ಇಡೀ ಕುಟುಂಬಕ್ಕೆ ಈಗ ಒಂದೇ ಕ್ಯುಆರ್‌ ಕೋಡ್‌!


Team Udayavani, Dec 7, 2022, 4:25 PM IST

ಇಡೀ ಕುಟುಂಬಕ್ಕೆ ಈಗ ಒಂದೇ ಕ್ಯುಆರ್‌ ಕೋಡ್‌!

ಬೆಂಗಳೂರು: “ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಲು ಇನ್ಮುಂದೆ ಒಂದು ಕುಟುಂಬಕ್ಕೆ ಒಂದೇ ಕ್ಯುಆರ್‌ ಕೋಡ್‌ ಸಾಕು! ಹೌದು, ಕರ್ನಾಟ ಕ ರಾಜ್ಯೋತ್ಸವದಂದು ಪರಿಚಯಿಸಿದ್ದ ಕ್ಯುಆರ್‌ ಕೋಡ್‌ ಆಧಾರಿತ ಪ್ರಯಾಣ ಸೌಲಭ್ಯಕ್ಕೆ ಒಂದೇ ತಿಂಗಳಲ್ಲಿ ನಿರೀಕ್ಷೆ ಮೀರಿ ಸ್ಪಂದನೆ ದೊರೆತ ಬೆನ್ನಲ್ಲೇ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ವು ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಒಂದೇ ಕ್ಯುಆರ್‌ ಕೋಡ್‌ನ‌ಲ್ಲಿ ನಾಲ್ಕೈದು ಜನ ಗುಂಪಾಗಿ ಪ್ರಯಾಣಿಸುವ ವ್ಯವಸ್ಥೆ ಜಾರಿಗೊಳಿಸಲು ಉದ್ದೇಶಿಸಿದೆ.

ಈಗಾಗಲೇ ಈ ನಿಟ್ಟಿನಲ್ಲಿ ಪ್ರಯೋಗಗಳು ನಡೆದಿದ್ದು, ಹೊಸ ವರ್ಷಕ್ಕೆ ಅಂದರೆ ಜನವರಿ ಮಧ್ಯೆ ಅವಧಿಯಲ್ಲಿ ಮೆಟ್ರೋ ಪ್ರಯಾ ಣಿಕರು ಒಂದೇ ಕ್ಯುಆರ್‌ ಕೋಡ್‌ ತೋರಿಸಿ ಗರಿಷ್ಠ 6 ಜನ ಒಟ್ಟಿಗೇ ಸ್ವಯಂಚಾಲಿತ ಶುಲ್ಕ ಸಂಗ್ರಹ (ಎಎಫ್ಸಿ) ದ್ವಾರಗಳನ್ನು ಪ್ರವೇಶಿಸಲಿ ದ್ದಾರೆ. ಇದರಿಂದ ಕುಟುಂ ಬದ ಸದಸ್ಯರೆಲ್ಲರೂ ಒಂದೇ ಕ್ಯುಆರ್‌ ಕೋಡ್‌ನ‌ಲ್ಲಿ ತೆರಳಬಹುದು. ಮತ್ತಷ್ಟು ಸಮಯ ಉಳಿತಾಯ ಕೂಡ ಆಗಲಿದೆ. ಪ್ರ

ಸ್ತುತ ವ್ಯವಸ್ಥೆಯಲ್ಲಿ ಮೊಬೈಲ್‌ನಲ್ಲಿ ಒಂದು ಕ್ಯುಆರ್‌ ಕೋಡ್‌ನ‌ಲ್ಲಿ ಒಬ್ಬರು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಪ್ರಯಾಣಿಕರು ಬಿಎಂಆರ್‌ಸಿಎಲ್‌ನ ವ್ಯಾಟ್ಸ್‌ಆ್ಯಪ್‌ ಸಂಖ್ಯೆ 8105556677ಕ್ಕೆ “ಹಾಯ್‌’ ಎಂಬ ಸಂದೇಶ ಕಳುಹಿಸುವ ಮೂಲಕ ಕ್ಯುಆರ್‌ ಟಿಕೆಟ್‌ ಪಡೆದುಕೊಳ್ಳಬಹುದು ಅಥವಾ ಆ್ಯಂಡ್ರಾಯ್ಡ ಫೋನ್‌ನಲ್ಲಿ “ನಮ್ಮ ಮೆಟ್ರೋ’ ಆ್ಯಪ್‌ ಡೌನ್‌ಲೋಡ್‌ ಮಾಡಿ ಅಲ್ಲಿಂ ದಲೂ ಕ್ಯುಆರ್‌ ಆಧಾರಿತ ಟಿಕೆಟ್‌ ಸ್ವೀಕರಿಸಬಹುದಾಗಿದೆ. ಹೊಸ ವ್ಯವಸ್ಥೆಯಲ್ಲಿ ಇದೇ ಪ್ಲಾಟ್‌ಫಾರಂನಲ್ಲಿ ಒಟ್ಟಿಗೆ ಗರಿಷ್ಠ ಆರು ಜನರಿಗೆ ಟಿಕೆಟ್‌ ಪಡೆಯುವ ಸೌಲಭ್ಯ ಇರಲಿದೆ.

