ಬಿಡಿಎಗೆ ಬೇಡವಾದ ಪರವಾನಗಿ ಶುಲ್ಕ


Team Udayavani, Feb 8, 2020, 10:28 AM IST

bng-tdy-1

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆದಾಯ ಮೂಲಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಮತ್ತು ಮಳಿಗೆಗಳ ವಾರ್ಷಿಕ ಪರವಾನಗಿ ಶುಲ್ಕವೂ ಸೇರಿದೆ. ಆದರೆ, 2 ವರ್ಷಗಳಿಂದ ನಿಗದಿತ ಗುರಿಯ ಶೇ.20ರಷ್ಟು ಶುಲ್ಕವನ್ನೂ ಬಿಡಿಎ ಸಂಗ್ರಹಿಸಿಲ್ಲ ಎಂಬುದು ವಿಪರ್ಯಾಸ!

ಬಿಡಿಎ ಅಧೀನದಲ್ಲಿ ಇಂದಿರಾನಗರ, ಎಚ್‌ಎಸ್‌ ಆರ್‌ ಲೇಔಟ್‌, ಆರ್‌.ಟಿ.ನಗರ, ಆಸ್ಟಿನ್‌ ಟೌನ್‌, ಕೋರಮಂಗಲ, ವಿಜಯನಗರ, ಸದಾಶಿವನಗರ ಸೇರಿ ವಿವಿಧೆಡೆ ಹಲವು ವಾಣಿಜ್ಯ ಸಂಕೀರ್ಣಗಳು, 797 ಮಳಿಗೆಗಳಿವೆ. 2019ರಲ್ಲಿ ವಾರ್ಷಿಕ ಪರವಾನಗಿ ಶುಲ್ಕ 36.02 ಕೋಟಿ ರೂ. ಸಂಗ್ರಹಿಸುವ ಗುರಿ ಹಾಕಿಕೊಂಡಿದ್ದ ಪ್ರಾಧಿಕಾರದ ಅಧಿಕಾರಿಗಳು ಇದುವರೆಗೆ ಸಂಗ್ರಹಿಸಿರುವುದು 5 ಕೋಟಿ ರೂ. ಮಾತ್ರ!

ಪ್ರಾಧಿಕಾರದಲ್ಲಿನ ಎಸ್ಟೇಟ್‌ ವಿಭಾಗವು ವಾಣಿಜ್ಯ ಸಂಕೀರ್ಣಗಳಲ್ಲಿನ ಅಂಗಡಿ ಮತ್ತು ಮಳಿಗೆಗಳ ಹರಾಜು ಮಾರಾಟದ ಮೇಲುಸ್ತುವಾರಿ ಹಾಗೂ ಪರವಾನಗಿ ಶುಲ್ಕ ವಸೂಲಾತಿ ಮಾಡುತ್ತದೆ. 2018ರಲ್ಲಿ 31.58 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿತ್ತು. ಆದರೆ, 5.61 ಕೋಟಿಸಂಗ್ರಹಿಸಿದೆ. 25.97 ಕೋಟಿ ರೂ. ಶುಲ್ಕ ಬಾಕಿ ಇದೆ. 2019ರಲ್ಲಿ 36.02 ಕೋಟಿ ರೂ. ಗುರಿ ಇದ್ದು, 5.80 ಕೋಟಿ ರೂ. ಸಂಗ್ರಹಿಸಿದ್ದು, 30.21 ಕೋಟಿ ರೂ. ಬಾಕಿ ಉಳಿದಿದೆ.

