿ ಮಾಡಿದ್ದಾರೆ. ಮದ್ಯದ ಅಮಲಿನಲ್ಲಿ ರಾಮು ಮೂತ್ರ ವಿಸರ್ಜನೆಗೆ ರೈಲ್ವೆ ಹಳಿ ಬಳಿ ಹೋಗಿದ್ದಾರೆ. ಈ ವೇಳೆ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿಯ 20 ಮೀಟರ್ ದೂರದಲ್ಲೇ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.
You seem to have an Ad Blocker on.
To continue reading, please turn it off or whitelist Udayavani.