ತಿಂಗಳಾಂತ್ಯಕ್ಕೆ ಮಾವು ಮೇಳಗಳು ಆರಂಭ


Team Udayavani, May 13, 2019, 3:06 AM IST

tinglantya

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಾವು-ಹಲಸು ಮೇಳ ಏರ್ಪಡಿಸಲು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆ ಮುಂದಾಗಿದೆ.

ಈಗಾಲೇ ಸುಗ್ಗಿ ಆರಂಭವಾಗಿ ತಿಂಗಳು ಕಳೆದೆ. ಆದರೂ ಸಿಲಿಕಾನ್‌ ಸಿಟಿಯಲ್ಲಿ ಇನ್ನು ಮಾವು ಮೇಳೆ ಆರಂಭವಾದೆ ಮಾವು ಪ್ರಿಯರು ಎದುರು ನೋಡುವಂತಾಗಿದೆ. ಚುನಾವಣೆ ಹಾಗೂ ಮಾವಿನ ಫಸಲು ತಡವಾದ್ದರಿಂದ ಮೇಳವೂ ತಡವಾಗಿದ್ದು, ಮೇ 30 ರಿಂದ ಲಾಲ್‌ಬಾಗ್‌ನಲ್ಲಿ ಹಾಗೂ ಜೂನ್‌ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯಗಳಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದೆ ಎಂದು ಮಾವು ನಿಗಮ ತಿಳಿಸಿದೆ.

ಇದರ ಜತೆಗೆ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯು ಮೇ 28 ಮತ್ತು 29ರಂದು ಹೆಸರಘಟ್ಟದ ಐಸಿಎಆರ್‌-ಐಐಎಚ್‌ಆರ್‌ ಪ್ರಾಂಗಣದಲ್ಲಿ ಮಾವು ಮತ್ತು ಹಲಸು ವೈವಿಧ್ಯತಾ ಮೇಳ, ಜೂ.1 ಮತ್ತು 2 ರಂದು ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಮಾವು ಮತ್ತು ಹಲಸು ವೈವಿಧ್ಯತಾ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳಗಳ ಉದ್ದೇಶ ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರು ನೇರವಾಗಿ ಗ್ರಾಹಕರಿಗೆ ತಾಜಾ ಹಾಗೂ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಬೇಕು ಎಂಬುದಾಗಿದೆ. ಲಾಲ್‌ಬಾಗ್‌ನಲ್ಲಿ ನಡೆಯುವ ಮೇಳಕ್ಕೆ ಕೋಲಾರ ಮತ್ತಿತರ ಭಾಗಗಳಿಂದ ತೋತಾಪುರಿ, ಮಲಗೋವಾ, ನೀಲಂ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ ಸೇರಿದಂತೆ 12 ಬಗೆಯ ವಾಣಿಜ್ಯ ಮಾವಿನ ತಳಿಗಳು, ಜಿಕೆವಿಕೆ, ಐಐಎಚ್‌ಆರ್‌ಗಳಲ್ಲಿ ಸಂಶೋಧನೆ ನಡೆಸಿದ ಹೊಸ ಹಲಸಿನ ತಳಿಗಳು ಹಾಗೂ ರೈತರು ಬೆಳೆದ ನಾನಾ ತಳಿಯ ಹಲಸಿನ ಬರಲಿವೆ. ಇನ್ನು ಈ ವರ್ಷ ಜುಲೈ ಅಂತ್ಯದವರೆಗೆ ಹಣ್ಣು ಗ್ರಾಹಕರಿಗೆ ಲಭ್ಯವಾಗಲಿವೆ.