ಬಿಡಿಎ ವಾಣಿಜ್ಯ ಮಳಿಗೆಗಳನ್ನು ಹಂಚಿಕೆ ಮಾಡುವಾಗ ಯಾವುದೇ ಕಾರಣಕ್ಕೂ ಉಪಗುತ್ತಿಗೆ ನೀಡಬಾರದು, ಪರಭಾರೆ ಮಾಡಬಾರದು, ಬೇರೆಯವರಿಗೆ ಬಾಡಿಗೆ ನೀಡಬಾರದು ಎಂಬ ಷರತ್ತು ಗಳಿವೆ. ಒಂದು ವೇಳೆ ಷರತ್ತು ಉಲ್ಲಂ ಸಿದರೆ ಗುತ್ತಿಗೆ ರದ್ದು ಮಾಡಲು ಅವಕಾಶ ಇರುತ್ತದೆ. ಪ್ರಸ್ತುತ ಮೂಲ ಹಂಚಿಕೆದಾರರು ಮಳಿಗೆಗಳನ್ನು ಉಪಯೋಗಿಸದೇ ಬೇರೆಯವರಿಗೆ ಬಾಡಿಗೆ ನೀಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿದ್ದು, ಪರವಾನಗಿ ಶುಲ್ಕ ವಸೂಲಾತಿ ಆಗದಿರಲು ಇದು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಅಧಿಕಾರಿಗಳ ಕೊರತೆ?: ಬಿಬಿಎಂಪಿಯಲ್ಲಿ ವಾಣಿಜ್ಯ ಸಂಕೀರ್ಣಗಳ ಬಾಡಿಗೆ ವಸೂಲಾತಿಗೆ ಕಂದಾಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗವಿದ್ದು, ಗುರಿಯಷ್ಟು ಬಾಡಿಗೆ ವಸೂಲಿ ಆಗುತ್ತಿದೆ. ಆದರೆ, ಬಿಡಿಎನಲ್ಲಿ ಎಸ್ಟೇಟ್‌ ವಿಭಾಗವು ವಾಣಿಜ್ಯ ಸಂಕೀರ್ಣಗಳಲ್ಲಿ ಬಾಡಿಗೆ ವಸೂಲಿ ಮಾತ್ರವಲ್ಲದೇ ಪ್ರಾಧಿಕಾರದ ಜಮೀನು ಒತ್ತುವರಿ ಗುರುತಿಸುವುದು, ಒತ್ತುವರಿ ತೆರವುಗೊಳಿಸಿ ಪ್ರಾಧಿಕಾರದ ವಶಕ್ಕೆ ಪಡೆದು ಬೇಲಿ ಹಾಕುವುದು, ಸುಪರ್ದಿಗೆ ತೆಗೆದುಕೊಂಡ ಜಮೀನಿನಲ್ಲಿ ಬಡಾವಣೆ ರಚಿಸುವಲ್ಲಿ ಪ್ರಮುಖಪಾತ್ರ ವಹಿಸಲಿದೆ. ಹೀಗೆ ವಿವಿಧ ಕಾರ್ಯಗಳಿದ್ದು, ವಸೂಲಾತಿ ಕಡಿಮೆಯಾಗಿದೆ ಎಂಬ ಆರೋಪಗಳಿವೆ.”ವಾಣಿಜ್ಯ ಸಂಕೀರ್ಣ ಮತ್ತು ಮಳಿಗೆಗಳಿಂದ ಗುರಿಯಷ್ಟು ಪರವಾನಗಿ ಶುಲ್ಕ ಸಂಗ್ರಹವಾಗಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶುಲ್ಕ ನೀಡದವರಿಗೆ ಬಿಡಿಎಯಿಂದ ನೋಟಿಸ್‌ ನೀಡಲಾಗಿದೆ. ಶೀಘ್ರ ಪಾವತಿ ಮಾಡದಿದ್ದರೆ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ವಾರ್ಷಿಕ ಪರವಾನಗಿ ಶುಲ್ಕ ಪಾವತಿಸದವರ ಪಟ್ಟಿ ಸಿದ್ಧಪಡಿಸಿ ಅಂತವರಿಗೆ ನೋಟಿಸ್‌ ನೀಡಲಾಗಿದೆ. ಶುಲ್ಕ ಪಾವತಿಸಲು ಸಮಯಾವಕಾಶ ನೀಡಲಾಗಿದ್ದು, ಅಷ್ಟರಲ್ಲಿ ಕಟ್ಟದಿದ್ದರೆ ಮಳಿಗೆಯಿಂದ ತೆರವುಗೊಳಿಸಲಾಗುವುದು.  ಡಾ.ಜಿ.ಸಿ.ಪ್ರಕಾಶ್‌, ಬಿಡಿಎ ಆಯುಕ್ತ

 

-ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.