ರುದ್ರಭೂಮಿ ಅವ್ಯವಸ್ಥೆಗೆ ಮೇಯರ್ ಆಕ್ರೋಶ
Team Udayavani, Nov 18, 2018, 12:26 PM IST
ಬೆಂಗಳೂರು: ಶಾಂತಿನಗರ ಹಿಂದೂ ರುದ್ರಭೂಮಿ ಸಮೀಪದಲ್ಲಿರುವ ಬ್ಲಾಕ್ಸ್ಪಾಟ್ ಕಂಡು ಆಕ್ರೋಶ ವ್ಯಕ್ತಪಡಿಸಿದ ಮೇಯರ್ ಗಂಗಾಂಬಿಕೆ, ರುದ್ರಭೂಮಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ 50 ಸಾವಿರ ರೂ. ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಸ್ವತ್ಛತಾ ಆಂದೋಲನದಡಿಯಲ್ಲಿ ಶನಿವಾರ ನಗರದ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಸ್ವತ್ಛತೆ ಕಾಪಾಡಲು ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗರಂ ಆದರು. ಜತೆಗೆ ನಿರ್ವಹಣೆ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಂಡು ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿನಗರದ 4 ರುದ್ರಭೂಮಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕ್ರೈಸ್ತರ 2 ಹಾಗೂ ಅಲ್ಪಸಂಖ್ಯಾರ ಒಂದು ರುದ್ರಭೂಮಿ ಸ್ವತ್ಛತೆಯಿದೆ ಕೂಡಿದೆ. ಆದರೆ, ಹಿಂದೂ ರುದ್ರಭೂಮಿ ಮಾತ್ರ ಅವ್ಯವಸ್ಥೆಯಿಂದ ಕೂಡಿದ್ದು, ಕೂಡಲೇ ರಾಜ್ಯ ಸರ್ಕಾರದ ಅನುದಾನದಲ್ಲಿಯಡಿ ರುದ್ರಭೂಮಿ ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಹಿಂದೂ ರುದ್ರಭೂಮಿಯ ಸಮೀಪ ಕಸ ಸುರಿಯುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಎಲ್ಲ ವಾರ್ಡ್ಗಳಲ್ಲಿಯೂ ಮಾರ್ಷಲ್ ನೇಮಿಸಲಾಗುತ್ತಿದ್ದು, ನಗರದ ಸ್ವತ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆ ತರುವವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಸವೇಶ್ವರ ಪುತ್ಥಳಿ ನಿರ್ಮಾಣ: ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮೇಲ್ಸೇತುವೆ ಬಳಿ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಜಾಗ ನೀಡುವಂತೆ ವೀರಶೈವ ಸಮುದಾಯದವರು ಕೇಳಿದ್ದು, ಅದರಂತೆ ಪಾಲಿಕೆಯಿಂದ ಜಾಗ ನೀಡಿದ್ದೇವೆ. ಅದರಂತೆ ಪುತ್ಥಳಿಗೆ ತಗಲುವ ವೆಚ್ಚವನ್ನು ಅವರೇ ವ್ಯಯಿಸಲಿದ್ದು, ಈ ಕುರಿತು ಆಯುಕ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಮಾಜಿ ಮೇಯರ್ ಪದ್ಮಾವತಿ, ರಾಜಾಜಿನಗರ ಪಾಲಿಕೆ ಸದಸ್ಯ ಜಿ.ಕೃಷ್ಣಮೂರ್ತಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.