BBMP: ಬಿಬಿಎಂಪಿ ಬಾಕಿ ತೆರಿಗೆದಾರರಿಗೆ ಒಂದು ಸಲ ಅವಕಾಶ


Team Udayavani, Feb 24, 2024, 11:04 AM IST

BBMP: ಬಿಬಿಎಂಪಿ ಬಾಕಿ ತೆರಿಗೆದಾರರಿಗೆ ಒಂದು ಸಲ ಅವಕಾಶ

ಬೆಂಗಳೂರು: ಸರ್ಕಾರ ಸೂಚಿಸಿರುವಂತೆ “ಬೇ-ಬಾಕಿ ಆಸ್ತಿ ತೆರಿಗೆಯನ್ನು ಕೂಡಲೇ ವಸೂಲಾತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಪಾಲಿಕೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೇ-ಬಾಕಿ ಉಳಿಸಿಕೊಂಡವರ ಸ್ವತ್ತುಗಳಿಗೆ ಪಾಲಿಕೆ ಅಧಿಕಾರಿಗಳು ಬೀಗ ಮುದ್ರೆ ಹಾಕಿದ ನಂತರ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯನ್ನು ಇಟ್ಟುಕೊಂಡು ಪಾಲಿಕೆ ಬಾಕಿ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ “ಒಂದು ಬಾರಿ ತೀರುವಳಿ’ (ಒಟಿಎಸ್‌) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿ ಕೆಲವು ಆದೇಶಗಳನ್ನು ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಸರ್ಕಾರ ಮಾಡಿರುವ ಆದೇಶದಲ್ಲಿ ಏನಿದೆ:  ಬಿಬಿಎಂಪಿ ಅಧಿನಿಯಮ 2020 ಕಲಂ 144 ಉಪ ಕಲಂ 15ಕ ಖಂಡ (ಬಿ) ಅಡಿಯಲ್ಲಿ ದಂಡವು ವಂಚಿಸಿದ ತೆರಿಗೆ ಮೊತ್ತಕ್ಕೆ ಸಮಾನಾಗಿರತಕ್ಕದ್ದು. ಎಸ್‌ಎಸ್‌ 2016 ಅಧಿಸೂಚನೆಯ ವಸತಿ ವರ್ಗ -3ರ ಅಡಿಯಲ್ಲಿ ಸ್ವಂತ ಉಪಯೋಗದ 1000 ಚದರ ಅಡಿಗಿಂತ ಹೆಚ್ಚಿಲ್ಲದ ಹಾಗೂ ಕೇವಲ ನೆಲಮಹಡಿಯನ್ನು ಹೊಂದಿರುವ ಟೈಲ್ಡ್‌ ಅಥವಾ ಶೀಟ್‌ ರೂಫ್ (ಆರ್‌ಸಿಸಿ ಅಲ್ಲದ) ವಸತಿ ಆಸ್ತಿಗಳಿಗೆ (ವಂಚಿಸಿದ ತೆರಿಗೆ ಮೇಲೆ) ಶೇ.25ರಷ್ಟು ದಂಡವಿಧಿಸಲಾಗಿದೆ.

