ಹಿಂದಿ “ಚೆಕ್’ಗೆ ಮತ್ತೆ ಮೆಟ್ರೋ ಪ್ರಯಾಣ
Team Udayavani, Sep 18, 2017, 12:02 PM IST
ಬೆಂಗಳೂರು: ಸರ್ಕಾರದ ಆದೇಶದ ಬಳಿಕವೂ ನಮ್ಮ ಮೆಟ್ರೋ ಆಡಳಿತದಲ್ಲಿ ಹಿಂದಿ ಬಳಕೆ ಮುಂದುವರಿಸಿದ್ದು, ಮತ್ತೂಮ್ಮೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಬನಸವಾಸಿ ಬಳಗ ಭಾನುವಾರ ನಗರದ ಪ್ರಸ್ಕ್ಲಬ್ನಲ್ಲಿ ಆಯೋಜಿಸಿದ್ದ “ನುಡಿ ಸಮಾನತೆಯತ್ತ ನಮ್ಮ ನಡೆ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಮೊದಲಿಗೆ ಹಿಂದಿ ರಾಷ್ಟ್ರಭಾಷೆ ಎಂದು ಹೇಳಿ ಜನರನ್ನು ಮರಳು ಮಾಡುತ್ತಿದ್ದರು. ಜನರು ಎಚ್ಚೆತ್ತುಕೊಂಡ ಹಿನ್ನೆಲೆಯಲ್ಲಿ ಬಲವಂತವಾಗಿ ಹಿಂದಿ ಹೇರಿ ದಬ್ಟಾಳಿಕೆ ಮಾಡಲಾಗುತ್ತಿದೆ ಎಂದು ದೂರಿದರು.
ನಮ್ಮ ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಹಿಂದಿ ಫಲಕಗಳ ಅಳವಡಿಕೆ ವಿರೋಧಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿಂದಿ ಬಳಕೆ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಅದಾದ ಬಳಿಕವೂ ಆಡಳಿತದಲ್ಲಿ ಹಿಂದಿ ಬಳಸಲಾಗುತ್ತಿದ್ದು, ವಾರದೊಳಗೆ ಮತ್ತೂಮ್ಮೆ ರೈಲಿನಲ್ಲಿ ಪ್ರಯಾಣಿಸಿ ಪರಿಶೀಲಿಸಲಾಗುವುದು ಮತ್ತು ಹಿಂದಿ ಫಲಕಗಳನ್ನು ತೆರವುಗೊಳಿಸಲಾಗುವುದು ಎಂದು ಹೇಳಿದರು.
ಹಿಂದಿ ಹೇರಿಕೆಯ ಕುರಿತು ಅಕ್ಟೋಬರ್ 14ರಂದು ದೆಹಲಿಯಲ್ಲಿ ದುಂಡು ಮೇಜಿನ ಸಭೆ ನಡೆಸಲಿದ್ದು, ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಹೋರಾಟವನ್ನು ದೇಶದಾದ್ಯಂತ ಚಳವಳಿಯನ್ನಾಗಿ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಪ್ರಾದೇಶಿಕ ಭಾಷಾ ಹೋರಾಟಗಾರರ ಸಭೆ ನಡೆಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಮಾತನಾಡಿ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿಯೂ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಬಿಜೆಪಿಯ 17ಸಂಸದರಿದ್ದರೂ ಮಹದಾಯಿ, ಕಾವೇರಿ ಮತ್ತು ಕೃಷ್ಣ ವಿವಾದಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಪಕ್ಷಗಳು ಎಂದೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವುದಿಲ್ಲ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಆದ್ಯತೆ ನೀಡುವುದರಿಂದ ನಾಡು-ನುಡಿ-ಭಾಷೆ ರಕ್ಷಣೆ ದೊರೆಯುತ್ತದೆ. ಹೀಗಾಗಿಯೇ ತಮಿಳುನಾಡಿನ ದಿ.ಮುಖ್ಯಮಂತ್ರಿ ಜಯಲಲಿತಾ 39 ಸ್ಥಾನಗಳನ್ನು ಗೆಲ್ಲಿಸಿದರೆ ಪ್ರಧಾನಿಯಾಗುತ್ತೇನೆ ಎಂದಿದ್ದರು. ಅವರು ಹೇಳಿಂದತೆ ತಮಿಳುನಾಡಿನ ಹಿತಕ್ಕಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು.
ಆದರೆ, ಅಂತಹ ಕೆಲಸ ರಾಜ್ಯದಲ್ಲಿ ಆಗುತ್ತಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕ್ಲಿಯರ್ ಸಂಸ್ಥೆ ಕಾರ್ಯದರ್ಶಿ ಸೆಂಥಿಲ್ನಾಥನ್, ಬಳಗದ ಅಧ್ಯಕ್ಷ ಜಿ.ಆನಂದ್, ವಕೀಲ ಮನುಕುಲಕರ್ಣಿ, ಅಜೀಂ ಪ್ರೇಮ್ಜೀ ವಿವಿಯ ಪ್ರಾಧ್ಯಾಪಕ ಚಂದನ್ಗೌಡ ಸೇರಿ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.