![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-415x313.jpg)
ಮೀಟರ್ ಬಡ್ಡಿ ಆದೇಶ ಮಾರ್ಪಾಡು
Team Udayavani, Oct 14, 2018, 12:37 PM IST
![meter.jpg](https://www.udayavani.com/wp-content/uploads/2018/10/14/meter-403x465.jpg)
ಬೆಂಗಳೂರು: ಬಡ್ಡಿ, ಮೀಟರ್ ಬಡ್ಡಿ ಹೆಸರಿನಲ್ಲಿ ಅಮಾಯಕ ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ ಹಿನ್ನೆಲೆಯಲ್ಲಿ ತಾವು ಹೊರಡಿಸಿದ ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಮತ್ತೆ ಮಾರ್ಪಾಡು ಮಾಡಿದ್ದಾರೆ.
ಸಹಕಾರ ಇಲಾಖೆಯ ಅಧಿಕಾರಿಗಳು ಅಥವಾ ನೊಂದವರು ಬಂದು ದೂರು ನೀಡದ ಹೊರತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತಿಲ್ಲ ಮರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಡ್ಡಿ, ಮೀಟರ್ ಬಡ್ಡಿ, ಫೈನಾನ್ಸ್ ವ್ಯವಹಾರದ ನೆಪದಲ್ಲಿ ರೈತರು, ಅಮಾಯಕ ಸಾರ್ವಜನಿಕರ ಮೇಲೆ ದಬ್ಟಾಳಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದಿದ್ದರು.
ಇದರ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅವರು ಅ.3ರಂದು ಹೆಚ್ಚು ಪ್ರಮಾಣದಲ್ಲಿ ಬಡ್ಡಿಯನ್ನು ವಸೂಲಿ ಮಾಡುವುದು ಮತ್ತು ಸಾಲ ಮರುಪಾವತಿಗಾಗಿ ಸಾರ್ವಜನಿಕರು ಹಾಗೂ ರೈತರನ್ನು ಶೋಷಿಸುತ್ತಿರುವ ಬಗ್ಗೆ ಯಾವುದೇ ರೂಪದಲ್ಲಿ ದೂರು ಬಂದಲ್ಲಿ ಕ್ರಮಕ್ಕೆ ಮುಂದಾಗಬೇಕು. ಇಲ್ಲವೇ ಸ್ವಂಯ ಪ್ರೇರಿತವಾಗಿ ಅಂತಹ ಪ್ರಕರಣಗಳ ಕುರಿತು ಕ್ರಮಕೈಗೊಳ್ಳಬೇಕು ಎಂದು ಆದೇಶಿಸಿದ್ದರು.
ಅದೇ ದಿನ ಮತ್ತೂಂದು ಸುತ್ತೋಲೆ ಹೊರಡಿಸಿರುವ ಅವರು, ಈಗಾಗಲೇ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆಯಲ್ಲಿನ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಬೇಕು ಎಂಬ ಅಂಶವನ್ನು ಹಿಂಪಡೆಯಲಾಗಿದ್ದು, ಸಹಕಾರ ಇಲಾಖೆಯ ರಿಜಿಸ್ಟ್ರಾರ್ ಅಥವಾ ಸಹಾಯಕ ರಿಜಿಸ್ಟ್ರಾರ್ ಹಾಗೂ ಅಧಿಕಾರಿಗಳಿಂದ ದೂರುಗಳು ಬಂದಲ್ಲಿ ಮಾತ್ರ ಪ್ರಕರಣ ದಾಖಲಿಸಬೇಕು.
ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲು ಮಾಡಬಾರದು ಎಂದು ಮಾರ್ಪಾಡು ಮಾಡಿದ್ದಾರೆ. ಈ ಆದೇಶ ಅಕ್ರಮವಾಗಿ ಬಡ್ಡಿ, ಮೀಟರ್ ಬಡ್ಡಿ ದಂಧೆ ನಡೆಸುವ ದಂಧೆಕೋರರಿಗೆ ವರದಾನವಾಗಲಿದ್ದು, ಪರೋಕ್ಷವಾಗಿ ಪೊಲೀಸರಿಗೂ ಲಾಭವಾಗಲಿದೆ ಎಂಬ ಆರೋಪ ಕೇಳಿಬಂದಿದೆ.
ದಂಧೆಕೋರರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ ಬೆನ್ನಲ್ಲೇ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಬಡ್ಡಿ, ಮೀಟರ್ ಬಡ್ಡಿ ಹೆಸರಿನಲ್ಲಿ ಅಮಾಯಕ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದ ನಗರದ ಸುಮಾರು 10ಕ್ಕೂ ಹೆಚ್ಚು ಮಂದಿ ಮೇಲೆ ದಾಳಿ ನಡೆಸಿ 65 ಲಕ್ಷಕ್ಕೂ ಹೆಚ್ಚು ನಗದು, ಕರಾರು ಪತ್ರಗಳು ಸೇರಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ಎಚ್ಚರಿಕೆ ನೀಡಿದ್ದ ಸಿಎಂ: ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆ.29ರಂದು ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸರ್ಕಾರದ ಸೂಚನೆ ಮೀರಿ ಬ್ಯಾಂಕ್ಗಳು ಸಾಲಗಾರ ರೈತರಿಗೆ ನೋಟಿಸ್ ನೀಡಿದರೆ, ಅಂತಹ ಬ್ಯಾಂಕ್ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಅಲ್ಲದೆ, ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಅಧಿಕ ಬಡ್ಡಿಗೆ ಸಾಲ ನೀಡುವುದು, ಸಾಲ ಹಿಂಪಡೆಯಲು ಕಿರುಕುಳ ನೀಡುವಂತಹ ಘಟನೆಗಳನ್ನು ತಪ್ಪಿಸಲು ಸರ್ಕಾರ ಋಣಭಾರ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೂ ಸೂಚಿಸಲಾಗುವುದು ಎಂದು ಹೇಳಿದ್ದರು.
