Namma Metro: ಮೆಟ್ರೋ ದರ ಹೆಚ್ಚಳ: ಮಾಹಿತಿ ಕೇಳಿದ ಕೇಂದ್ರ ಸರ್ಕಾರ


Team Udayavani, Jan 29, 2025, 11:12 AM IST

Namma Metro: ಮೆಟ್ರೋ ದರ ಹೆಚ್ಚಳ: ಮಾಹಿತಿ ಕೇಳಿದ ಕೇಂದ್ರ ಸರ್ಕಾರ

ಬೆಂಗಳೂರು: “ನಮ್ಮ ಮೆಟ್ರೋ’ ಪರಿಷ್ಕೃತ ಪ್ರಯಾಣ ದರ ನಿಗದಿಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ ಸಿಎಲ್‌ )ದಿಂದ ಕೇಂದ್ರ ಸರ್ಕಾರ ಮಾಹಿತಿ ಕೇಳಿದೆ. ಬಿಎಂಆರ್‌ಸಿಎಲ್‌ ಆಡಳಿತ ಮಂಡಳಿ ಸಭೆಯು ಇತ್ತೀಚೆಗೆ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ದರ ನಿಗದಿ ಸಮಿತಿ (ಎಫ್ಎಫ್ಸಿ) ನೀಡಿದ ಶಿಫಾ ರಸಿನ ಪ್ರಸ್ತಾವನೆಗೆ ಅನುಮೋದನೆ ನೀಡಿತ್ತು. ಇದರ ಬೆನ್ನಲ್ಲೇ ಪರಿಷ್ಕರಿಸಲು ಉದ್ದೇಶಿಸಿರುವ ದರ ನಿಗದಿ ಕುರಿತ ಹೆಚ್ಚಿನ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರ ವಿವರ ಕೇಳಿದೆ ಎಂದು ಮೂಲಗಳು ತಿಳಿಸಿವೆ.

ಈಗಿರುವ ದರವನ್ನೇ ಮುಂದುವರಿಸಬೇಕು: ಈಗಾಗಲೇ ಬಸ್‌ ಪ್ರಯಾಣ ದರ ಶೇ. 15ರಷ್ಟು ಹೆಚ್ಚಳ ಮಾಡಲಾಗಿದೆ. ಈಗ ಮೆಟ್ರೋ ಪ್ರಯಾಣ ದರವನ್ನೂ ಏರಿಕೆ ಮಾಡುತ್ತಿರುವುದು ಸರಿ ಅಲ್ಲ. ಇಂತಹ ಕ್ರಮಗಳು ಸಾರ್ವಜನಿಕ ಸಾರಿಗೆಯನ್ನು ಉತ್ತೇಜನಕ್ಕೆ ತದ್ವಿರುದ್ಧವಾಗಿವೆ ಎಂದು ಎಲ್ಲೆಡೆ ಯಿಂದ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪೂರಕವಾಗಿ ಸಂಸದ ಪಿ.ಸಿ. ಮೋಹನ್‌, “ಮೆಟ್ರೋ ಸಂಚಾರಕ್ಕೆ ಜನ ಹೊಂದಿಕೊಂಡಿದ್ದಾರೆ. ಈ ಹಂತದಲ್ಲಿ ಪ್ರಯಾಣ ದರ ಹೆಚ್ಚಳ ಮಾಡಿದರೆ, ಜನ ಮತ್ತೆ ತಮ್ಮ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಮರಳುವ ಸಾಧ್ಯತೆ ಇದೆ. ಇದರಿಂದ ಸಂಚಾರದಟ್ಟಣೆ ಉಂಟಾಗಲಿದೆ. ಹಾಗಾಗಿ, ಈಗಿರುವ ದರವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದರು.

ಮತ್ತೂಂದೆಡೆ ಮೆಟ್ರೋ ನಿಯಮದ ಪ್ರಕಾರ ಪ್ರತಿ ಎರಡು ವರ್ಷಗಳಿಗೊಮ್ಮೆ ದರ ಪರಿಷ್ಕರಣೆ ಆಗಬೇಕು. ಆದರೆ, ಏಳು ವರ್ಷಗಳಿಂದ ಪರಿಷ್ಕರಣೆ ಆಗಿಲ್ಲ. ಈ ಮಧ್ಯೆ ಒಂದೆಡೆ ಜಾಲ ವಿಸ್ತರಣೆ ಮತ್ತೂಂದೆಡೆ ಮೂರು ಬೋಗಿಗಳಿಂದ ಆರು ಬೋಗಿಗಳಾಗಿ ಮಾರ್ಪಾಡು ಮತ್ತಿತರ ಕಾರಣ ಗಳಿಂದ ಕಾರ್ಯಾಚರಣೆ ವೆಚ್ಚ ಏರಿಕೆಯಾಗಿದೆ ಎಂಬ ವಾದ ಅಧಿಕಾರಿಗಳದ್ದಾಗಿದೆ. ಈ ನಡುವೆ ಕೇಂದ್ರವು ಮಾಹಿತಿ ಕೇಳಿದೆ ಎನ್ನಲಾಗಿದೆ.

15 ರೂ. ಹಾಗೂ 80 ರೂ.ಗೆ ಹೆಚ್ಚಿಸಲು ಚಿಂತನೆ: ದರ ನಿಗದಿ ಸಮಿತಿಯು ಸರಾಸರಿ ಶೇ. 45ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆಡಳಿತ ಮಂಡಳಿಯು ಇದನ್ನು ಅಳೆದು -ತೂಗಿ ಪರಿಷ್ಕೃತ ದರ ನಿಗದಿಪಡಿಸಿದೆ. ಎಲ್ಲ ಹಂತದ ದರ ಪರಿಷ್ಕರಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಕನಿಷ್ಠ ದರ 10 ರೂ. ಹಾಗೂ ಗರಿಷ್ಠ ದರ 60 ರೂ. ಇತ್ತು. ಈಗ ಅದನ್ನು ಕ್ರಮವಾಗಿ 15 ರೂ. ಹಾಗೂ 80 ರೂ.ಗೆ ಹೆಚ್ಚಿಸಲು ಗಂಭೀರ ಚಿಂತನೆ ನಡೆದಿದೆ.

ಟಾಪ್ ನ್ಯೂಸ್

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

2

Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

1

Editorial: ಬೇಸಗೆ ಸಮೀಪಿಸುತ್ತಿದೆ ಜಲಮೂಲಗಳತ್ತ ಇರಲಿ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.