ಬಿಬಿಎಂಪಿಗೆ ಹೊರೆಯಾದ ಮಾರ್ಷಲ್‌ಗ‌ಳು


Team Udayavani, Aug 22, 2022, 1:18 PM IST

ಬಿಬಿಎಂಪಿಗೆ ಹೊರೆಯಾದ ಮಾರ್ಷಲ್‌ಗ‌ಳು

ಬೆಂಗಳೂರು: ಗುತ್ತಿಗೆದಾರರ ಬಿಲ್‌ ಪಾವತಿ, ಯೋಜನೆಗಳ ಅನುಷ್ಠಾನಕ್ಕೆ ಹಣವಿಲ್ಲದೆ ಸರ್ಕಾರದಿಂದ ಅನುದಾನ ಪಡೆಯುವುದು ಸೇರಿ ಇನ್ನಿತರ ಕಾರಣಗಳಿಂದಾಗಿ ಬಿಬಿಎಂಪಿ ಆರ್ಥಿಕ ಸಂಕಷ್ಟದಲ್ಲಿದೆ. ಆದರೆ, ಮಾರ್ಷಲ್‌ಗ‌ಳ ಹೆಸರಲ್ಲಿ ಮಾತ್ರ ಪ್ರತಿ ವರ್ಷ 20 ಕೋಟಿ ರೂ.ಗೂ ಹೆಚ್ಚಿನ ವೆಚ್ಚ ಮಾಡಲಾಗುತ್ತಿದೆ.

ಆರ್ಥಿಕವಾಗಿ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಬಿಬಿಎಂಪಿ, ವೃಥಾ ವೆಚ್ಚ ಕಡಿವಾಣಕ್ಕೆ ಇನ್ನೂ ಮುಂದಾಗಿಲ್ಲ. ಶಿಕ್ಷಣ, ಎಂಜಿನಿಯರಿಂಗ್‌ ಸೇರಿ ವಿವಿಧ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಮರ್ಪಕ ಕೆಲಸಗಳಾಗುತ್ತಿಲ್ಲ. ಅದರಲ್ಲೂ ವಾರ್ಡ್‌ ಎಂಜಿನಿಯರ್‌ಗಳ ಕೊರತೆಯಿಂದಾಗಿ ವಾರ್ಡ್‌ ಮಟ್ಟದಲ್ಲಿ ಸಾಕಷ್ಟು ಸಮಸ್ಯೆಗಳಾಗುತ್ತಿದೆ. ಹೀಗಿದ್ದರೂ 973 ಜನ ಮಾರ್ಷಲ್‌ಗ‌ಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಅವರ ವೇತನ ಸೇರಿ ಇನ್ನಿತರ ಕಾರ್ಯಕ್ಕಾಗಿ ವಾರ್ಷಿಕ 20 ಕೋಟಿ ರೂ.ಗೂ ಹೆಚ್ಚಿನ ಖರ್ಚು ಮಾಡಲಾಗುತ್ತಿದೆ.

ವಿಭಾಗಗಳ ನಡುವೆ ಗೊಂದಲ: ಬಿಬಿಎಂಪಿ ಆಡಳಿತ ವಿಭಾಗದ ಮಾಹಿತಿಯಂತೆ 973 ಮಾರ್ಷಲ್‌ಗ‌ಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲಾ 25 ಸಾವಿರ ರೂ. ವೇತನ ನೀಡಲಾಗುತ್ತಿದೆ. ಅದರ ಪ್ರಕಾರ 973 ಮಾರ್ಷಲ್‌ಗ‌ಳಿಗಾಗಿ ಮಾಸಿಕ 2.43 ಕೋಟಿ ರೂ. ವ್ಯಯಿಸಲಾಗುತ್ತಿದೆ. ಆದರೆ, ಬಿಬಿಎಂಪಿ ಹಣಕಾಸು ವಿಭಾಗದ ಮಾಹಿತಿಯಂತೆ 437 ಮಾರ್ಷಲ್‌ಗ‌ಳು ಕೆಲಸ ಮಾಡುತ್ತಿದ್ದಾರೆ. ಅದನ್ನು ಗಮನಿಸಿದರೆ ಮಾಸಿಕ 1 ಕೋಟ ರೂ. ವೇತನ ಪಾವತಿಸಲಾಗುತ್ತಿದೆ. ಅದರ ಜತೆಗೆ ಮಾರ್ಷಲ್‌ಗ‌ಳಿಗೆ ಸಮವಸ್ತ್ರ, ಬೂಟು, ಗಸ್ತು ವಾಹನ ಸೇರಿ ಹೆಚ್ಚುವರಿಯಾಗಿ ವಾರ್ಷಿಕ 1 ಕೋಟಿ ರೂ.ಗೂ ಹೆಚ್ಚಿನ ಖರ್ಚು ಮಾಡಲಾಗುತ್ತಿದೆ. ಆಡಳಿತ ವಿಭಾಗದ ಮಾಹಿತಿಯನ್ನು ಗಮನಿಸಿದರೆ ಮಾರ್ಷಲ್‌ಗ‌ಳಿಗಾಗಿ ಬಿಬಿಎಂಪಿ ಮಾಡುತ್ತಿರುವ ವಾರ್ಷಿಕ ವೆಚ್ಚ 24 ಕೋಟಿ ರೂ. ದಾಟಲಿದೆ. ಅದೇ ಹಣಕಾಸು ವಿಭಾಗದ ಮಾಹಿತಿ ಯಂತೆ 12 ಕೋಟಿ ರೂ. ಹೆಚ್ಚಿನ ವೆಚ್ಚವಾಗುತ್ತಿದೆ.

