![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-415x249.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
Team Udayavani, Jul 2, 2024, 10:33 AM IST
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-620x372.jpg)
ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ: ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಎರಡ್ಮೂರು ವರ್ಷದ ಹಿಂದೆ ಕೋವಿಡ್ ಅವಧಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕೆಲವು ಅಧಿಕಾರಿಗಳ ಪ್ರಾಥಮಿಕ ತನಿಖೆ ನಡೆಸಲು ಅನುಮತಿ ಕೇಳಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರಕರಣ ತನಿಖೆ ನಡೆಸುವ ಸಂಬಂಧ ಪಾಲಿಕೆ ಕೂಡ ಲೋಕಾಯುಕ್ತ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ-ಆಪರೇಟಿವ್ ಸೊಸೈಟಿಗಳಿಗೆ ಅಕ್ರಮವಾಗಿ ಪಾಲಿಕೆಯಿಂದ ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎಂಬುವುದು ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಡಿಟ್ನಲ್ಲಿ ತಿಳಿದು ಬಂದಿದೆ. 102 ಕೋಟಿ ರೂ. ಹಣ ವರ್ಗಾವಣೆ ಆಗಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಕೂಡ ಕೆಲವು ಅಧಿಕಾರಿಗಳ ತನಿಖೆಗಾಗಿ ಅನುಮತಿ ಕೇಳಿದ್ದಾರೆ. ಬೇರೆ ಬೇರೆ ಇಲಾಖೆ ಅಧಿಕಾರಿಗಳು ಕೂಡ ಇದ್ದು ಅವರನ್ನು ಹೊರತು ಪಡಿಸಿ ಬಿಬಿಎಂಪಿ ಅಧಿಕಾರಿಗಳ ತನಿಖೆಗೆ ಅನುಮತಿ ನೀಡಲಾಗಿದೆ. ಆದರೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳ ತನಿಖೆ ಅನುಮತಿ ನೀಡಲು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತುಷಾರ್ ಗಿರಿನಾಥ್ ತಿಳಿಸಿದರು.
ಎಲ್ಲ ವಲಯಗಳಲ್ಲಿ ಪರಿಶೀಲನೆ: ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಹಗರಣ ನಡೆದಿದೆ. ಸರ್ಕಾರ ಕೂಡ ಪ್ರಾಥಮಿಕ ತನಿಖಾ ವರದಿ ಕೇಳಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹಣ ಹೋಗಿರುವ ಬಗ್ಗೆ ಪಾಲಿಕೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ 20 ಕೋಟಿ ರೂ. ವರೆಗೂ ಹೋಗಿರುವ ಮಾಹಿತಿ ಇದೆ. ಆ ಹಿನ್ನೆಲೆಯಲ್ಲಿ ಪಾಲಿಕೆ ಎಲ್ಲ ವಲಯಗಳಲ್ಲಿ ಈ ರೀತಿಯಲ್ಲಿ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುವುದರ ಕುರಿತು ಪರಿಶೀಲನೆ ನಡೆಸುವಂತೆ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಳೆದ ಎರಡ್ಮೂರು ವರ್ಷಗಳಲ್ಲಿ ಬಿಬಿಎಂಪಿಯ ಬೇರೆ ಬೇರೆ ವಲಯಗಳಲ್ಲಿ 108 ಕೋಟಿ ರೂ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹೋಗಿದೆ ಎನ್ನಲಾಗುತ್ತಿದೆ. ಆದರೆ ಎಷ್ಟೆಷ್ಟು ಮೊತ್ತದ ಹಣ ಹೋಗಿದೆ ಎಂಬುವುದು ಇನ್ನೂ ತಿಳಿದಿಲ್ಲ ಎಂದರು.
ಡೆಂಘೀ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡೆಂಘಿ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವ ಕೆಲಸ ಕೂಡ ನಡೆದಿದೆ. ಸುಮಾರು 1400 ಸಿಬ್ಬಂದಿ ಪ್ರತಿ ದಿನ 80-85 ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜತೆಗೆ ಎನ್ಎಸ್ಎಸ್ ಮತ್ತು ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳನ್ನು ಕೂಡ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ದಿನ 7-80 ರಕ್ತ ಪರೀಕ್ಷೆ ನಡೆಯುತ್ತಿದ್ದ ಅದಲಲ್ಲಿ 12 ಪಾಸಿಟಿನ್ ಪ್ರಕರಣಗಳು ಕಂಡು ಬರುತ್ತಿವೆ ಎಂದು ತಿಳಿಸಿದರು.
ಅವಧಿ ಮೀರಿ ತೆರಿಗೆ ಕಟ್ಟುವರಿಗೆ ರಿಯಾಯ್ತಿ ಇಲ್ಲ: ಪಾಲಿಕೆ ಆಸ್ತಿಗೆ ತೆರಿಗೆ ಕಟ್ಟುವಂತೆ ಸಾರ್ವಜನಿಕರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಅವಧಿ ಮುಗಿದ ಬಳಿಕ ತೆರಿಗೆ ಕೊಟ್ಟುವರಿಗೆ ರಿಯಾಯ್ತಿ ಇರುವುದಿಲ್ಲ. ಈಗಾಗಲೇ ಶೇ.50ರಷ್ಟು ಮಂದಿ ಮಾತ್ರ ತೆರಿಗೆ ಕಟ್ಟಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ದೊಡ್ಡ ದೊಡ್ಡ ಮೊತ್ತ ಉಳಿಸಿಕೊಂಡಿರುವ ಆಸ್ತಿಗಳ ಸೀಜ್ ಮಾಡುವ ಕೆಲಸ ಈಗಾಗಲೇ ಪಾಲಿಕೆ ಕಂದಾಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![DK-Shivakumar](https://www.udayavani.com/wp-content/uploads/2024/07/DK-Shivakumar-150x90.jpg)
Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ
![Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು](https://www.udayavani.com/wp-content/uploads/2024/07/6-2-150x90.jpg)
Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು
![Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ](https://www.udayavani.com/wp-content/uploads/2024/07/5-2-150x90.jpg)
Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
![Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ](https://www.udayavani.com/wp-content/uploads/2024/07/4-2-150x90.jpg)
Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
![3](https://www.udayavani.com/wp-content/uploads/2024/07/3-3-150x90.jpg)
Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್
MUST WATCH
ಹೊಸ ಸೇರ್ಪಡೆ
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.