![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 9, 2022, 12:15 PM IST
ಬೆಂಗಳೂರು: ಯುದ್ಧಪೀಡಿತ ಉಕ್ರೇನಿನಿಂದ ಸುರಕ್ಷಿತವಾಗಿ ವಾಪಸ್ ಬಂದಿರುವ ಮಲ್ಲೇಶ್ವರಂ ಕ್ಷೇತ್ರದ ನಾಲ್ವರು ವಿದ್ಯಾರ್ಥಿನಿಯರನ್ನು ಈ ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಭೇಟಿ ಮಾಡಿ, ಭರವಸೆ ತುಂಬಿದರು.
ಮಲ್ಲೇಶ್ವರಂನವರಾದ ಐಶ್ವರ್ಯಾ, ದಿವ್ಯಶ್ರೀ, ಲತಾಶ್ರೀ ಮತ್ತು ನಂದಿತಾ ಅವರು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಆದರೆ ಆ ರಾಷ್ಟ್ರದ ಮೇಲೆ ರಷ್ಯಾ ಯುದ್ಧ ಸಾರಿದ ಮೇಲೆ ಇವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದರು. ಕೊನೆಗೆ, ಕೇಂದ್ರ ಸರಕಾರದ ಆಪರೇಷನ್ ಗಂಗಾ ಕಾರ್ಯಾಚರಣೆಯ ಮೂಲಕ ಇವರನ್ನೆಲ್ಲ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ.
ಬೆಂಗಳೂರನ್ನು ತಲುಪಿದ ಈ ನಾಲ್ವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರನ್ನು ಭೇಟಿಯಾದ ಸಚಿವರು, ಇವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜತೆಗೆ, ಉಕ್ರೇನಿನ ಪರಿಸ್ಥಿತಿಯ ಬಗ್ಗೆ ಕೇಳಿ, ತಿಳಿದುಕೊಂಡರು.
ಇದನ್ನೂ ಓದಿ:‘ರಷ್ಯಾ ಜೊತೆಗಿನ ಹೋರಾಟಕ್ಕೆ ನ್ಯಾಟೋ ಹೆದರುತ್ತಿದೆ’: ತಿರುಗಿಬಿದ್ದ ಅಧ್ಯಕ್ಷ ಝೆಲೆನ್ಸ್ಕಿ
ಈ ಸಂದರ್ಭದಲ್ಲಿ ಮಲ್ಲೇಶ್ವರ ಮಂಡಲದ ಬಿಜೆಪಿ ಅಧ್ಯಕ್ಷೆ ಕಾವೇರಿ ಕೇದಾರನಾಥ್ ಮುಂತಾದವರು ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.