ಸಾಮಾನ್ಯವಾಗಿ ಕುಟುಂಬದ ಸದಸ್ಯರೆಲ್ಲರೂ ಮೆಟ್ರೋದಲ್ಲಿ ಪ್ರಯಾ ಣಿಸುವಾಗ ಈಗಿರುವ ಕ್ಯುಆರ್‌ ಟಿಕೆಟ್‌ ನಿರೀಕ್ಷಿತ ಮಟ್ಟದಲ್ಲಿ ಅನುಕೂಲ ಆಗುವುದಿಲ್ಲ. ಮಕ್ಕಳು, ಮಹಿಳೆಯರು ಅಥವಾ ಹಿರಿಯ ನಾಗರಿಕರು ಪ್ರತ್ಯೇಕವಾಗಿ ಟಿಕೆಟ್‌ ಪಡೆಯಬೇಕಿದೆ. ಆಗ ಅಂತಹ ಸಂದರ್ಭದಲ್ಲಿ ಟೋಕನ್‌ ಮೊರೆಹೋಗಬೇಕಾಗಿದೆ ಅಥವಾ ವಿವಿಧ ಮಾದರಿ ಅಂದರೆ ಒಬ್ಬರು ಸ್ಮಾರ್ಟ್‌ಕಾರ್ಡ್‌ ಮತ್ತೂಬ್ಬರು ಕ್ಯುಆರ್‌ ಇನ್ನೊಬ್ಬರು ಸರದಿ ಯಲ್ಲಿ ನಿಂತು ಟೋಕನ್‌ ಪಡೆಯಬೇಕಾಗುತ್ತದೆ. ಇದು ತುಸು ಕಿರಿಕಿರಿ ಅನಿಸಬಹುದು. ಇವರೆಲ್ಲರಿಗೂ ಒಂದೇ ಕ್ಯುಆರ್‌ನಲ್ಲಿ ಪ್ರಯಾಣಿಸು ವಂತಾದರೆ ಹೆಚ್ಚು ಅನುಕೂಲ ಎಂಬ ಕಾರಣಕ್ಕೆ ಕ್ಯುಆರ್‌ನಲ್ಲಿ ಗುಂಪು ಟಿಕೆಟ್‌ ವ್ಯವಸ್ಥೆ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಬಿಎಂಆರ್‌ ಸಿಎಲ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೆಚ್ಚಲಿದೆ ಬಳಕೆದಾರರ ಸಂಖ್ಯೆ?: “ಗುಂಪು ಟಿಕೆಟ್‌ ವ್ಯವಸ್ಥೆ ಪರಿಚಯಿಸುವ ನಿಟ್ಟಿನಲ್ಲಿ ಪ್ರಯೋಗಗಳು ನಡೆದಿವೆ. ಈಗಿರುವ ಎಎಫ್ಸಿಯಲ್ಲೇ ಒಂದು ಕ್ಯುಆರ್‌ನಲ್ಲಿ ಒಬ್ಬರಿಗಿಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸಲು ಅವಕಾಶ ಇದೆ. ಜನವರಿ ಮಧ್ಯೆ ಅವಧಿಯಲ್ಲಿ ಜಾರಿಗೊಳಿಸುವ ಚಿಂತನೆ ಇದೆ. ಪ್ರಸ್ತುತ ನಿತ್ಯ ಸುಮಾರು 10 ಸಾವಿರ ಜನ ಕ್ಯುಆರ್‌ ಬಳಕೆ ಮಾಡುತ್ತಿದ್ದು, ಅಂದಾಜು ಮಾಸಿಕ 2ರಿಂದ 3 ಲಕ್ಷ ರೂ. ಆದಾಯ ಈ ಮೂಲದಿಂದ ಬರುತ್ತಿದೆ. ಗುಂಪು ಟಿಕೆಟಿಂಗ್‌ ವ್ಯವಸ್ಥೆಯಿಂದ ಬಳಕೆದಾರರ ಸಂಖ್ಯೆ ಮತ್ತಷ್ಟು ಏರಿಕೆ ಆಗಲಿದೆ’ ಎಂದು ಬಿಎಂಆರ್‌ಸಿಎಲ್‌ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಎ.ಎಸ್‌. ಶಂಕರ್‌ “ಉದಯವಾಣಿ’ಗೆ ತಿಳಿಸಿದರು. ನವೆಂಬರ್‌ ಅಂತ್ಯಕ್ಕೆ 2.11 ಲಕ್ಷ ಜನ ಕ್ಯುಆರ್‌ ಆಧಾರಿತ ಟಿಕೆಟ್‌ ಪಡೆದು ಪ್ರಯಾಣಿಸಿದ್ದಾರೆ. ಇದರಲ್ಲಿ ಶೇ. 58.5ರಷ್ಟು ಜನ ವ್ಯಾಟ್ಸ್‌ಆ್ಯಪ್‌ ಮೂಲಕ ಟಿಕೆಟ್‌ ಹೊಂದಿದ್ದರೆ, ಶೇ. 41.4ರಷ್ಟು ಜನ ಆ್ಯಪ್‌ನಲ್ಲಿ ಕ್ಯುಆರ್‌ ಟಿಕೆಟ್‌ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಇದಲ್ಲದೆ, ಸುಮಾರು 1.4 ಲಕ್ಷ ಪ್ರಯಾಣಿಕರು ಸ್ಮಾರ್ಟ್‌ಕಾರ್ಡ್‌ ರಿಚಾರ್ಜ್‌ ಉದ್ದೇಶಕ್ಕೆ ಕ್ಯುಆರ್‌ ಕೋಡ್‌ ಸೌಲಭ್ಯ ಬಳಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.