ಕಾಂಗ್ರೆಸ್‌ನಿಂದ ಸಿಲಿಕಾನ್‌ ಸಿಟಿಗೆ ಕುಖ್ಯಾತಿ


Team Udayavani, Apr 22, 2018, 12:21 PM IST

congressinnda.jpg

ಬೆಂಗಳೂರು/ಮಹದೇವಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಬದಲಿಸಿ, ಬಿಜೆಪಿ ಬೆಂಬಲಿಸುವಂತೆ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಮನವಿ ಮಾಡಿದರು.

ಮಾರತ್ತಹಳ್ಳಿಯಲ್ಲಿ ಶನಿವಾರ ನಡೆದ ಬಿಜೆಪಿ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆರೆಗಳ ನಗರಿ, ಉದ್ಯಾನ ನಗರಿಯಾಗಿದ್ದ ಸಿಲಿಕಾನ್‌ ಸಿಟಿ ಬೆಂಗಳೂರು, ಕಳೆದ ಐದು ವರ್ಷಗಳಿಂದ  ಕ್ರೆ„ಮ್‌ ನಗರಿ, ಬೆಂಕಿ ಕೆರೆಗಳ ನಗರಿ ಎಂಬ ಕುಖ್ಯಾತಿಗೆ ಗುರಿಯಾಗಿದೆ.

ಸಿದ್ದರಾಮಯ್ಯ ಸರ್ಕಾರದ ದುರಾಡಳಿತದಿಂದ ರಸ್ತೆಗಳು ಗುಂಡಿಮಯವಾಗಿದ್ದು, 12 ಮಂದಿ ಗುಂಡಿಗೆ ಬಿದ್ದು ಬಲಿಯಾಗಿರುವುದು ದುರದೃಷ್ಟಕರ. ಹಾಗಾಗಿ ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಬದಲಿಸಿ ಬಿಜೆಪಿಯನ್ನು ಬೆಂಬಲಿಸಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಬೇಕು ಎಂದು ಕರೆ ನೀಡಿದರು.

ಲೋಕಸಭೆ ಚುನಾವಣೆ ಬಳಿಕ ದೇಶಾದ್ಯಂತ ಬಿಜೆಪಿ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಇದರಿಂದ ದಿಕ್ಕು ತೋಚದಂತಾಗಿರುವ ಕಾಂಗ್ರೆಸಿಗರು ಮತಯಂತ್ರ ದೋಷಪೂರಿತವಾಗಿದೆ ಎಂದು ದೂರಿದ್ದರು. ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಚಮತ್ಕಾರದ ಗೆಲುವಿಗೆ ನಿಷ್ಠಾವಂತ ಕಾರ್ಯಕರ್ತರು ಕಾರಣ.

ಪೇಜ್‌ ಪ್ರಮುಖರು ತಮ್ಮ ಸೀಮಿತ 50 ಮತದಾರರಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ವ್ಯತ್ಯಾಸಗಳ ಅರಿವು ಮೂಡಿಸಿ, ಕರ್ನಾಟಕದಲ್ಲೂ ಪಕ್ಷ ಬಹುಮತ ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ತಿಳಿಸಿದರು.

ನಂತರ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ಜನರಿಂದ ಸಂಗ್ರಹಿಸಿರುವ ಅಭಿಪ್ರಾಯಗಳೇ ಬಿಜೆಪಿಯ ಪ್ರಣಾಳಿಕೆಯಾಗಿದ್ದು, ಮಹದೇವಪುರ ಕ್ಷೇತ್ರಕ್ಕೆ ಬಾಕಿಯಿರುವ ಕೆಲಸಗಳು, ರಾಜ್ಯಕ್ಕೆ ಅಗತ್ಯವಿರುವ ಕೆಲಸಗಳಿಗೆ ಸಂಬಂಧಿಸಿದಂತೆ ಜನರಿಂದ ಸಂಗ್ರಹಿಸಿದ ಅಭಿಪ್ರಾಯಗಳೊಂದಿಗೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಮಹದೇವಪುರ ಕ್ಷೇತ್ರಕ್ಕೆ 1300 ಕೋಟಿ ರೂ. ಅನುದಾನ ನೀಡಿದೆ.

ಆದರೆ, ಕಾಂಗ್ರೆಸ್‌ ಸರ್ಕಾರ 730 ಕೋಟಿ ರೂ. ನೀಡುವ ಮೂಲಕ ಜನರ ನಿರೀಕ್ಷೆ ಹುಸಿಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಬಿಡುಗಡೆ ಮಾಡಿದ ಅನುದಾನ ಹಾಗೂ ಕೈಗೊಂಡ ಕಾಮಗಾರಿಗಳ ವಿವರವುಳ್ಳ ಕೈಪಿಡಿ ಮುದ್ರಿಸಿದ್ದು, ಜನರಿಗೆ ನೀಡಲಾಗುವುದು. ಪಾರದರ್ಶಕ ಆಡಳಿತ ನಮ್ಮ ಕನಸು. ಕ್ಷೇತ್ರದ ಮತದಾರರು ಜನ ಎರಡು ಬಾರಿ ಆಯ್ಕೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜಾರೆಡ್ಡಿ, ಪಾಲಿಕೆ ಸದಸ್ಯರಾದ ಎಸ್‌.ಮುನಿಸ್ವಾಮಿ, ಪುಷ್ಪಾ ಮಂಜುನಾಥ್‌, ಆಶಾ ಸುರೇಶ್‌, ಶ್ವೇತಾ ವಿಜಯ್‌ ಕುಮಾರ್‌, ಮುಖಂಡರಾದ ಜಯಚಂದ್ರ ರೆಡ್ಡಿ, ಮಹೇಂದ್ರ ಮೋದಿ, ಚನ್ನಸಂದ್ರ ಚಂದ್ರಶೇಖರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.