ಮೆಟ್ರೋ ಕಾಮಗಾರಿ: ಸಂಚಾರ ನಿರ್ಬಂಧ


Team Udayavani, Jun 18, 2019, 3:06 AM IST

Metro-(1)

ಬೆಂಗಳೂರು: ನಗರದ “ಹಾಟ್‌ ಸ್ಪಾಟ್‌’ ಎಂ.ಜಿ.ರಸ್ತೆ ಹಾಗೂ ಅದಕ್ಕೆ ಕೂಡುವ ರಸ್ತೆಗಳ ಆಯ್ದ ಮಾರ್ಗಗಳಲ್ಲಿ ಇನ್ನುಮುಂದೆ ಎಂದಿಗಿಂತ ಹೆಚ್ಚು ವಾಹನದಟ್ಟಣೆ ಸಮಸ್ಯೆ ಉಂಟಾಗಲಿದೆ. ಅದೂ ಒಂದಲ್ಲ, ಎರಡಲ್ಲ; ಮುಂದಿನ ಸುಮಾರು ಮೂರು ವರ್ಷ ಈ ಸಮಸ್ಯೆ ಎದುರಿಸಲು ಸಾರ್ವಜನಿಕರು ಮಾನಸಿಕವಾಗಿ ಸಜ್ಜಾಗಬೇಕಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು “ನಮ್ಮ ಮೆಟ್ರೋ’ ಎರಡನೇ ಹಂತದ ಸುರಂಗ ಮಾರ್ಗ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉದ್ದೇಶಿತ ಎಂ.ಜಿ. ರಸ್ತೆಯ ಹಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ, ಪರ್ಯಾಯ ರಸ್ತೆಗಳಲ್ಲಿ ಎಂದಿಗಿಂತ ವಾಹನಗಳ ಸಂಚಾರ ಅಧಿಕವಾಗಲಿದೆ. ಅದರಲ್ಲೂ ಪೀಕ್‌ ಅವರ್‌ನಲ್ಲಿ ಇದರ ಬಿಸಿ ಜನರಿಗೆ ತುಸು ಜೋರಾಗಿಯೇ ತಟ್ಟಲಿದೆ.

ಏಕಾಏಕಿ ನಿರ್ಬಂಧ ವಿಧಿಸಿದ್ದರಿಂದ ಭಾನುವಾರದಿಂದಲೇ ವಾಹನ ಸವಾರರು ಗೊಂದಲಕ್ಕೀಡಾದರು. ಸೋಮವಾರ ಇದು ಹೆಚ್ಚು ಕಿರಿಕಿರಿ ಉಂಟುಮಾಡಿತು. ವಾರಾಂತ್ಯ ರಜೆ ಮುಗಿಸಿಕೊಂಡು ಎಂದಿನಂತೆ ಕೆಲಸಕ್ಕೆ ಹೊರಟವರಿಗೆ ಮೆಟ್ರೋ ಬ್ಯಾರಿಕೇಡ್‌ಗಳು ಬ್ರೇಕ್‌ ಹಾಕಿದವು. ಗಲಿಬಿಲಿಗೊಂಡ ವಾಹನ ಸವಾರರಿಗೆ ಸಂಚಾರ ಪೊಲೀಸರು ನೆರವಾದರು. ಪರ್ಯಾಯ ಮಾರ್ಗಗಳನ್ನು ಬಳಸಲು ಸಲಹೆ ನೀಡಿದರು.

ಎರಡನೇ ಹಂತದಲ್ಲಿ ಡೈರಿ ವೃತ್ತದಿಂದ ನಾಗವಾರದವರೆಗೆ ಸುರಂಗ ಮಾರ್ಗ ನಿರ್ಮಾಣ ಆಗಲಿದ್ದು, ಇದು ಎಂ.ಜಿ. ರಸ್ತೆ ಮೂಲಕ ಹಾದುಹೋಗಲಿದೆ. ಎಂ.ಜಿ.ರಸ್ತೆಯ ನೆಲದಡಿಯ ಮೆಟ್ರೊ ನಿಲ್ದಾಣ ಕಾಮಗಾರಿ ಕಾಮರಾಜ ರಸ್ತೆಯಲ್ಲೇ ನಡೆಯಲಿದೆ. ಹಾಗಾಗಿ ಕಾಮರಾಜ ರಸ್ತೆಯಲ್ಲಿ ಎಂ.ಜಿ.ರಸ್ತೆ ಹಾಗೂ ಕಬ್ಬನ್‌ ರಸ್ತೆ ನಡುವೆ ವಾಹನ ಸಂಚಾರವನ್ನು ಭಾನುವಾರದಿಂದ ನಿರ್ಬಂಧಿಸಲಾಗಿದೆ.

ಬಿಎಂಆರ್‌ಸಿಯು ಈ ಸುರಂಗ ಮಾರ್ಗ ಹಾಗೂ ನೆಲದಡಿಯ ನಿಲ್ದಾಣ ಕಾಮಗಾರಿಗಳನ್ನು 42 ತಿಂಗಳುಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದರು. ಸುರಂಗ ಮಾರ್ಗದ ಮೆಟ್ರೊ ನಿಲ್ದಾಣಗಳನ್ನು ರಸ್ತೆಯಲ್ಲೇ ನಿರ್ಮಿಸಬೇಕಾದ ಕಡೆ ವಾಹನ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯ.

ಕಾಮಗಾರಿ ಪೂರ್ಣಗೊಂಡ ಬಳಿಕ ನಿಗಮದಿಂದಲೇ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದರು. ಕಾಮರಾಜ ರಸ್ತೆಗೆ ಬದಲಿಯಾಗಿ ಬಳಸುವ ಎಂ.ಜಿ.ರಸ್ತೆ ಹಾಗೂ ಆಸುಪಾಸಿನ ರಸ್ತೆಗಳಲ್ಲಿ ವಾಹನ ನಿಲ್ಲಿಸುವುದನ್ನೂ ನಿಷೇಧಿಸಲಾಗಿದೆ. ಈ ಹಿಂದೆ 2006-07ರಲ್ಲಿ ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಎತ್ತರಿಸಿದ ಮಾರ್ಗ ನಿರ್ಮಾಣಕ್ಕಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.