ಸಿಎಂ ಹೇಳಿಕೆ ಬೆನ್ನಲ್ಲೇ ಅ.3ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ಕರ್ನಾಟಕ ಋಣಭಾರ ಕಾಯ್ದೆ-2018ರ ಜಾರಿ ಪೂರ್ವದಲ್ಲಿ ಪೊಲೀಸ್ ಇಲಾಖೆಯಿಂದ 8 ಕ್ರಮಗಳ ಪೈಕಿ 3ನೇ ಅಂಶದಲ್ಲಿ ಬಡ್ಡಿ, ಮೀಟರ್ ಬಡ್ಡಿ ಹೆಸರಿನಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯವೆಸಗುವ ವ್ಯಕ್ತಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಇದೇ ಸುತ್ತೋಲೆಯನ್ನು ಅ.3ರಂದೇ ಮಾರ್ಪಾಡು ಮಾಡಿ, ಸಂಬಂಧಿತ ಇಲಾಖೆ ಅಧಿಕಾರಿಗಳು ಅಥವಾ ನೊಂದವರು ಬಂದು ದೂರು ನೀಡಿದರೆ ಮಾತ್ರ ಕ್ರಮಕೈಗೊಳ್ಳಬೇಕು. ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಬಾರದು ಎಂದು ಆದೇಶಿಸಿದ್ದಾರೆ.
ಎಸ್ಎಂಕೆ ಅವಧಿಯಲ್ಲೇ ಜಾರಿಯಾಗಿದ್ದ ಕಾಯ್ದೆ: ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಲೇವಾದೇವಿ ಕಾಯ್ದೆ ಜಾರಿಗೆ ಬಂದರೂ ಈ ಕುರಿತು ಬೆಂಗಳೂರು ನಗರದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ, 2008-2011ರ ಅವಧಿಯಲ್ಲಿ ಬಡ್ಡಿ, ಮೀಟರ್ ಬಡ್ಡಿ ಹೆಸರಿನಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದ
ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಶಂಕರ ಬಿದರಿ (ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಬಡ್ಡಿ ದಂಧೆ ನಿಗ್ರಹಿಸಲು ಕಾನೂನು ರಚಿಸಲು ಶ್ರಮ ವಹಿಸಿದವರು) ಅವರು, ಲೇವಾದೇವಿ ಕಾಯ್ದೆ ಅಡಿಯಲ್ಲಿ ಅಧಿಕ ಬಡ್ಡಿ, ಮೀಟರ್ ಬಡ್ಡಿ ನಡೆಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು.
ಕರ್ನಾಟಕ ಋಣಮುಕ್ತ ಕಾಯ್ದೆ-2018 ಜಾರಿ ಆಗಲೇಬೇಕು. ಇದರೊಂದಿಗೆ ಮಾಸಿಕ ಒಂದೂವರೆ ರೂಪಾಯಿಗಿಂತಲೂ ಕಡಿಮೆ ಬಡ್ಡಿ ದರದಲ್ಲಿ ರೈತರು ಹಾಗೂ ಇತರೆ ಸಾರ್ವಜನಿಕರಿಗೆ ಸಾಲ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಹಕಾರ ಇಲಾಖೆಯ ಒತ್ತಡದಿಂದ ಈ ಹೊಸ ಆದೇಶ ಹೊರಡಿಸಿರಬಹುದು.
-ಶಂಕರ್ ಮಹಾದೇವ ಬಿದರಿ, ನಿವೃತ್ತ ಪೊಲೀಸ್ ಮಹಾನಿರ್ದೇಶಕರು
ಟಾಪ್ ನ್ಯೂಸ್
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-415x313.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು](https://www.udayavani.com/wp-content/uploads/2024/07/6-2-150x90.jpg)
Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು
![Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ](https://www.udayavani.com/wp-content/uploads/2024/07/5-2-150x90.jpg)
Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
![Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ](https://www.udayavani.com/wp-content/uploads/2024/07/4-2-150x90.jpg)
Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
![3](https://www.udayavani.com/wp-content/uploads/2024/07/3-3-150x90.jpg)
Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್
![ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು](https://www.udayavani.com/wp-content/uploads/2024/07/2-2-150x90.jpg)
ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು
MUST WATCH
ಹೊಸ ಸೇರ್ಪಡೆ
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
![ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು](https://www.udayavani.com/wp-content/uploads/2024/07/12-2-150x90.jpg)
ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.