ಗುಡಿಸಲುಗಳು, ಬಡವರಿಗಾಗಿ ಸರ್ಕಾರಿ ವಸತಿ ಸೌಲಭ್ಯ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಥವಾ ಬಿಬಿಎಂಪಿಯಿಂದ ಕೊಳಗೇರಿ ಎಂದು ಘೋಷಿಸಿದ ವಸತಿ ಆಸ್ತಿಗಳಲ್ಲಿ ಸ್ವಂತ ಉಪಯೋಗದ 300 ಚದರ ಅಡಿಗಳಿಗಿಂತ ಕಡಿಮೆ ವಿಸ್ತೀರ್ಣದ ಮನೆಗಳಿಗೆ ಯಾವುದೇ ದಂಡ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಡ್ಡಿ ಮೊತ್ತದಲ್ಲಿ ವಿನಾಯಿತಿ: ಆಸ್ತಿತೆರಿಗೆ ವಿಳಂಬ ಪಾವತಿ ಮೇಲಿನ ಬಡ್ಡಿ, ಕಲಂ 144 (15) ಖಂಡ (ಬಿ)ರ ಪ್ರಕಾರ ವಂಚಿಸಿದ ತೆರಿಗೆ ಮೇಲಿನ ಬಡ್ಡಿ ಹಾಗೂ ಆಸ್ತಿ ತೆರಿಗೆ ನಿಗದಿಯಾದ ಹಾಗೂ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಸ್ವತ್ತುಗಳಿಗೆ ವಿಧಿಸುವ ಬಡ್ಡಿ, ಈ ಮೂರು ಪ್ರಕರಣಗಳಲ್ಲಿ ಬಡ್ಡಿ ಮೊತ್ತವನ್ನು ವಿನಾಯಿತಿ ನೀಡಲಾಗಿದೆ. ತೆರಿಗೆ ವಂಚನೆ ಪ್ರಕರಣಗಳಲ್ಲಿ ಅಥವಾ ಆಸ್ತಿ ತೆರಿಗೆ ಬಾಕಿಯಿರುವ ಸ್ವತ್ತುಗಳಿಗೆ ಈಗಾಗಲೇ ನೀಡಿರುವ ಬೇಡಿಕೆಗೆ ಸಂಪೂರ್ಣ ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಪ್ರಕರಣಗಳಲ್ಲಿ ಅದರ ಮೇಲೆ ಪಾವತಿ ಮಾಡಬೇಕಾದ ಬಡ್ಡಿ ಹಾಗೂ ದಂಡಗಳ ಮೇಲೆ ಸರ್ಕಾರದ ಆದೇಶ ಅನ್ವಯವಾಗಲಿದೆ.

ಸರ್ಕಾರ ಹೊರಡಿರುವ ಈ ಆದೇಶ ಜು.31ರವರೆಗೆ ಜಾರಿಯಲ್ಲಿರಲಿದೆ. ಈಗಾಗಲೇ ಪಾವತಿಸಿದ ಆಸ್ತಿ ತೆರಿಗೆ, ಬಡ್ಡಿ ಅಥವಾ ದಂಡವನ್ನು ಮರುಪಾವತಿ ಅಥವಾ ಮುಂಬರುವ ಸಾಲಿನ ತೆರಿಗೆಗೆ ಅಥವಾ ಬಿಬಿಎಂಪಿಯ ಇತರೆ ವಿಧಿಸುವಿಕೆಗಳಿಗೆ ಹೊಂದಾಣಿಕೆ ಮಾಡಲಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಂದು ಬಾರಿ ತೀರುವಳಿ ಆನ್‌ಲೈನ್‌ ಮೂಲಕ ಪಾವತಿಸಲು ಅವಕಾಶ: 

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರು ಸರ್ಕಾರದ ಆದೇಶದಂತೆ “ಒನ್‌ ಟೈಮ್‌ ಸೆಟ್ಲ ಮೆಂಟ್‌'(ಒಟಿಎಸ್‌) ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು, ಆನ್‌ಲೈನ್‌ ಮೂಲಕವೂ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರವು ಫೆ.22ರಂದು ಒಟಿಎಸ್‌ ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್‌ಲೈನ್‌ ಮೂಲಕ ಪಾವತಿಸುವ ಸಾಫ್ಟ್ವೇರ್‌ನಲ್ಲಿ ಒಟಿಎಸ್‌ಅನ್ನು ಪಾವತಿಸಲು ಅವಕಾಶ ಕಲ್ಪಿಸಿದೆ.

ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ.50ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಠ 5 ವರ್ಷಗಳ ಮಿತಿ  ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.

ಪಾಲಿಕೆಯ ಅಧಿಕೃತ ವೆಬ್‌ ಸೈಟ್‌ https://bbmptax.karnataka.gov.in  ಗೆ ಭೇಟಿ ನೀಡಿ, ಒಟಿಎಸ್‌ನ ಸಂಪೂರ್ಣ ಪ್ರಯೋಜನ ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.

 

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.