ಭಾರತದ ಬಹು ಸಂಸ್ಕೃತಿ ಅಪಾಯದಲ್ಲಿದೆ
Team Udayavani, Mar 10, 2019, 6:22 AM IST
ಬೆಂಗಳೂರು: ಭಾರತದ ಬಹು ಸಂಸ್ಕೃತಿ ಅಪಾಯದಲ್ಲಿದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. ಮಂಥನ ಸಂಸ್ಥೆ ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಆಸ್ಟ್ರೇಲಿಯಾ ಸೇರಿದಂತೆ ಇತರ ದೇಶಗಳು ಭಾರತದ ಬಹು ಸಂಸ್ಕೃತಿ ಯನ್ನು ಅಳವಡಿಸಿಕೊಳ್ಳುತ್ತಿವೆ . ಆದರೆ ಭಾರತದಲ್ಲಿ ಏಕ ಸಂಸ್ಕೃತಿ ವ್ಯವಸ್ಥೆ ಜಾರಿಯಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು. ಯಾರದೋ ಮನೆಯಲ್ಲಿ ದನದ ಮಾಂಸ ಇದೆ ಎಂದು ಅವರನ್ನು ನಡು ಬೀದಿಯಲ್ಲಿ ಹೊಡೆದು ಕೊಲ್ಲುವ ವ್ಯವಸ್ಥೆ ಭಾರತಕ್ಕೆ ಅತ್ಯಂತ ಅಪಾಯಕಾರಿ ಎಂದು ಹೇಳಿದರು.
ದೇಶ ಆರ್ಥಿಕವಾಗಿಯೂ ಸಾಕಷ್ಟು ಹಿನ್ನಡೆ ಅನುಭವಿಸುತ್ತಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಜಿಡಿಪಿ ಕೂಡ ನಕಲಿಯಾಗಿದೆ. ನಿರುದ್ಯೋಗ ಸಮಸ್ಯೆ, ಉತ್ಪಾದನೆ ಕುಂಠಿತವಾಗಿದೆ. ದೇಶ ವಿರೋಧಿ ಎನ್ನುವ ವ್ಯವಸ್ಥೆಯೂ ಕೆಟ್ಟದಾಗಿದ್ದು, ನಕ್ಷಲಿಸಂ,
-ಭಯೋತ್ಪಾದನೆ ದೇಶ ವಿರೋಧಿ ಚಟುವಟಿಕೆಗಳು ಆದರೆ, ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವುದೇ ದೇಶ ವಿರೋಧಿ ಚಟುವಟಿಕೆ ಎಂಬ ಭಾವನೆ ಮೂಡಿಸುತ್ತಿರುವುದು ದುರದೃಷ್ಟಕರ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ್ರೋಹಿ ಎನ್ನುವ ಕಾನೂನಿಗೆ ಸ್ಪಷ್ಟ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.