ಜಾಗೃತಿ ಮೂಡಿಸುವುದೇ ಕೆಲಸ: ನಗರದಲ್ಲಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಎನ್ನುವಂತೆ ಮಾರ್ಷಲ್‌ಗ‌ಳನ್ನು ನೇಮಕ ಮಾಡಲಾಗಿದೆ. ಆರಂಭದಲ್ಲಿ ಮಾರ್ಷಲ್‌ ಗಳು ಜನರು ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯುವುದು, ಕಸ ಎಸೆಯುವವರಿಗೆ ದಂ ಡ ವಿಧಿಸುವ ಕಾರ್ಯಕ್ಕೆ ನೇಮಕ ಮಾಡಲಾಗಿತ್ತು. ಅದರ ಜತೆಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಜನರ ನಿಯಂತ್ರಣದಂತಹ ಕೆಲಸಕ್ಕೆ ನೇಮಿಸಲಾಯಿತು. ಕೊರೊನಾ ಕಾಲದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದಕ್ಕೆ ಬಳಸಲಾಗಿತ್ತು. ಆದರೀಗ ಮಾರ್ಷಲ್‌ಗ‌ಳಿಗೆ ಸಮರ್ಪಕ ಕೆಲವೇ ಇಲ್ಲದಂತಾಗಿದೆ. ಏಕಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳ ಉತ್ಪಾದನೆ ತಡೆಯಂತಹ ಕೆಲಸದಲ್ಲಿ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ಅದನ್ನು ಹೊರತುಪಡಿಸಿದರೆ ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ 262 ಮಾರ್ಷಲ್‌ಗ‌ಳು ಕೆಲಸ ಮಾಡುತ್ತಿದ್ದು, ಅವರುಗಳು ಬ್ಲ್ಯಾಕ್‌ಸ್ಪಾಟ್‌ಗಳಲ್ಲಿ ಕಸ ಎಸೆಯುವುದನ್ನು ತಡೆಯುವ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಅದರ ಜತೆಗೆ ಜನರಿಗೆ ಮಾಸ್ಕ್ ಧರಿಸುವುದು, ಕಸ ಎಸೆಯುವುದರಿಂದಾಗುವ ಸಮಸ್ಯೆಗಳ ಕುರಿತಂತೆ ಜನರಿಗೆ ತಿಳಿಹೇಳುತ್ತಾ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ.

15 ಸಾವಿರ ಕೋಟಿ ರೂ. ಹೊಣೆಗಾರಿಕೆ : ಸದ್ಯ ಬಿಬಿಎಂಪಿಯ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಹಂತದಲ್ಲಿದೆ. ಆದರೂ, ಗುತ್ತಿಗೆದಾರರಿಗೆ ಬಿಲ್‌ ಪಾವತಿ, ಮುಂದೆ ಕೈಗೊಳ್ಳಬೇಕಿರುವ ಕಾಮಗಾರಿಗಳ ಮೊತ್ತ, ಸಾಲದ ಪ್ರಮಾಣ ಸೇರಿ ಬಿಬಿಎಂಪಿ ಮೇಲೆ 15 ಸಾವಿರ ಕೋಟಿ ರೂ. ಗೂ ಹೆಚ್ಚಿನ ಹೊಣೆಗಾರಿಕೆಯಿದೆ. ಹೀಗಾಗಿಯೇ ಬಿಬಿಎಂಪಿ ಪ್ರತಿಯೊಂದು ದೊಡ್ಡ ಯೋಜನೆ ಕೈಗೊಳ್ಳಬೇಕಾದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನವನ್ನು ಕಾಯಬೇಕಾದ ಪರಿಸ್ಥಿತಿಯಿದೆ. ಸ್ವಂತ ಆದಾಯದಲ್ಲಿ ಕೇವಲ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ ಸೇರಿ ಇನ್ನಿತರ ನಿರ್ವಹಣಾ ಕಾರ್ಯ ಮಾಡಬೇಕಿದೆ.

ಬಿಬಿಎಂಪಿಗೆ ಮಾರ್ಷಲ್‌ಗ‌ಳ ಅಗತ್ಯವಿದೆ. ಏಕಬಳಕೆ ಪ್ಲಾಸ್ಟಿಕ್‌ ನಿಷೇಧದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ತ್ಯಾಜ್ಯ ಬ್ಲ್ಯಾಕ್‌ಸ್ಪಾಟ್‌ ಗಳ ಸೃಷ್ಟಿ ತಡೆಯುವ ಕೆಲಸವನ್ನು ಮಾರ್ಷ ಲ್‌ಗ‌ಳು ಮಾಡುತ್ತಿದ್ದಾರೆ. ಅವರಿಂದ ಬಿಬಿಎಂಪಿಗೆ ಹೊರೆಯಾಗುತ್ತಿಲ್ಲ. -ಜಯರಾಂ ರಾಯಪುರ, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

-ಗಿರೀಶ್‌ ಗರಗ

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.