ಎಚ್‌ಡಿಕೆ ಬಳಿ ಕ್ಷಮೆ ಕೇಳಲು ಪ್ರಜ್ವಲ್‌ಗೆ ಸೂಚನೆ


Team Udayavani, Jul 10, 2017, 3:35 AM IST

HD-Devegowda–800.jpg

ಬೆಂಗಳೂರು: ಜೆಡಿಎಸ್‌ನಲ್ಲಿ ಸೂಟ್‌ಕೇಸ್‌ ಸಂಸ್ಕೃತಿ ಕುರಿತು ನೀಡಿದ್ದ ಹೇಳಿಕೆಗೆ ಪ್ರಜ್ವಲ್‌ ರೇವಣ್ಣ ಅವರು ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಬಳಿ ಕ್ಷಮೆ ಯಾಚಿಸುವುದರೊಂದಿಗೆ ವಿವಾದಕ್ಕೆ ತೆರೆ ಎಳೆಯಲು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮುಂದಾಗಿದ್ದಾರೆ.

ಈಗಾಗಲೇ ಪ್ರಜ್ವಲ್‌ ರೇವಣ್ಣನನ್ನು ಕರೆಸಿ ಮಾತನಾಡಿದ್ದೇನೆ. ಆತ ತನ್ನ ತಪ್ಪು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾನೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳು ಎಂದು ಆತನಿಗೆ ಸೂಚಿಸಿದ್ದೇನೆ. ಕ್ಷಮೆ ಯಾಚಿಸಿದ ಬಳಿಕ ಪ್ರಕರಣಕ್ಕೆ ತೆರೆ ಎಳೆಯಲಾಗುವುದು ಎಂದು ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಹೇಳಿಕೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿಲ್ಲ. ಆತನನ್ನು ಕರೆಸಿ ಸುಮಾರು ಎರಡು ಗಂಟೆ ಮಾತನಾಡಿದ್ದೇನೆ. ನಾನು ತಪ್ಪು ಒಪ್ಪಿಕೊಳ್ಳುತ್ತೇನೆ. ನನಗೆ ನೋಟಿಸ್‌ ಕೊಡಿ. ಉತ್ತರ ಕೊಡುವ ಮೂಲಕ ಕ್ಷಮೆ ಯಾಚಿಸುತ್ತೇನೆ ಎಂದು ಆತ ಹೇಳಿಕೊಂಡಿದ್ದಾನೆ. ಆದರೆ, ನಾನು ಪತ್ರ ಬರೆಯುತ್ತಿದ್ದು, ಅದನ್ನು ನೋಟಿಸ್‌ ಎಂದು ತಿಳಿದು ಉತ್ತರಿಸು. ಅದಕ್ಕಿಂತ ಮುಖ್ಯವಾಗಿ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಳಿ ತೆರಳಿ ಕ್ಷಮೆ ಕೇಳುವಂತೆ ಸೂಚಿಸಿದ್ದೇನೆ. ಅಲ್ಲಿಗೆ ವಿವಾದ ಮುಗಿಯಲಿದೆ. ಈ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯುವ ಸ್ನೇಹಿತರನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೆ. ಆದರೆ, ನಾವ್ಯಾರೂ ಆ ಬಗ್ಗೆ ಚಕಾರ ಎತ್ತಿರಲಿಲ್ಲ. ಆದರೆ, ನಿನ್ನೊಂದಿಗೆ ಇದ್ದ ಸ್ನೇಹಿತರೇ ಘಟನೆ ನಡೆದ ಬಳಿಕ ನಿನ್ನ ಬಗ್ಗೆ ಏನು ಮಾತಾಡುತ್ತಿದ್ದಾರೆ? ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ಗಳಲ್ಲಿ ನಿನ್ನ ಕುರಿತು ಏನೆಲ್ಲಾ ಬರೆಯುತ್ತಿದ್ದಾರೆ ಎಂದು ಗೊತ್ತಿದೆಯೇ? ಇದರಿಂದ ನಿನ್ನ ಯುವ ನಾಯಕತ್ವಕ್ಕೆ ಪೆಟ್ಟು ಬಿದ್ದಿದೆ ಎಂದು ಬುದ್ದಿಮಾತು ಹೇಳಿದಾಗ ಪ್ರಜ್ವಲ್‌ ರೇವಣ್ಣನಿಗೆ ತನ್ನ ತಪ್ಪು ಮನವರಿಕೆಯಾಗಿ ಕ್ಷಮೆ ಕೇಳುವುದಾಗಿ ಹೇಳಿದ್ದಾನೆ. ಹೀಗಿರುವಾಗ ವಿವಾದ ಮುಂದುವರಿಸಿ ಗೊಂದಲ ಹೆಚ್ಚಿಸುವುದು ಸರಿಯಲ್ಲ ಎಂದರು.

ಕುಮಾರಸ್ವಾಮಿಯದ್ದೇ ಚುನಾವಣೆ ನೇತೃತ್ವ: ಪ್ರಜ್ವಲ್‌ ರೇವಣ್ಣ ಹೇಳಿಕೆಯಿಂದ ಬೇಸರಗೊಂಡು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದಲೇ ಹಿಂದೆ ಸರಿಯುತ್ತೇನೆ ಎಂದು ಕುಮಾರಸ್ವಾಮಿ ಹೇಳಿರಬಹುದು. ಆದರೆ, ಇದು ಬೇಸರದ ಹೇಳಿಕೆಯೇ ಹೊರತು ಖಡಾಖಂಡಿತ ಹೇಳಿಕೆ ಅಲ್ಲ. ಮುಂದಿನ ವಿಧಾನಸಭೆ ಚುನಾವಣೆಯನ್ನು ಕುಮಾರಸ್ವಾಮಿ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದೊಂದಿಗೇ ಪಕ್ಷ ಎದುರಿಸಲಿದೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಈಗಿನ ರಾಜಕೀಯ ವ್ಯವಸ್ಥೆಯೇ ಕೆಟ್ಟುಹೋಗಿದೆ. ಸೂಟ್‌ಕೇಸ್‌ ಸಂಸ್ಕೃತಿ ಕಾಂಗ್ರೆಸ್‌, ಬಿಜೆಪಿಯಂತಹ ಪಕ್ಷಗಳಲ್ಲಿ ಇರಬಹುದು. ಬಿಜೆಪಿಯ ಅನಂತಕುಮಾರ್‌ ಮತ್ತು ಯಡಿಯೂರಪ್ಪ ಅವರು ಸೂಟ್‌ಕೇಸ್‌ ಬಗ್ಗೆ ಮಾತನಾಡಿದ್ದನ್ನು ಕೇಳಿಲ್ಲವೇ? ಅಷ್ಟಕ್ಕೂ ನಮಗೆ ಸೂಟ್‌ಕೇಸ್‌ ಕೊಡುವವರು ಯಾರು? ಕೊಡುವವರಿದ್ದರೆ ತಾನೆ ತೆಗೆದುಕೊಳ್ಳುವ ಮಾತು.
– ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.