Arrested: ಬಸ್ಸಲ್ಲಿ ದೋಚುತ್ತಿದ್ದವ ಸೆರೆ, 60 ಮೊಬೈಲ್ಗಳ ಜಪ್ತಿ
Team Udayavani, Sep 4, 2024, 9:54 AM IST
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಹ ಪ್ರಯಾಣಿಕರ ಮೊಬೈಲ್ ಕಳವು ಮಾಡಿದ್ದ ಆಂಧ್ರಪ್ರದೇಶ ಮೂಲದ ಪೇಂಟರ್ನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ರವಿತೇಜಾ (32) ಬಂಧಿತ.
ಆರೋಪಿ ಯಿಂದ 10 ಲಕ್ಷ ರೂ. ಮೌಲ್ಯದ 60 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದರು.
ಇತ್ತೀಚೆಗೆ ದೂರುದಾರರು ಮೆಜೆಸ್ಟಿಕ್ನಿಂದ ಅತ್ತಿಬೆಲೆ ಕಡೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸು ತ್ತಿದ್ದರು. ಆಗ ಹೊಸರೋಡ್ ಬಸ್ ನಿಲ್ದಾಣ ಸಮೀಪ ಆರೋಪಿ ದೂರುದಾರರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಮಫ್ತಿಯಲ್ಲಿ ಕಾರ್ಯಾಚರಣೆ: ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುವ ಬಿಎಂಟಿಸಿ ಬಸ್ಗಳಲ್ಲಿ ಮೊಬೈಲ್ ಕಳವು ಪ್ರಕರಣಗಳು ಹೆಚ್ಚಾಗಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಫ್ತಿಯಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸುತ್ತಿದ್ದರು. ಈ ಮಧ್ಯೆ ಆ.26ರಂದು ಕೋನಪ್ಪನ ಅಗ್ರಹಾರ ಬಸ್ ನಿಲ್ದಾಣದಲ್ಲಿದ್ದ ಬಸ್ನಲ್ಲಿ ಆರೋಪಿಯನ್ನು ಅನುಮಾನದ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಬಟ್ಟೆ ತುಂಬುವ ಬ್ಯಾಗ್ನಲ್ಲಿ 60 ಮೊಬೈಲ್ಗಳು ಪತ್ತೆಯಾಗಿವೆ. ಬಳಿಕ ಠಾಣೆಗೆ ಕರೆ ದೊಯ್ದು ವಿಚಾರಣೆ ನಡೆಸಿದಾಗ ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಸ್ನಲ್ಲಿ ಬಂದು, ಮೊಬೈಲ್ ಕಳವು ಮಾಡಿ ಆಂಧ್ರಪ್ರದೇಶಕ್ಕೆ ಪರಾರಿ ಆಗುತ್ತಿದ್ದ ವಿಚಾರ ಬಾಯಿಬಿಟ್ಟಿದ್ದಾನೆ. ಆಂಧ್ರಪ್ರದೇಶದಲ್ಲಿ ಪೇಂಟರ್ ಕೆಲಸ ಮಾಡುವ ಆರೋಪಿ, ಆಗಾಗ್ಗೆ ಬಸ್ನಲ್ಲಿ ಬೆಂಗಳೂರಿಗೆ ಬಂದು ಕೃತ್ಯವೆಸಗುತ್ತಿದ್ದ ಎಂದರು.
ಐಫೋನ್ ಬಿಡಿ ಭಾಗ ಪ್ರತ್ಯೇಕಗೊಳಿಸಿ ಮಾರಾಟ : ಆರೋಪಿಯ ವಿಚಾರಣೆಯಲ್ಲಿ ಸಾಮಾನ್ಯ ಆ್ಯಂಡ್ರಾಯ್ಡ ಮೊಬೈಲ್ಗಳನ್ನು ಫ್ಲಾಷ್ ಮಾಡಿಸಿ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದ. ಆದರೆ, ಐಫೋನ್ಗಳ ಆನ್ ಮಾಡಿದಾಗ ಸಿಕ್ಕಿ ಬೀಳುವ ಸಾಧ್ಯತೆಯಿಂದಾಗಿ, ಅವುಗಳ ಬಿಡಿ ಭಾಗಗಳನ್ನು ಪ್ರತ್ಯೇಕಗೊಳಿಸಿ ಮಾರಾಟ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಆಯುಕ್ತರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.