ರಾಸಾಯನಿಕ ಮಾವಿಗಿಲ್ಲ ಅವಕಾಶ: ಮೇಳಗಳಲ್ಲಿ ಯಾವುದೇ ರಾಸಾಯನಿಕಗಳನ್ನು ಬಳಸದೆ ಸಹಜವಾಗಿ ಮಾಗಿಸಿದ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಕೃತಕವಾಗಿ ಮಾಗಿಸಿದ ಮಾವು ಮೇಳದಲ್ಲಿ ನಿಷೇಧ. ಇನ್ನು ಹಣ್ಣಿನ ಗುಣಮಟ್ಟ, ದರ ನಿಗದಿಗೆ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರು ರಾಸಾಯನಿಕ ಬಳಸಿದ ಹಣ್ಣುಗಳ ಬಗ್ಗೆ ನಿಗಾ ವಹಿಸುತ್ತದೆ.

“ಮ್ಯಾಂಗೊ ಪಿಕ್ಕಿಂಗ್‌ ಟೂರ್‌’: ಗ್ರಾಹಕರು ನೇರವಾಗಿ ತೋಟಕ್ಕೆ ಲಗ್ಗೆ ಇಟ್ಟು ಮರದಿಂದ ಮಾವು ಕಿತ್ತು ಸವಿಯಲೆಂದೇ ಮಾವು ನಿಗಮದ ವತಿಯಿಂದ ಈ ಬಾರಿಯೂ ಮ್ಯಾಂಗೊ ಪಿಕ್ಕಿಂಗ್‌ ಟೂರ್‌ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಮಾವು ನಿಗಮದ ವೆಬ್‌ಸೈಟ್‌ನಲ್ಲಿ ನೋಂದಣಿ ಆರಂಭವಾಗಿದ್ದು, ಭಾನುವಾರದಂದು ಬೆಂಗಳೂರಿನಿಂದ ಸಾರ್ವಜನಿಕರನ್ನು ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳ ಯಾವುದಾದರೊಂದು ಮಾವು ತೋಟಗಳಿಗೆ ಬಸ್‌ಗಳಲ್ಲಿ ಕರೆದುಕೊಂಡು ಹೋಗಲಾಗುತ್ತದೆ. ಬೆಳಗ್ಗೆಯಿಂದ ಸಂಜೆವರೆಗೂ ತೋಟ ಸುತ್ತಿ ಗ್ರಾಹಕರು ತಮಗೆ ಬೇಕಾದಷ್ಟು ಮಾವನ್ನು ಕಿತ್ತು ಖರೀದಿಸಬಹುದು. ಆಸಕ್ತರು ನಿಗಮದ ಡಿಡಿಡಿ.ksಞಛಞcl.ಟ್ಟಜ ವೆಬ್‌ಸೈಟ್‌ನಲ್ಲಿ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

ಹಾಪ್‌ಕಾಮ್ಸ್‌ನಲ್ಲಿ ಮೇ.17 ರಿಂದ ಮಾವು ಮೇಳ ಆರಂಭವಾಗಲಿದ್ದು, ಸುಗ್ಗಿ ಮುಗಿಯುವವರೆಗೂ ಮೇಳ ನಡೆಯಲಿದೆ. ಎಲ್ಲಾ ಹಾಪ್‌ಕಾಮ್ಸ್‌ ಮಳಿಗೆಗಳಲ್ಲೂ ಪ್ರತ್ಯೇಕ ಜಾಗ ಮಾಡಿ ವಿವಿಧ ತಳಿಯ ಮಾವುಗಳನ್ನು ಮಾರಾಟ ಮಾಡಲಾಗುತ್ತದೆ. ಗ್ರಾಹಕರು ಹಾಪ್‌ಕಾಮ್ಸ್‌ಗೆ ಭೇಟಿ ನೀಡಿ ನೈಸರ್ಗಿಕ ಹಾಗೂ ಗುಣಮಟ್ಟದ ಮಾವನ್ನು ಖರೀದಿಸಿಬಹುದು.
-ಪ್ರಸಾದ್‌, ಹಾಪ್‌ಕಾಮ್ಸ್‌ ಎಂ.ಡಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.