ಜನವರಿ 1ರಿಂದ ಹೊಸ ತಾಲೂಕುಗಳು ಅಸ್ತಿತ್ವಕ್ಕೆ


Team Udayavani, Dec 5, 2017, 9:07 AM IST

05-15.jpg

ಬೆಂಗಳೂರು: ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮತ್ತು ಸರ್ಕಾರದ ತೀರ್ಮಾನದಂತೆ ರಾಜ್ಯದ 50 ಹೊಸ ತಾಲೂಕುಗಳು ಹೊಸ ವರ್ಷದಿಂದ ಅಸ್ತಿತ್ವಕ್ಕೆ ಬರಲಿವೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಘೋಷಣೆಯಾಗಿರುವ 50 ಹೊಸ ತಾಲೂಕುಗಳು 2018ರ ಜ.1ರಿಂದ ಅಸ್ತಿತ್ವಕ್ಕೆ ಬರಲಿದ್ದು, ಇನ್ನೂ ಏಳೆಂಟು ಪ್ರದೇಶಗಳನ್ನು ಹೊಸ ತಾಲೂಕುಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕೆಂಬ ಬೇಡಿಕೆಗಳು ಬಂದಿವೆ. ಆದರೆ, ಅವುಗಳ ಬಗ್ಗೆ ಇನ್ನೂ ಪರಿಶೀಲನೆ ನಡೆಸಬೇಕಾಗಿದೆ ಎಂದರು.

ಅದೇ ರೀತಿ ಹೊಸ ಕಂದಾಯ ಗ್ರಾಮಗಳು ಸಹ ಜ.1ರಿಂದಲೇ ಅಸ್ತಿತ್ವಕ್ಕೆ ಬರಲಿವೆ. 1 ಸಾವಿರ ಜನ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆಯಿದೆ. ಈ ಪೈಕಿ ಈಗಾ  ಗಲೇ 600 ಜನವಸತಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಉಳಿದ 400 ಪ್ರದೇಶಗಳಿಗೆ ಅಧಿಸೂಚನೆ ಹೊರಡಿಸುವ ಕಾರ್ಯ ಪ್ರಗತಿಯಲ್ಲಿದೆ. ಒಟ್ಟಿನಲ್ಲಿ ಹೊಸ ವರ್ಷದಿಂದ 50 ಹೊಸ ತಾಲೂಕುಗಳ ಜೊತೆಗೆ 1 ಸಾವಿರ ಕಂದಾಯ ಗ್ರಾಮಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಕಾಗೋಡು ತಿಮ್ಮಪ್ಪ ತಿಳಿಸಿದರು. 

ವಾಸಿಸುವವನೇ ಮನೆಯೊಡೆಯ ಕಾಯ್ದೆಗೆ
ರಾಷ್ಟ್ರಪತಿಯವರು ಅಂಕಿತ ಹಾಕಿದ್ದಾರೆ. ಇದರ ವ್ಯಾಪ್ತಿಗೆ ಬರುವ ಫ‌ಲಾನುಭವಿಗಳಿಗೆ ಫೆಬ್ರವರಿಯಿಂದ ಹಕ್ಕುಪತ್ರ ನೀಡಲಾಗುವುದು. ಅಲ್ಲದೇ, ಇನಾಮು ರದ್ದತಿ ಕಾಯ್ದೆ ಇದೆ. ಆದರೆ, 14 ಇನಾಮು ಪ್ರಕಾರಗಳು ಉಳಿದಿವೆ. ಈ ಇನಾಮು ಜಮೀನಿನ ಗೇಣಿದಾರರಿಗೆ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ. ಅಂತಹವರಿಗೆಲ್ಲ ಹಕ್ಕುಪತ್ರ ನೀಡುವ ಸಂಬಂಧ ಮುಂದಿನ ಅಧಿವೇಶನದಲ್ಲಿ ಇನಾಮು ರದ್ದತಿ
ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು. 

ಅರ್ಜಿ ವಜಾ: ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುವವರಿಗೆ ಒಂದಾವರ್ತಿ ಸಾಗುವಳಿ ಚೀಟಿ ನೀಡಲು 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಇರಬೇಕೆಂಬ ನಿಯಮಕ್ಕೆ ತಿದ್ದುಪಡಿ ತರಲಾಗಿತ್ತು. ಆದರೆ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ನ್ಯಾಯಾಲಯ ರಿಟ್‌ ಅರ್ಜಿ ವಜಾಗೊಳಿಸಿದ್ದು, ಗೋಮಾಳ ಹಿಡುವಳಿದಾರರಿಗೆ ಸಾಗುವಳಿ ಚೀಟಿ ನೀಡಲು
ತಕ್ಷಣದಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ನ್ಯಾಯಾಲಯ ರಿಟ್‌ ಅರ್ಜಿ ವಜಾಗೊಳಿಸಿದ್ದರಿಂದ 2.5 ಲಕ್ಷ ಬಗರ್‌ಹುಕುಂ ಸಾಗುವಳಿದಾರರಿಗೆ ನ್ಯಾಯ ಸಿಕ್ಕಂತಾಗಿದೆ. ಅದೇ ರೀತಿ ಬಿ ಖರಾಬ್‌ ಹಾಗೂ
ಗುಂಡುತೋಪು ಜಮೀನುಗಳಲ್ಲಿ ಸಾಗುವಳಿ ಮಾಡು ವವರಿಗೂ ಸಾಗುವಳಿ ಚೀಟಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ನಾನು ಚುನಾವಣೆಗೆ ಸ್ಪರ್ಧಿಸುವುದನ್ನು ಪಕ್ಷ ತೀರ್ಮಾನಿಸುತ್ತದೆ. ಪುತ್ರಿಗೆ ಟಿಕೆಟ್‌ ಕೊಡುವುದು ಪಕ್ಷಕ್ಕೆ ಬಿಟ್ಟಿದ್ದು. ಚುನಾವಣೆಗೆ ಸ್ಪರ್ಧಿಸುವಂತೆ ನಾನು ಹೇಳಲ್ಲ. ಅದು ಅವರಿಗೆ ಬಿಟ್ಟಿದ್ದು. ಏಕೆಂದರೆ, ಚುನಾವಣೆ ಅಷ್ಟೊಂದು ಸುಲಭವಲ್ಲ. ನನ್ನ ಸಾರ್ವಜನಿಕ ಜೀವನದಲ್ಲಿ ಅನೇಕ ಚುನಾವಣೆಗಳಲ್ಲಿ ಸೋಲು-ಗೆಲವು ಎರಡನ್ನೂ ಕಂಡಿದ್ದೇನೆ. ಚುನಾವಣೆ ದಂಧೆಯೂ ಅಲ್ಲ, ಉದ್ಯಮವೂ ಅಲ್ಲ. ಸಮಾಜಸೇವೆ ಮಾಡುವ ಕ್ಷೇತ್ರ ಅಂದುಕೊಂಡವನು ನಾನು.
 ●ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ

ಟಾಪ್ ನ್ಯೂಸ್

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.